AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Chaturdashi 2023: ಅನಂತ ಚತುರ್ದಶಿ ಯಾವಾಗ? ಸಮಯ, ಪೂಜಾ ಆಚರಣೆ, ಮಹತ್ವ ಬಗ್ಗೆ ಇಲ್ಲಿದೆ ಮಾಹಿತಿ

ಅನಂತ ಚತುರ್ದಶಿ 2023: ಅನಂತ ಚತುರ್ದಶಿ ವಿಷ್ಣುವನ್ನು ಪೂಜಿಸಲು ಸಮರ್ಪಿತವಾದ ಪ್ರಮುಖ ಹಿಂದೂ ಹಬ್ಬವಾಗಿದೆ. ಈ ದಿನ ಅನಂತನನ್ನು ಪೂಜಿಸುವ ಮೂಲಕ ಹಬ್ಬವನ್ನು ಆಚರಿಸಲಾಗುತ್ತದೆ. ಅಲ್ಲದೆ ಈ ದಿನ, ಗಣೇಶ ವಿಸರ್ಜನೆಯನ್ನು ಸಹ ಮಾಡಲಾಗುತ್ತದೆ. ಈ ದಿನವನ್ನು ಯಾವಾಗ ಆಚರಣೆ ಮಾಡಲಾಗುತ್ತದೆ? ಪೂಜಾ ಆಚರಣೆ ಮತ್ತು ಮಹತ್ವ ಬಗ್ಗೆ ಇಲ್ಲಿದೆ ಮಾಹಿತಿ.

Anant Chaturdashi 2023: ಅನಂತ ಚತುರ್ದಶಿ ಯಾವಾಗ? ಸಮಯ, ಪೂಜಾ ಆಚರಣೆ, ಮಹತ್ವ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 27, 2023 | 6:43 PM

Share

ಹಿಂದೂ ಧರ್ಮದಲ್ಲಿ ಅನಂತ ಚತುರ್ದಶಿಗೆ (Anant Chaturdashi) ಹೆಚ್ಚಿನ ಮಹತ್ವವಿದೆ. ಈ ದಿನವನ್ನು ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗಿದ್ದು ಬ್ರಹ್ಮಾಂಡದ ಸಂರಕ್ಷಕನಾದ ವಿಷ್ಣುವನ್ನು ಈ ದಿನ ಪೂಜಿಸಲಾಗುತ್ತದೆ. ದ್ರಿಕ್ ಪಂಚಾಂಗದ ಪ್ರಕಾರ, ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ದಶಿ ತಿಥಿಯಂದು ಅನಂತ ಚತುರ್ದಶಿಯನ್ನು ಆಚರಿಸಲಾಗುತ್ತದೆ. ಈ ವರ್ಷ, ಅನಂತ ಚತುರ್ದಶಿ ಸೆಪ್ಟೆಂಬರ್ 28 ರಂದು ಆಚರಣೆ ಮಾಡಲಾಗುತ್ತದೆ. ಅನಂತ ಚತುರ್ದಶಿಯ ಪೂಜಾ ಮುಹೂರ್ತ ಬೆಳಿಗ್ಗೆ 05:37 ಕ್ಕೆ ಆರಂಭವಾಗಿ ಸಂಜೆ 06: 49 ಕ್ಕೆ ಕೊನೆಗೊಳ್ಳಲಿದೆ.

ಅನಂತ ಚತುರ್ದಶಿ ಹಬ್ಬದ ಮಹತ್ವ:

ಅನಂತ ಚತುರ್ದಶಿ ಹಿಂದೂಗಳಲ್ಲಿ ಅಪಾರ ಮಹತ್ವವನ್ನು ಹೊಂದಿದೆ. ಅಂದು ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿಯೂ ಬಹಳ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುವ ಒಂದು ಮಹತ್ವದ ಹಿಂದೂ ಹಬ್ಬವಾಗಿದೆ. ಈ ಶುಭ ದಿನವನ್ನು ವಿಷ್ಣುವನ್ನು ಪೂಜಿಸಲು ಅರ್ಪಿಸಲಾಗುತ್ತದೆ. ಭಗವಾನ್ ವಿಷ್ಣುವನ್ನು ಅನಂತ ಎಂದೂ ಕರೆಯುತ್ತಾರೆ, ಅಂದರೆ ಅಂತ್ಯವಿಲ್ಲ ಎಂಬ ಅರ್ಥ ನೀಡುತ್ತದೆ. ಹಿಂದೂ ಪುರಾಣಗಳ ಪ್ರಕಾರ, ಭಗವಾನ್ ವಿಷ್ಣು, ಅನಂತನ ರೂಪದಲ್ಲಿ ಸರ್ಪದ ಮೇಲೆ ಮಲಗುತ್ತಾನೆ ಮತ್ತು ಕ್ಷೀರ ಸಾಗರದಲ್ಲಿ (ಕ್ಷೀರ ಸಾಗರ) ನಿದ್ರೆಯಲ್ಲಿದ್ದಾಗ, ಅನಂತ ಎಂಬ ಸರ್ಪವು ಸುಮಂತ್ ಎಂಬ ಬ್ರಾಹ್ಮಣನಿಗೆ ವಿಷ್ಣುವಿನ ಕಥೆಯನ್ನು ವಿವರಿಸಲು ಪ್ರಾರಂಭಿಸಿತು ಎಂದು ನಂಬಲಾಗಿದೆ. ನಂತರ ವಿಷ್ಣುವಿನ ಕಥೆಗೆ “ಅನಂತ” ಎಂಬ ಹೆಸರು ಬಂದಿತು ಎನ್ನಲಾಗುತ್ತದೆ.

ಇದನ್ನೂ ಓದಿ: ಅನಂತ ಚತುರ್ದಶಿ ದಿನಾಂಕ, ಪೂಜಾ ವಿಧಾನ, ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ಈ ಶುಭ ದಿನದಂದು, ಜನರು ಉಪವಾಸವನ್ನು ಆಚರಿಸುತ್ತಾರೆ ಮತ್ತು ಅನಂತನನ್ನು ಹೆಚ್ಚಿನ ಭಕ್ತಿ ಮತ್ತು ಸಮರ್ಪಣೆಯಿಂದ ಪೂಜಿಸುತ್ತಾರೆ. ಅಲ್ಲದೆ ಕಾಲ ಸರ್ಪ ದೋಷದಿಂದ ಬಳಲುತ್ತಿರುವ ಜನರು, ಸರ್ಪ ದೇವರನ್ನು ಮತ್ತು ವಿಷ್ಣುವನ್ನು ಪೂಜಿಸಬೇಕು ಮತ್ತು ಅದನ್ನು ತೊಡೆದು ಹಾಕಲು ಅವರ ಆಶೀರ್ವಾದವನ್ನು ಪಡೆಯಬೇಕು ಎಂದು ನಂಬಲಾಗಿದೆ. ಜೊತೆಗೆ ಅನಂತ ಚತುರ್ದಶಿಯಂದು, ಗಣೇಶ ವಿಸರ್ಜನೆಯನ್ನು ಬಹಳ ಆಡಂಬರದಿಂದ ಆಚರಿಸಲಾಗುತ್ತದೆ ಮತ್ತು ಗಣಪತಿಯನ್ನು ಭಕ್ತಿಯಿಂದ ಮುಳುಗಿಸಲಾಗುತ್ತದೆ. 10 ದಿನಗಳ ಕಾಲ ಗಣೇಶನನ್ನು ಪೂಜಿಸಿದ ನಂತರ, 11 ನೇ ದಿನ ಮುಂದಿನ ವರ್ಷ ಮತ್ತೆ ಬಾ ಎಂದು ಪ್ರೀತಿಯಿಂದ ಹೇಳುವ ಮೂಲಕ ಗಣೇಶನಿಗೆ ವಿದಾಯ ಹೇಳಲಾಗುತ್ತದೆ.

ಅನಂತ ಚತುರ್ದಶಿಯಂದು ಯಾವ ಮಂತ್ರ ಪಠಿಸಬೇಕು?

1. ಓಂ ನಮೋ ಭಗವತೇ ವಾಸುದೇವಾಯ

2. ಶ್ರೀ ಕೃಷ್ಣ ಗೋವಿಂದ ಹರೇ ಮುರಾರಿ ಹೇ ನಾಥ್ ನಾರಾಯಣ್ ವಾಸುದೇವ ಈ ಮಂತ್ರವನ್ನು ಅನಂತ ಚತುರ್ದಶಿಯಂದು ಪಠಣೆ ಮಾಡುವುದರಿಂದ ವಿಷ್ಣುವಿನ ಅನುಗ್ರಹವಾಗುತ್ತದೆ. ಜೊತೆಗೆ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ