Astrologer Prediction: 2027ಕ್ಕೆ ಭಾರತದ ಮಡಿಲು ಸೇರಲಿದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಖ್ಯಾತ ಜ್ಯೋತಿಷಿ ಭವಿಷ್ಯ

ಜ್ಯೋತಿಷಿ ಶರ್ಮಿಷ್ಠ ಅವರು ಪಿಓಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ಕುರಿತು ಭವಿಷ್ಯ ನುಡಿದಿದ್ದಾರೆ. ಕರಣ್ ವರ್ಮಾ ಎಂಬವರ ಪಾಡ್‌ಕ್ಯಾಸ್ಟ್‌ನಲ್ಲಿ ಶರ್ಮಿಷ್ಠ ಅವರು ಭಾಗಿಯಾಗಿದ್ದು, ಈ ವೇಳೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆ ಹೆಚ್ಚಾಗುವ ಸಾಧ್ಯತೆಯ ಕುರಿತು ಮುನ್ಸೂಚನೆಯನ್ನು ನೀಡಿದ್ದಾರೆ. 2027 ರೊಳಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಮಡಿಲು ಸೇರಲಿದೆ ಎಂದು ಹೇಳಿದ್ದಾರೆ. ಈ ಭವಿಷ್ಯವಾಣಿಯು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Astrologer Prediction: 2027ಕ್ಕೆ ಭಾರತದ ಮಡಿಲು ಸೇರಲಿದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ: ಖ್ಯಾತ  ಜ್ಯೋತಿಷಿ  ಭವಿಷ್ಯ
Astrologer Prediction

Updated on: Jun 30, 2025 | 3:12 PM

ಮಹಾರಾಷ್ಟ್ರದ ಮೂಲದ ಜ್ಯೋತಿಷಿ ಶರ್ಮಿಷ್ಠ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ್ (ಪಿಓಕೆ) ಕುರಿತು ಹೇಳಿದ ಭವಿಷ್ಯವಾಣಿ ಸದ್ಯ ಎಲ್ಲೆಡೆ ಗಮನ ಸೆಳೆಯುತ್ತಿದೆ. ಕರಣ್ ವರ್ಮಾ ಎಂಬವರ ಪಾಡ್‌ಕ್ಯಾಸ್ಟ್‌ನಲ್ಲಿ ಶರ್ಮಿಷ್ಠ ಅವರು ಭಾಗಿಯಾಗಿದ್ದು, ಈ ವೇಳೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮುಂದೇನಾಗಲಿದೆ ಎಂಬುದನ್ನು ವಿವರಿಸಿದ್ದಾರೆ.

ಜ್ಯೋತಿಷಿ ಶರ್ಮಿಷ್ಠ ಅವರು ಅವರ ಪ್ರಕಾರ, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಇನ್ನೂ ಹೆಚ್ಚಾಗಲಿದೆ. ವಿಮಾನಯಾನ ದುರಂತದ ಉಲ್ಲೇಖಿಸಿ, ಭವಿಷ್ಯದಲ್ಲಿ ಇನ್ನಷ್ಟು ಘಟನೆಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಇದಲ್ಲದೇ ಪಾಕಿಸ್ತಾನವು ಒಡೆಯುವ ಸಾಧ್ಯತೆಯಿದ್ದು, ಪಿಓಕೆ 2027ರ ಹೊತ್ತಿಗೆ ಮತ್ತೆ ಭಾರತದ ಮಡಿಲು ಸೇರಲಿದೆ ಎಂದು ಹೇಳಿದ್ದಾರೆ.

ಪಾಡ್‌ಕ್ಯಾಸ್ಟ್‌ನ ವೈರಲ್​​​ ಆದ ಸಣ್ಣ ತುಣುಕು ಇಲ್ಲಿದೆ ನೋಡಿ:

ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಜೋಡಿ ಶವ ಪತ್ತೆ

ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಶರ್ಮಿಷ್ಠ ಅವರು ಈ ಹಿಂದೆ ಅಂದರೆ ಕಳೆದ ವರ್ಷದ ಡಿಸೆಂಬರ್ ನಲ್ಲಿ ವಿಮಾನ ಪತನವಾಗುವ ಸಾಧ್ಯತೆಯ ಕುರಿತು ಭವಿಷ್ಯವನ್ನು ನುಡಿದಿದ್ದರು. ಭಾರತೀಯ ವಿಮಾನಯಾನ ಕ್ಷೇತ್ರದಲ್ಲಿ ಅಭಿವೃದ್ದಿ ಕಾಣಲಿದ್ದು, ಇದರ ಜೊತೆಗೆ ಸುರಕ್ಷತೆ ಮತ್ತು ರಕ್ಷಣೆಯ ಕೊರತೆಯೂ ಎದುರಾಗಲಿದೆ ಎಂದು ಶರ್ಮಿಷ್ಠೆ ಎಚ್ಚರಿಕೆ ನೀಡಿದ್ದರು. ಈ ಟ್ವೀಟ್ ಈಗಾಗಲೇ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us