AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಐದು ರಾಶಿಯವರಿಗೆ ಸದಾ ಬಂಗಾರ ಧರಿಸುವುದು ಅದೃಷ್ಟವಂತೆ! ಯಾವ ರಾಶಿಯವರು ಅವರು?

Zodiac sign: ಬುಧ ಅಧಿಪತಿಯ ಕನ್ಯಾ ರಾಶಿಯವರಿಗೆ ಚಿನ್ನದ ಉಂಗುರವಲ್ಲದೆ ಚಿನ್ನದ ಸರ ಅಥವಾ ಬಳೆ ಧರಿಸುವುದು ತುಂಬಾ ಒಳ್ಳೆಯದು. ಇದರೊಂದಿಗೆ, ಜೀವನದ ಸಮಸ್ಯೆಗಳು ಒಂದೊಂದಾಗಿ ಕೊನೆಗೊಳ್ಳುತ್ತವೆ ಮತ್ತು ಪ್ರತಿ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಜೀವನದಲ್ಲಿ ಸಂಪತ್ತು ಮತ್ತು ಐಶ್ವರ್ಯ ಹೆಚ್ಚಾಗುತ್ತದೆ.

ಈ ಐದು ರಾಶಿಯವರಿಗೆ ಸದಾ ಬಂಗಾರ ಧರಿಸುವುದು ಅದೃಷ್ಟವಂತೆ! ಯಾವ ರಾಶಿಯವರು ಅವರು?
ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ! ಯಾವ ರಾಶಿಯವರು ಅವರು?
TV9 Web
| Updated By: ಸಾಧು ಶ್ರೀನಾಥ್​|

Updated on:May 07, 2022 | 9:32 PM

Share

ಜ್ಯೋತಿಷ್ಯ ಶಾಸ್ತ್ರದಲ್ಲಿ ಒಬ್ಬ ವ್ಯಕ್ತಿ ಏನು ಧರಿಸಿದರೆ ಶುಭ, ಏನು ಧರಿಸಿದರೆ ಅಶುಭ ಎಂದು ಕೂಡಾ ಹೇಳಲಾಗಿದೆ. ಅದೃಷ್ಟ ಪಡೆಯಬೇಕಾದರೆ ಏನು ಮಾಡಬೇಕು ಎನ್ನುವುದನ್ನು ಸೂಚಿಸಲಾಗಿದೆ. ಅವರವರ ರಾಶಿಗೆ ಅನುಗುಣವಾಗಿ (Zodiac sign) ಯಾರು ಏನು ಧರಿಸಿದರೆ ಅದೃಷ್ಟ ಎನ್ನುವುದನ್ನು ಹೇಳಲಾಗಿದೆ. ಈ ನಿಟ್ಟಿನಲ್ಲಿ ಕೆಲವು ರಾಶಿಯವರು ಚಿನ್ನ ಧರಿಸಿದರೆ ಅದೃಷ್ಟ ಸದಾ ಅವರ ಜೊತೆಗಿರುತ್ತದೆಯಂತೆ. ಹಾಗಿದ್ದರೆ ಯಾವ ರಾಶಿಯವರುಗೆ ಚಿನ್ನ ಅದೃಷ್ಟ ನೋಡೋಣ..(What zodiac signs should wear gold?)

  1. ಮೇಷ (Aries): ಮೇಷ ರಾಶಿಯವರಿಗೆ ಚಿನ್ನವನ್ನು ಧರಿಸುವುದು ಶುಭ. ವಿಶೇಷವಾಗಿ ಚಿನ್ನದ ಉಂಗುರವನ್ನು ಧರಿಸುವುದರಿಂದ ಅವರ ಧೈರ್ಯ ಮತ್ತು ಶೌರ್ಯ ಹೆಚ್ಚಾಗುತ್ತದೆ. ಅದೃಷ್ಟ ಹೆಚ್ಚಾಗುತ್ತದೆ. ಸಂಬಂಧಗಳು ಬಲವಾಗಿರುತ್ತವೆ. ಸಾಲವಿದ್ದರೂ ಕೂಡಾ ಕೆಲವೇ ದಿನಗಳಲ್ಲಿ ಸಾಲದ ಸಮಸ್ಯೆ ಪರಿಹಾರವಾಗುತ್ತದೆಯಂತೆ.
  2. ಸಿಂಹ (Leo): ಸಿಂಹ ರಾಶಿಯವರಿಗೆ ಚಿನ್ನವು ಅದೃಷ್ಟವನ್ನು ತರುತ್ತದೆ. ಈ ರಾಶಿಯವರು ಚಿನ್ನದ ಆಭರಣಗಳನ್ನು ಅದರಲ್ಲೂ ವಿಶೇಷವಾಗಿ ಚಿನ್ನದ ಉಂಗುರಗಳನ್ನು ಧರಿಸಬೇಕು. ಇದು ಅವರಿಗೆ ಉದ್ಯೋಗ-ವ್ಯವಹಾರದಲ್ಲಿ ಪ್ರಗತಿಯನ್ನು ನೀಡುತ್ತದೆ. ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುತ್ತದೆ. ಹೆಚ್ಚಿನ ಪರಿಶ್ರಮವಿಲ್ಲದೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುತ್ತದೆ.
  3. ಕನ್ಯಾ ರಾಶಿ (Virgo): ಬುಧ ಅಧಿಪತಿಯ ಕನ್ಯಾ ರಾಶಿಯವರಿಗೆ ಚಿನ್ನದ ಉಂಗುರವಲ್ಲದೆ ಚಿನ್ನದ ಸರ ಅಥವಾ ಬಳೆ ಧರಿಸುವುದು ತುಂಬಾ ಒಳ್ಳೆಯದು. ಇದರೊಂದಿಗೆ, ಜೀವನದ ಸಮಸ್ಯೆಗಳು ಒಂದೊಂದಾಗಿ ಕೊನೆಗೊಳ್ಳುತ್ತವೆ ಮತ್ತು ಪ್ರತಿ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಜೀವನದಲ್ಲಿ ಸಂಪತ್ತು ಮತ್ತು ಐಶ್ವರ್ಯ ಹೆಚ್ಚಾಗುತ್ತದೆ.
  4. ಧನು ರಾಶಿ (Sagittarius): ಇವರ ರಾಶ್ಯಾಧಿಪತಿ ಗುರು ಇವರ ಧಾತು ಬಂಗಾರ ಚಿನ್ನವನ್ನು ಧರಿಸುವುದು ತುಂಬಾ ಮಂಗಳಕರ. ಇದು ಅವರಿಗೆ ಎಲ್ಲದರಲ್ಲೂ ಯಶಸ್ಸನ್ನು ನೀಡುತ್ತದೆ. ಗುರು ಗ್ರಹವು ಶುಭ ಫಲಿತಾಂಶಗಳನ್ನು ನೀಡುತ್ತದೆ. ಇದರಿಂದಾಗಿ ಅವರು ಸಾಕಷ್ಟು ಹೆಸರು-ಪ್ರಸಿದ್ಧಿಯನ್ನು ಗಳಿಸುತ್ತಾರೆ. ಅಪಾರ ಸಂಪತ್ತಿನ ಒಡೆಯನಾಗುತ್ತಾರೆ. ಜೀವನದಲ್ಲಿ ಉನ್ನತ ಸ್ಥಾನಮಾನ ಮತ್ತು ಸಂತೋಷದ ಜೀವನವನ್ನು ಪಡೆಯುತ್ತಾರೆ. ಜೀವನದಲ್ಲಿ ಯಾವುದಕ್ಕೂ ಕೊರತೆ ಎದುರಾಗುವುದಿಲ್ಲ. ಸದಾ ಸುಖಿಗಳಾಗಿರುತ್ತಾರೆ.
  5. ಮೀನ ರಾಶಿ (Pisces): ಮೀನರಾಶಿಯವರು ಸಾಧ್ಯವಿರುವಷ್ಟರ ಮಟ್ಟಿಗೆ ಚಿನ್ನ ಧಾರಣೆ ಮಾಡಿದರೆ ಶುಭ ತರುತ್ತದೆ. ಅರ್ಧಕ್ಕೆ ನಿಂತ ಕೆಲಸಕಾರ್ಯಗಳೂ ಪೂರ್ಣಗೊಳ್ಳುವವು. ಕೋಪ ಕಡಿಮೆಯಾಗುತ್ತದೆ. ಆಲೋಚನಾ ಲಹರಿ ಉತ್ತಮವಾಗಿರುತ್ತದೆ. ಶುಭವಾಗಲಿ.-ಡಾ. ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, ವಾಸ್ತುಶಾಸ್ತ್ರಜ್ಞ, 99728 48937

Published On - 9:29 pm, Sat, 7 May 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ