AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಂ ಪರಬ್ರಹ್ಮ ಸ್ವರೂಪಂ: ಅನ್ನವನ್ನು ಗೌರವಿಸಿ, ನಿಮಗೆ ಎಂದಿಗೂ ಹಣದ ಕೊರತೆ ಎದುರಾಗುವುದಿಲ್ಲ

Chanakya Niti: ಆಚಾರ್ಯ ಚಾಣಕ್ಯರ ಪ್ರಕಾರ ಯಾರೇ ಆಗಲಿ ಯಾವಾಗಲೂ ಜ್ಞಾನಿಗಳ ಸಹವಾಸವನ್ನು ಇಟ್ಟುಕೊಳ್ಳಬೇಕು ಮತ್ತು ಅವರನ್ನು ಗೌರವಿಸಬೇಕು. ಆಚಾರ್ಯ ಚಾಣಕ್ಯ ಕೂಡ ಹೇಳುವಂತೆ ಬುದ್ಧಿವಂತ ಜನರನ್ನು ಗೌರವಿಸುವ ಮನೆಗಳಿಗೆ ಲಕ್ಷ್ಮಿ ದೇವಿಯೇ ಬರುತ್ತಾಳೆ.

ಅನ್ನಂ ಪರಬ್ರಹ್ಮ ಸ್ವರೂಪಂ: ಅನ್ನವನ್ನು ಗೌರವಿಸಿ, ನಿಮಗೆ ಎಂದಿಗೂ ಹಣದ ಕೊರತೆ ಎದುರಾಗುವುದಿಲ್ಲ
ಅನ್ನವನ್ನು ಗೌರವಿಸಿ, ಎಂದಿಗೂ ಹಣದ ಕೊರತೆ ಇರುವುದಿಲ್ಲ
ಸಾಧು ಶ್ರೀನಾಥ್​
|

Updated on:Oct 08, 2024 | 12:07 PM

Share

ಆಚಾರ್ಯ ಚಾಣಕ್ಯರಿಗೆ ಪುಸ್ತಕಗಳಿಗೆ ಸೀಮಿತವಾದ ವಿಷಯಗಳ ಬಗ್ಗೆ ಮಾತ್ರವಲ್ಲದೆ ಜೀವನದ ಒಳ್ಳೆಯ ಮತ್ತು ಕೆಟ್ಟ ಸನ್ನಿವೇಶಗಳ ಅನುಭವವೂ ಇತ್ತು. ಅವರು ಜೀವನದ ಪ್ರತಿಯೊಂದು ಅಂಶಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಚಾಣಕ್ಯ ಮಾನವ ಕಲ್ಯಾಣಕ್ಕಾಗಿ ಚಾಣಕ್ಯ ನೀತಿಯನ್ನು (Chanakya Niti) ರಚಿಸಿದ. ಅದರಲ್ಲಿ ಅವನು ರಾಜಕೀಯ, ಯುದ್ಧ ಮತ್ತು ಜನರೊಂದಿಗೆ ಸಮಾನತೆಯನ್ನು ಕಾಪಾಡಿಕೊಳ್ಳಲು ಮಾರ್ಗದರ್ಶನ ನೀಡುತ್ತಾನೆ. ಅವರು ತಮ್ಮ ನೀತಿಶಾಸ್ತ್ರದಲ್ಲಿ ಮಾನವ ಜೀವನದ ಅನೇಕ ಅಂಶಗಳ ಮೇಲೆ ವಿವರವಾಗಿ ಬೆಳಕು ಚೆಲ್ಲಿದ್ದಾರೆ. ಚಾಣಕ್ಯನ ನೀತಿಗಳು ಇಂದಿಗೂ ಪ್ರಸ್ತುತವಾಗಿವೆ. ಆಚಾರ್ಯ ಚಾಣಕ್ಯ ತಮ್ಮ ನೀತಿಗಳಲ್ಲಿ ಸದ್ಗುಣಗಳನ್ನು (Respect Food) ಸಾದ್ಯಂತವಾಗಿ ವಿವರವಾಗಿ ಉಲ್ಲೇಖಿಸಿದ್ದಾರೆ. ಅವರ ಪ್ರಕಾರ, ಒಬ್ಬ ವ್ಯಕ್ತಿಯು ಕೆಲವು ನಿರ್ದಿಷ್ಟ ಗುಣಗಳನ್ನು ಹೊಂದಿದ್ದರೆ ಅವು ಆತನನ್ನು ಯಶಸ್ವಿನತ್ತ ಕೊಂಡೊಯ್ಯುತ್ತದೆ. ಅಂತಹ ಜನರೊಂದಿಗೆ ಲಕ್ಷ್ಮಿ ದೇವಿಯು ಸದಾ ಸಂತೋಷವಾಗಿರುತ್ತಾಳೆ.

ಆಹಾರವನ್ನು ಗೌರವಿಸುವುದು ಆಚಾರ್ಯ ಚಾಣಕ್ಯರ ಪ್ರಕಾರ ಆಹಾರವನ್ನು ಸದಾ ಗೌರವಿಸುವ ಮನೆಗಳಲ್ಲಿ, ಯಾವುದಕ್ಕೂ ಯಾವುದೇ ಕೊರತೆ ಇರುವುದಿಲ್ಲ. ಲಕ್ಷ್ಮಿ ದೇವಿಯ ಅನುಗ್ರಹದಿಂದ ಅಂತಹ ಮನೆಗಳು ಸದಾ ಸಮೃದ್ಧಿಯಾಗಿರುತ್ತವೆ. ಅನ್ನಮ್ ಪರಬ್ರಹ್ಮ ಸ್ವರೂಪಂ -Annam Parabrahma Swaroopam. ಆಹಾರವನ್ನು ಗೌರವಿಸದ ಅಥವಾ ಆಹಾರವನ್ನು ವ್ಯರ್ಥ ಮಾಡುವ ಮನೆಗಳಲ್ಲಿ ತಾಯಿ ಲಕ್ಷ್ಮಿ ಮತ್ತು ಅನ್ನಪೂರ್ಣ ಎಂದಿಗೂ ವಾಸಿಸುವುದಿಲ್ಲ.

ಬುದ್ಧಿವಂತ ಜನರಿಗೆ ಗೌರವ ಕೊಡುವುದೆಂದರೆ… ಆಚಾರ್ಯ ಚಾಣಕ್ಯರ ಪ್ರಕಾರ ಯಾರೇ ಆಗಲಿ ಯಾವಾಗಲೂ ಜ್ಞಾನಿಗಳ ಸಹವಾಸವನ್ನು ಇಟ್ಟುಕೊಳ್ಳಬೇಕು ಮತ್ತು ಅವರನ್ನು ಗೌರವಿಸಬೇಕು. ಆಚಾರ್ಯ ಚಾಣಕ್ಯ ಕೂಡ ಹೇಳುವಂತೆ ಬುದ್ಧಿವಂತ ಜನರನ್ನು ಗೌರವಿಸುವ ಮನೆಗಳಿಗೆ ಲಕ್ಷ್ಮಿ ದೇವಿಯೇ ಬರುತ್ತಾಳೆ. ಮೂರ್ಖ ಜನರು ನಿಮಗೆ ಸಮಸ್ಯೆಗಳನ್ನು ಸೃಷ್ಟಿಸಬಹುದು.

Also Read: ಚಾಣಕ್ಯನ ಈ ನೀತಿಗಳು ನಿಮ್ಮ ಹಣೆಬರಹವನ್ನು ಬದಲಾಯಿಸಬಲ್ಲದು, ಜೀವನದಲ್ಲಿ ಇವುಗಳನ್ನು ಪಾಲಿಸಿ

ಈ ಅಭ್ಯಾಸ ತಪ್ಪು ಆಚಾರ್ಯ ಚಾಣಕ್ಯರ ಪ್ರಕಾರ ಕೆಲವರು ತಮ್ಮ ಧ್ಯೇಯೋದ್ದೇಶಗಳನ್ನು ಇತರರಿಗೆ ಹೇಳುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ತಮ್ಮ ಗುರಿಯ ಬಗ್ಗೆ ಎಲ್ಲರ ಮುಂದೆ ಹೇಳುವ ವ್ಯಕ್ತಿಗೆ ಯಶಸ್ಸು ಸಿಗುವುದು ಕಷ್ಟ.

ಎಂದಿಗೂ ಸೋಲು ಒಪ್ಪುವುದಿಲ್ಲ ಒಬ್ಬ ವ್ಯಕ್ತಿಯು ತನ್ನ ಅದೃಷ್ಟವನ್ನು ಮಾತ್ರ ಅವಲಂಬಿಸಬಾರದು, ಏಕೆಂದರೆ ಯಾರೇ ಆಗಲಿ ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಮೂಲಕ ಮಾತ್ರ ತಮ್ಮ ಭಾಗ್ಯವನ್ನು ಸಾಧಿಸಿಕೊಳ್ಳುತ್ತಾನೆ. ಆದ್ದರಿಂದಲೇ ಆಚಾರ್ಯ ಚಾಣಕ್ಯರು ಎಷ್ಟೇ ಕಠಿಣ ಪರಿಸ್ಥಿತಿ ಬಂದರೂ ಎಂದಿಗೂ ಸೋಲನ್ನು ಒಪ್ಪಬಾರದು ಎನ್ನುತ್ತಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:29 am, Sat, 2 March 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು