AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದುವ ಕನಸಿರುತ್ತದೆ. ಜ್ಯೋತಿಷ್ಯದ ಪ್ರಕಾರ, ಒಬ್ಬರ ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಖರೀದಿಸುವ ಯೋಗವಿದೆಯೇ ಎಂದು ಪರೀಕ್ಷಿಸಿಕೊಳ್ಳುವುದು ಮುಖ್ಯ. ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಹೊಂದುವುದಕ್ಕೆ ಪ್ರೋತ್ಸಾಹ ನೀಡುವ ಪ್ರಮುಖ ಗ್ರಹಗಳೆಂದರೆ ಕುಜ (ಮಂಗಳ), ಶುಕ್ರ ಮತ್ತು ಬುಧ. ಈ ಮೂರು ಗ್ರಹಗಳ ಅನುಗ್ರಹವು ಸ್ವಂತ ಮನೆ ಕನಸನ್ನು ನನಸಾಗಿಸಲು ಸಹಾಯಕ.

Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ
ಸ್ವಂತ ಮನೆ
ಅಕ್ಷತಾ ವರ್ಕಾಡಿ
|

Updated on: Dec 23, 2025 | 10:32 AM

Share

ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಆಸೆ ಇರುತ್ತದೆ. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ಗಾದೆಯು ಸ್ವಂತ ಮನೆ ಕಟ್ಟುವುದರ ಶ್ರಮ ಮತ್ತು ಮಹತ್ವವನ್ನು ತಿಳಿಸುತ್ತದೆ. ಸಾಲ ಮಾಡಿ ಮನೆ ಕಟ್ಟಿದರೂ ಅದರಲ್ಲಿ ಶ್ರಮ ಮತ್ತು ಕಷ್ಟ ಇರುತ್ತದೆ. ಅನೇಕರು ಬಾಡಿಗೆ ಮನೆಗಳಲ್ಲಿ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಸಹ ಮನೆ ಕಟ್ಟಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ಗಳಲ್ಲಿ ಅಥವಾ ಬಾಡಿಗೆ ಮನೆಗಳಲ್ಲಿ ಉಳಿದಿರುವುದನ್ನು ಕಾಣಬಹುದು. ಇನ್ನು ಕೆಲವರಿಗೆ ಹಣ ಕೂಡಿಟ್ಟರೂ ಸಹ ಅದನ್ನು ಮನೆ ನಿರ್ಮಾಣಕ್ಕೆ ಬಳಸಲು ಸಾಧ್ಯವಾಗುವುದಿಲ್ಲ. ಸಿಮೆಂಟ್, ಕಬ್ಬಿಣದ ಬೆಲೆ ಏರಿಕೆಯಂತಹ ಕಾರಣಗಳಿಂದ ನಿರ್ಮಾಣ ಕಾರ್ಯ ಮುಂದೂಡಲ್ಪಟ್ಟು, ಅಂತಿಮವಾಗಿ ಅಪಾರ್ಟ್‌ಮೆಂಟ್ ಖರೀದಿಗೆ ಹೋಗುವ ಸನ್ನಿವೇಶಗಳು ಇರುತ್ತವೆ.

ಈ ಎಲ್ಲಾ ಸವಾಲುಗಳ ನಡುವೆ, ಸ್ವಂತ ಮನೆ ಯೋಗವಿದೆಯೇ ಅಥವಾ ಅದನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದಕ್ಕೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿ ತಮ್ಮ ನಿತ್ಯ ಭಕ್ತಿಯಲ್ಲಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ.

ಗುರೂಜಿಯವರು ಹೇಳುವಂತೆ, ಜ್ಯೋತಿಷ್ಯದ ಪ್ರಕಾರ, ಒಬ್ಬರ ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಖರೀದಿಸುವ ಯೋಗವಿದೆಯೇ ಎಂದು ಪರೀಕ್ಷಿಸಿಕೊಳ್ಳುವುದು ಮುಖ್ಯ. ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಹೊಂದುವುದಕ್ಕೆ ಪ್ರೋತ್ಸಾಹ ನೀಡುವ ಪ್ರಮುಖ ಗ್ರಹಗಳೆಂದರೆ ಕುಜ (ಮಂಗಳ), ಶುಕ್ರ ಮತ್ತು ಬುಧ. ಈ ಮೂರು ಗ್ರಹಗಳ ಅನುಗ್ರಹವು ಸ್ವಂತ ಮನೆ ಕನಸನ್ನು ನನಸಾಗಿಸಲು ಸಹಾಯಕ.

ಕುಜ ಗ್ರಹದ ಅನುಗ್ರಹ ಅತ್ಯಗತ್ಯ. ಕುಜ ಗ್ರಹದ ಅಧಿಪತಿ ಸುಬ್ರಹ್ಮಣ್ಯ ಸ್ವಾಮಿ. ಜಾತಕದಲ್ಲಿ ನಾಲ್ಕನೆಯ ಮನೆಯು ಮನೆ, ಆಸ್ತಿ ಮತ್ತು ವಾಹನಗಳ ಬಗ್ಗೆ ಸೂಚಿಸುತ್ತದೆ. ನಾಲ್ಕನೆಯ ಮನೆಯ ಅಧಿಪತಿ, ನಾಲ್ಕನೆಯ ಮನೆಯಲ್ಲಿರುವ ಗ್ರಹಗಳು, ಅವುಗಳ ಸ್ಥಿತಿಗತಿಗಳು ಮತ್ತು ನಾಲ್ಕನೇ ಮನೆಯ ಮೇಲೆ ಬೀಳುವ ದೃಷ್ಟಿ – ಇವೆಲ್ಲವೂ ಮನೆ ಯೋಗವನ್ನು ನಿರ್ಧರಿಸುತ್ತವೆ. ಮನೆಯನ್ನು ಅಂದವಾಗಿ ನಿರ್ಮಿಸಲು ಶುಕ್ರನ ಅನುಗ್ರಹ ಮತ್ತು ಸರಿಯಾದ ಯೋಜನೆಗೆ ಬುಧನ ಅನುಗ್ರಹ ಬೇಕು.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಮನೆ ಯೋಗ ಪ್ರಾಪ್ತಿಗಾಗಿ ಮಾಡಬೇಕಾದ ಪರಿಹಾರಗಳು:

  • ಮಂಗಳ ಗ್ರಹದ ಆರಾಧನೆ: ಮಂಗಳ ಗ್ರಹವನ್ನು ಸತತವಾಗಿ ಪೂಜಿಸುವುದು ಮುಖ್ಯ. ಮಂಗಳವಾರದಂದು ಮಂಗಳ ಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಬೇಕು.
  • ಸುಬ್ರಹ್ಮಣ್ಯ ಸ್ವಾಮಿ ಪೂಜೆ: ಮಂಗಳ ಗ್ರಹದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸುವುದು ಅತಿ ಮುಖ್ಯ. ಪ್ರತಿ ಮಂಗಳವಾರದಂದು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದು. ನಾಗರಕಲ್ಲು ಪೂಜೆ ಸಹ ಫಲಪ್ರದ. ಕನಿಷ್ಠ 5-10 ನಿಮಿಷಗಳ ಕಾಲ ಸುಬ್ರಹ್ಮಣ್ಯ ಸ್ವಾಮಿಯನ್ನು ಶಿರಬಾಗಿ ಪ್ರಾರ್ಥಿಸುವುದರಿಂದ ಮನೆ ಯೋಗ ಪ್ರಾಪ್ತವಾಗುತ್ತದೆ.
  • ಕೃಷ್ಣ ಪಕ್ಷದ ಚತುರ್ಥಿ ಪೂಜೆ: ಕೃಷ್ಣ ಪಕ್ಷದ ಚತುರ್ಥಿಯಂದು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದರಿಂದ ಮನೆ ಯೋಗ ಆಟೋಮ್ಯಾಟಿಕ್ ಆಗಿ ಪ್ರಾಪ್ತವಾಗುತ್ತದೆ.
  • ಮಂತ್ರ ಜಪ: ಪ್ರತಿನಿತ್ಯ “ಓಂ ಅಂಗಾರಕಾಯ ನಮಃ” ಮಂತ್ರವನ್ನು ಜಪಿಸುವುದರಿಂದ ಕುಜ ಗ್ರಹದ ಅನುಗ್ರಹ ದೊರೆಯುತ್ತದೆ. ಮಂತ್ರ ಜಪಿಸಿದ ನಂತರ ಶುದ್ಧ ಮನಸ್ಸಿನಿಂದ ಮನೆ ಬೇಕೆಂದು ಪ್ರಾರ್ಥಿಸಬೇಕು.
  • ವಿಶೇಷ ಮಂತ್ರಗಳು: ಹೆಚ್ಚು ಪರಿಣಾಮಕಾರಿ ಫಲಿತಾಂಶಗಳಿಗಾಗಿ “ಓಂ ಕ್ರಾಮ್ ಕ್ರೀಮ್ ಕ್ರೌಮ್ ಸಃ ಅಂಗಾರಕಾಯ ನಮಃ” ಅಥವಾ “ಓಂ ಕ್ರಾಮ್ ಕ್ರೀಮ್ ಕ್ರೌಮ್ ಸಃ ಭೌಮಾಯ ನಮಃ” ಮಂತ್ರಗಳನ್ನು ಜಪಿಸಬಹುದು.
  • ಮಂಗಳವಾರ ಉಪವಾಸ: ಮಂಗಳವಾರದಂದು ಉಪವಾಸ ಆಚರಿಸುವುದು ತುಂಬಾನೇ ಒಳ್ಳೆಯದು ಎಂದು ಹೇಳಲಾಗುತ್ತದೆ.

ಈ ಎಲ್ಲಾ ಪರಿಹಾರಗಳು ನಂಬಿಕೆಯ ಆಧಾರದಲ್ಲಿರುತ್ತವೆ. ಜಾತಕ ಪರಿಶೀಲನೆ ಮಾಡಿಸಿ, ಈ ಕ್ರಮಗಳನ್ನು ಶ್ರದ್ಧೆಯಿಂದ ಅನುಸರಿಸುವುದರಿಂದ ಸ್ವಂತ ಮನೆ ಕನಸು ನನಸಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ