AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amavasya Rituals: ಅಮಾವಾಸ್ಯೆ ದಿನ ಪಿತೃ ದೋಷ ನಿವಾರಣೆಗೆ ಗಾಯತ್ರಿ ಜಪ ಮಾಡಿ

ಅಮಾವಾಸ್ಯೆಯು ಹಿಂದೂಗಳಲ್ಲಿ ಹೆಚ್ಚಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ದಿನ ಮಂತ್ರ ಪಠಿಸುವುದು, ಹವನ ಮಾಡುವುದು, ದಾನದಂತಹ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ಮಾಡಲು ಶುಭವಾಗಿದೆ. ಇದರ ಹೊರತಾಗಿ ಅಮಾವಾಸ್ಯೆಯಂದು ಪೂರ್ವಜರನ್ನು ಪೂಜಿಸಲು ಮೀಸಲಿಡಲಾಗಿದೆ ಆದ್ದರಿಂದ ಜನರು ಪಿತೃ ದೋಷದ ನಿವಾರಣೆ ಮಾಡಿಕೊಳ್ಳಲು ಮತ್ತು ಪೂಜೆಯನ್ನು ಮಾಡಲು ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

Amavasya Rituals: ಅಮಾವಾಸ್ಯೆ ದಿನ ಪಿತೃ ದೋಷ ನಿವಾರಣೆಗೆ ಗಾಯತ್ರಿ ಜಪ ಮಾಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 09, 2024 | 5:04 PM

Share

ಹಿಂದೂ ಪಂಚಾಂಗದ ಪ್ರಕಾರ, ಪ್ರತಿ ತಿಂಗಳು ಕೃಷ್ಣ ಪಕ್ಷದ ಕೊನೆಯ ದಿನವನ್ನು ಅಮಾವಾಸ್ಯೆಯೆಂದು ಆಚರಣೆ ಮಾಡಲಾಗುತ್ತದೆ. ಇನ್ನು ಧರ್ಮ ಗ್ರಂಥಗಳಲ್ಲಿ ಅಮಾವಾಸ್ಯೆ ತಿಥಿ ಬಹಳ ಮುಖ್ಯವಾಗಿದ್ದು, ಈ ದಿನವನ್ನು ಪಿತೃಗಳ ದಿನ ಎಂದು ನಂಬಲಾಗಿದೆ. ಮಾರ್ಚ್ ತಿಂಗಳ ಅಂದರೆ ಮಾಘ ಮಾಸದ ಅಮಾವಾಸ್ಯೆಯನ್ನು ಮಾರ್ಚ್ 10 ರಂದು, ಭಾನುವಾರ ಆಚರಣೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಅಮಾವಾಸ್ಯೆಯು ಹಿಂದೂಗಳಲ್ಲಿ ಹೆಚ್ಚಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ದಿನ ಮಂತ್ರ ಪಠಿಸುವುದು, ಹವನ ಮಾಡುವುದು, ದಾನದಂತಹ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ಮಾಡಲು ಶುಭವಾಗಿದೆ. ಇದರ ಹೊರತಾಗಿ ಅಮಾವಾಸ್ಯೆಯಂದು ಪೂರ್ವಜರನ್ನು ಪೂಜಿಸಲು ಮೀಸಲಿಡಲಾಗಿದೆ ಆದ್ದರಿಂದ ಜನರು ಪಿತೃ ದೋಷದ ನಿವಾರಣೆ ಮಾಡಿಕೊಳ್ಳಲು ಮತ್ತು ಪೂಜೆಯನ್ನು ಮಾಡಲು ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

ಈ ತಿಂಗಳ ಮಾರ್ಚ್ 10 ರಂದು ಅಮಾವಾಸ್ಯೆ ತಿಥಿಯನ್ನು ಆಚರಣೆ ಮಾಡಲಾಗುತ್ತದೆ. ಮಾಘ ಅಮಾವಾಸ್ಯೆ ಮಾ. 9 ರಂದು ಸಂಜೆ 06:17ಕ್ಕೆ ಪ್ರಾರಂಭವಾಗಿ, ಮಾ.10 ರಂದು ಮಧ್ಯಾಹ್ನ 02:29ಕ್ಕೆ ಅಮಾವಾಸ್ಯೆ ತಿಥಿ ಕೊನೆಗೊಳ್ಳುತ್ತದೆ.

ಮಾಘ ಅಮಾವಾಸ್ಯೆ ಮಹತ್ವ:

ಮಾಘ ಅಮಾವಾಸ್ಯೆ ಹಿಂದೂ ಧರ್ಮದಲ್ಲಿ ತನ್ನದೇ ಆದ ಧಾರ್ಮಿಕ ಮಹತ್ವವನ್ನು ಹೊಂದಿದೆ. ಈ ದಿನ, ಭಕ್ತರು ಗಂಗಾ ನದಿಯಲ್ಲಿ ಸ್ನಾನ ಮಾಡಲು, ಹವನ ಮತ್ತು ಯಜ್ಞ- ಯಾಗಾದಿಗಳನ್ನು ಮಾಡಲು ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಾರೆ ಮತ್ತು ಈ ದಿನದಂದು ಪಿತೃ ಪೂಜೆ ಮಾಡುವ ಮೂಲಕ ಪೂರ್ವಜರ ಆಶೀರ್ವಾದವನ್ನು ಪಡೆಯುತ್ತಾರೆ. ಅಲ್ಲದೆ ಈ ದಿನ ಜನರು ಶ್ರಾದ್ದ ಆಚರಣೆಗಳನ್ನು ಕೂಡ ಮಾಡುತ್ತಾರೆ ಮತ್ತು ಆಹಾರ ದಾನ ಮಾಡುವ ಮೂಲಕ ಪುಣ್ಯ ಫಲಗಳನ್ನು ಪಡೆದುಕೊಳ್ಳುತ್ತಾರೆ.

ಇದನ್ನೂ ಓದಿ: ಹಿಂದೂ ಪುರಾಣದ ಪ್ರಕಾರ ರಾತ್ರಿ ಗೂಬೆಯನ್ನು ನೋಡಿದರೆ ಶುಭವೋ ಅಶುಭವೋ?

ಮಾಘ ಅಮಾವಾಸ್ಯೆಯ ಆಚರಣೆಗಳು:

  1. ಮುಂಜಾನೆ ಎದ್ದು ಸ್ನಾನ ಮಾಡಿ.
  2. ಈ ದಿನ ಪಿತೃದೋಷ ನಿವಾರಣೆಗೆ ಅಗತ್ಯವಿರುವ ಪೂಜೆಗಳನ್ನು ದೇವಸ್ಥಾನಗಳಲ್ಲಿ ಮಾಡಿಸಬಹುದು.
  3. ಅಮಾವಾಸ್ಯೆಯ ದಿನ ದಾನ ಮಾಡುವುದು ತುಂಬಾ ಒಳ್ಳೆಯದು. ಅಗತ್ಯವಿರುವ ಜನರಿಗೆ ಆಹಾರ ಮತ್ತು ಬಟ್ಟೆಗಳನ್ನು ದಾನ ಮಾಡಬಹುದು.
  4. ಈ ದಿನ ತಪ್ಪದೇ ಭಗವದ್ಗೀತೆ ಮತ್ತು ರಾಮಚರಿತಮಾನಸಗಳನ್ನು ಓದುವುದರಲ್ಲಿ ತೊಡಗಿಸಿಕೊಳ್ಳಬಹುದು.
  5. ಈ ದಿನ ಪಿತೃ ದೋಷ ಮತ್ತು ದುಷ್ಟ ಶಕ್ತಿಗಳ ನಿವಾರಣೆಗೆ ಗಾಯತ್ರಿ ಜಪವನ್ನು ಮಾಡಬಹುದು. ಇದರಿಂದ ಜಾತಕ ದೋಷವು ನಿವಾರಣೆಯಾಗುತ್ತದೆ.
  6. ಈ ದಿನ ಮಾಂಸಾಹಾರ ತ್ಯಜಿಸುವುದು ಒಳ್ಳೆಯದು.
  7. ಮನೆಯ ಬಳಿ ಶಿವನ ದೇವಾಲಯ ಇರುವವರು ದಿನದಲ್ಲಿ ಒಮ್ಮೆಯಾದರೂ ಭೇಟಿ ನೀಡಿ ರುದ್ರಾಭಿಷೇಕ ಮಾಡಿಸಿ. ಇದರಿಂದ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ.
  8. ಆರ್ಥಿಕ ನಷ್ಟ ಅನುಭವಿಸುತ್ತಿರುವವರು ಶಿವನಿಗೆ 4 ಅಮಾವಾಸ್ಯೆಯಂದು ಬಿಲ್ವಪತ್ರೆಯನ್ನು ಅರ್ಪಿಸಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್