AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaving on Monday: ಸೋಮವಾರ ಶೇವಿಂಗ್ ಮಾಡುವುದು ಒಳ್ಳೆಯದೋ ಕೆಟ್ಟದ್ದೋ?

ಜ್ಯೋತಿಷ್ಯದ ಪ್ರಕಾರ, ಕೂದಲು ಮತ್ತು ಉಗುರುಗಳನ್ನು ಕತ್ತರಿಸಲು ಶುಭ ಮತ್ತು ಅಶುಭ ದಿನಗಳಿವೆ. ಸೋಮವಾರ, ಮಂಗಳವಾರ ಮತ್ತು ಶನಿವಾರ ಕೂದಲು ಕತ್ತರಿಸುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಬುಧವಾರ ಮತ್ತು ಶುಕ್ರವಾರ ಶುಭ ದಿನಗಳಾಗಿವೆ. ಸೋಮವಾರ ಕೂದಲು ಕತ್ತರಿಸುವುದರಿಂದ ಮಾನಸಿಕ ಸಮಸ್ಯೆಗಳು ಮತ್ತು ಅಕಾಲಿಕ ಮರಣ ಸಂಭವಿಸಬಹುದು ಎಂಬ ನಂಬಿಕೆಯಿದೆ.

Shaving on Monday: ಸೋಮವಾರ ಶೇವಿಂಗ್ ಮಾಡುವುದು ಒಳ್ಳೆಯದೋ ಕೆಟ್ಟದ್ದೋ?
ಶೇವಿಂಗ್
ಅಕ್ಷತಾ ವರ್ಕಾಡಿ
|

Updated on: Jul 11, 2025 | 11:53 AM

Share

ಜ್ಯೋತಿಷ್ಯದ ಪ್ರಕಾರ, ಯಾವಾಗೆಂದರೆ ಆವಾಗ ಕೂದಲು ಕತ್ತರಿವುಸುವುದು ಅಥವಾ ಗಡ್ಡ ತೆಗೆಯುವುದು ಒಳ್ಳೆಯದಲ್ಲ. ಉಗುರು, ಕೂದಲು ಕತ್ತರಿಸುವಂತಹ ದೈನಂದಿನ ಚಟುವಟಿಕೆಗಳಿಗೆ ಶುಭ ಮತ್ತು ಅಶುಭ ದಿನಗಳಿವೆ. ಸಾಕಷ್ಟು ಪುರುಷರು ಶುಭ ಅಶುಭ ದಿನಗಳನ್ನು ಲೆಕ್ಕಿಸದೇ ಹೋಗಿ ಶೇವಿಂಗ್​ ಮಾಡಿಕೊಂಡು ಬರುತ್ತಾರೆ. ಆದರೆ ಇಂತಹ ಅಭ್ಯಾಸಗಳು ಒಳ್ಳೆಯದಲ್ಲ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಎಚ್ಚರಿಸುತ್ತಾರೆ.

ಧಾರ್ಮಿಕ ನಂಬಿಕೆಗಳು ಸೋಮವಾರದಂದು ಶೇವಿಂಗ್​​ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಸೋಮವಾರ ಶಿವನಿಗೆ ಅರ್ಪಿತವಾದ ದಿನ. ಈ ದಿನ ಕೂದಲನ್ನು ಕತ್ತರಿಸುವುದರಿಂದ ಮಾನಸಿಕ ತೊಂದರೆ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೇ ಸೋಮವಾರದಂದು ಕೂದಲು ಕತ್ತರಿಸುವುದರಿಂದ ಅಕಾಲಿಕ ಮರಣ ಸಂಭವಿಸುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಶಿವನ ಭಕ್ತ ಅಥವಾ ತನ್ನ ಮಗನ ಕಲ್ಯಾಣವನ್ನು ಬಯಸುವ ವ್ಯಕ್ತಿಯು ಸೋಮವಾರದಂದು ಕೂದಲು ಅಥವಾ ಗಡ್ಡವನ್ನು ಕತ್ತರಿಸಬಾರದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮದುವೆ ಸಮಯದಲ್ಲಿ ಅಲಂಕೃತ ತೆಂಗಿನಕಾಯಿ ಬಳಸುವುದು ಶುಭವೇ?

ಪ್ರಸಿದ್ಧ ಸಂತ ಪ್ರೇಮಾನಂದ ಮಹಾರಾಜ್ ಅವರ ಪ್ರಕಾರ, ಸೋಮವಾರದಂದು ಕೂದಲು ಅಥವಾ ಗಡ್ಡವನ್ನು ಕತ್ತರಿಸಬಾರದು. ಸೋಮವಾರದಂದು ಕೂದಲು ಕತ್ತರಿಸುವುದರಿಂದ ಜಾತಕದಲ್ಲಿ ಚಂದ್ರನ ಸ್ಥಾನ ದುರ್ಬಲಗೊಳ್ಳುತ್ತದೆ ಮತ್ತು ಇದು ಮಾನಸಿಕ ಅಸ್ವಸ್ಥತೆಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಂಗಳವಾರ ಮತ್ತು ಶನಿವಾರದಂದು ಕೂಡ ಕೂದಲು ಕತ್ತರಿಸುವುದು ಅಥವಾ ಗಡ್ಡ ಬೋಳಿಸುವುದು ಒಳ್ಳೆಯದಲ್ಲ. ಆದ್ದರಿಂದ ಕೂದಲು, ಉಗುರು ಕತ್ತರಿಸಲು ಬುಧವಾರ ಮತ್ತು ಶುಕ್ರವಾರ ಮೀಸಲಿಡಿ. ಈ ಎರಡು ದಿನವನ್ನು ಶುಭವೆಂದು ಪರಿಗಣಿಸಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!