AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiruvannamalai: ತಿರುವಣ್ಣಾಮಲೈ ಅರುಣಾಚಲೇಶ್ವರ ದೇವಾಲಯದಲ್ಲಿ ಮೊಬೈಲ್ ನಿಷೇಧ; ಸೆ.01 ರಿಂದ ಹೊಸ ನಿಯಮ ಜಾರಿ!

ತಮಿಳುನಾಡಿನ ತಿರುವಣ್ಣಾಮಲೈ ಅಣ್ಣಾಮಲೈಯರ್ ದೇವಾಲಯದಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್‌ಗಳ ನಿಷೇಧ ಜಾರಿಗೆ ಬರಲಿದೆ. ದೇವಾಲಯದ ಪಾವಿತ್ರ್ಯ ಕಾಪಾಡಲು, ಗರ್ಭಗುಡಿಯಲ್ಲಿ ಫೋಟೋ ಹಾಗೂ ವೀಡಿಯೋ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಆಡಳಿತ ಮಂಡಳಿ ಎಚ್ಚರಿಸಿದೆ.

Tiruvannamalai: ತಿರುವಣ್ಣಾಮಲೈ ಅರುಣಾಚಲೇಶ್ವರ ದೇವಾಲಯದಲ್ಲಿ ಮೊಬೈಲ್ ನಿಷೇಧ; ಸೆ.01 ರಿಂದ ಹೊಸ ನಿಯಮ ಜಾರಿ!
ತಿರುವಣ್ಣಾಮಲೈ ಅರುಣಾಚಲೇಶ್ವರ ದೇವಾಲಯImage Credit source: Getty Images
ಅಕ್ಷತಾ ವರ್ಕಾಡಿ
|

Updated on:Aug 21, 2026 | 4:35 PM

Share

ತಮಿಳುನಾಡಿನ ಪ್ರಸಿದ್ಧ ಕ್ಷೇತ್ರವಾದ ತಿರುವಣ್ಣಾಮಲೈಯ ಅಣ್ಣಾಮಲೈಯರ್ (ಅರುಣಾಚಲಂ) ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ದೇವಾಲಯ ಆಡಳಿತ ಮಂಡಳಿ ಪ್ರಮುಖ ಸೂಚನೆಯೊಂದನ್ನು ನೀಡಿದೆ. ದೇವಾಲಯದ ಪಾವಿತ್ರ್ಯವನ್ನು ರಕ್ಷಿಸುವ ಮತ್ತು ಗರ್ಭಗುಡಿಯ ಪ್ರದೇಶದಲ್ಲಿ ಫೋಟೋ, ವಿಡಿಯೋ ಹಾಗೂ ರೀಲ್ಸ್ ಚಿತ್ರೀಕರಣವನ್ನು ತಡೆಯುವ ಉದ್ದೇಶದಿಂದ ಸೆಪ್ಟೆಂಬರ್ 1 ರಿಂದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ತಮಿಳುನಾಡು ದೇವಾಲಯಗಳಲ್ಲಿ ಕಟ್ಟುನಿಟ್ಟಿನ ಆಚಾರ-ಸಂಪ್ರದಾಯ ರಕ್ಷಣೆ:

ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ದೇವಾಲಯಗಳ ಆಗಮ ಸಂಪ್ರದಾಯಗಳನ್ನು ಕಾಪಾಡಲು ಈ ಕ್ರಮ ಕೈಗೊಂಡಿದೆ. ದರ್ಶನದ ವೇಳೆ ಭಕ್ತರು ಕ್ಯಾಮೆರಾ ಅಥವಾ ಫೋನ್ ಬಳಸಿ ಸಮಯ ವ್ಯರ್ಥ ಮಾಡುವುದನ್ನು ಮತ್ತು ದರ್ಶನಕ್ಕೆ ಅಡ್ಡಿಪಡಿಸುವುದನ್ನು ತಡೆಯುವುದು ಇದರ ಮುಖ್ಯ ಉದ್ದೇಶ. ಜೊತೆಗೆ, ಸೆಲೆಬ್ರಿಟಿಗಳು ಹಾಗೂ ವಿಐಪಿಗಳು ಭೇಟಿ ನೀಡಿದಾಗ ಫೋಟೋ-ವಿಡಿಯೋ ತೆಗೆಯುವುದರ ಮೇಲೆಯೂ ವಿಶೇಷ ನಿರ್ಬಂಧ ವಿಧಿಸಲಾಗಿದ್ದು, ವಿಐಪಿ ಭೇಟಿಯ ಮಾಹಿತಿಯನ್ನು ಮುಂಚಿತವಾಗಿ ನೀಡಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಅಷ್ಟಲಕ್ಷ್ಮಿ ರಾಜಯೋಗ; ಈ 4 ರಾಶಿಗೆ ಒಲಿಯಲಿದೆ ಅಪಾರ ಧನಸಂಪತ್ತು!

ಫೋನ್ ಇಡಲು ಭದ್ರತಾ ಕೇಂದ್ರಗಳು ಮತ್ತು ಶುಲ್ಕದ ವಿವರ:

ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೊಬೈಲ್ ಫೋನ್‌ಗಳನ್ನು ಸುರಕ್ಷಿತವಾಗಿಡಲು ದೇವಾಲಯದ ಪ್ರಮುಖ ಗೋಪುರಗಳ ಬಳಿ ವಿಶೇಷ ಭದ್ರತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ:

  • ರಾಜಗೋಪುರ (ಪೂರ್ವ ಭಾಗ): 2 ಸಂಚಾರಿ ಭದ್ರತಾ ಕೇಂದ್ರಗಳು.
  • ಅಮ್ಮನ್ ಗೋಪುರ (ಉತ್ತರ ಭಾಗ): 2 ಭದ್ರತಾ ಕೇಂದ್ರಗಳು.
  • ತಿರುಮಂಜನ ಗೋಪುರ (ದಕ್ಷಿಣ ಭಾಗ): 1 ಭದ್ರತಾ ಕೇಂದ್ರ.

ಪ್ರತಿ ಮೊಬೈಲ್ ಫೋನ್‌ಗೆ 5 ರೂ. ಶುಲ್ಕ ಪಾವತಿಸಿ, ಟೋಕನ್ ಪಡೆದು ಫೋನ್ ಹಸ್ತಾಂತರಿಸಬಹುದು. ದರ್ಶನ ಮುಗಿದ ನಂತರ ಟೋಕನ್ ತೋರಿಸಿ ಫೋನ್ ಮರಳಿ ಪಡೆಯಬಹುದು.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:

ದೇವಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತದೆ. ನಿಯಮ ಮೀರಿ ಮೊಬೈಲ್ ಫೋನ್ ಒಳಗೆ ಒಯ್ದು ಬಳಸುವುದು ಕಂಡುಬಂದರೆ, ತಕ್ಷಣವೇ ಫೋನ್ ವಶಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಲಾಗುವುದು ಮತ್ತು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಡಳಿತ ಮಂಡಳಿ ಎಚ್ಚರಿಸಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:31 pm, Fri, 21 August 26

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!