AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology Remedies: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಬೇಕು ? ಇಲ್ಲಿದೆ ವಿವರ

ಜೀವನದಲ್ಲಿರುವ ಬಹುಪಾಲು ಸಮಸ್ಯೆಗಳಿಗೆ ಜ್ಯೋತಿಷ್ಯದ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಇದರಲ್ಲಿ ತಿಳಿಸಿರುವ ಕೆಲವು ನಿಯಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸಮಸ್ಯೆಗಳನ್ನು ಕೆಡಿಮೆ ಮಾಡಿಕೊಂಡು ಸಂತೋಷ ಪಡೆಯಬಹುದು. ಈ ಪ್ರಕ್ರಿಯೆ ನಮ್ಮ ದಿನಚರಿಯಿಂದ ಪ್ರಾರಂಭವಾಗಬೇಕು. ಅಂದರೆ ಜೀವನದ ಪ್ರತಿಯೊಂದು ಕಾರ್ಯದಲ್ಲೂ ಯಶಸ್ಸನ್ನು ಪಡೆಯಲು ನಾವು ದಿನನಿತ್ಯ ಯಾವ ಬಣ್ಣದ ಬಟ್ಟೆಗಳನ್ನು ಧರಿಸಬೇಕು ಎಂಬುದು ಕೂಡ ಮುಖ್ಯವಾಗುತ್ತದೆ. ಇದರ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

Astrology Remedies: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಬೇಕು ? ಇಲ್ಲಿದೆ ವಿವರ
Astrology Tips
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 07, 2024 | 2:45 PM

Share

ನಮ್ಮ ಜೀವನದಲ್ಲಿ ಜ್ಯೋತಿಷ್ಯವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಏಕೆಂದರೆ ಇದರ ಸಹಾಯದಿಂದ ನಾವು ನಮ್ಮ ಜೀವನದಲ್ಲಿರುವ ಬಹುಪಾಲು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದರಲ್ಲಿ ತಿಳಿಸಿರುವ ಕೆಲವು ನಿಯಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ಸಮಸ್ಯೆಗಳನ್ನು ಕೆಡಿಮೆ ಮಾಡಿಕೊಂಡು ಸಂತೋಷ ಪಡೆಯಬಹುದು. ಈ ಪ್ರಕ್ರಿಯೆ ನಮ್ಮ ದಿನಚರಿಯಿಂದ ಪ್ರಾರಂಭವಾಗಬೇಕು. ಅಂದರೆ ಜೀವನದ ಪ್ರತಿಯೊಂದು ಕಾರ್ಯದಲ್ಲೂ ಯಶಸ್ಸನ್ನು ಪಡೆಯಲು ನಾವು ದಿನನಿತ್ಯ ಯಾವ ಬಣ್ಣದ ಬಟ್ಟೆಗಳನ್ನು ಧರಿಸಬೇಕು ಎಂಬುದು ಕೂಡ ಮುಖ್ಯವಾಗುತ್ತದೆ. ಇದರ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ಯಾವ ದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಬೇಕು?

ಸೋಮವಾರ:

ಈ ವಾರ ಶಿವ ಮತ್ತು ಚಂದ್ರ ದೇವನ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಈ ದಿನದಂದು ಬಿಳಿ ಮತ್ತು ಬೆಳ್ಳಿ (ಸಿಲ್ವರ್) ಬಣ್ಣದ ಬಟ್ಟೆಗಳನ್ನು ಧರಿಸುವುದು ಶುಭವೆಂದು ಪರಿಗಣಿಸಲಾಗಿದೆ. ಈ ದಿನ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಜೀವನದಲ್ಲಿ ಶಾಂತಿ ಸಿಗುತ್ತದೆ.

ಮಂಗಳವಾರ:

ಮಂಗಳವಾರ ಧೈರ್ಯಶಾಲಿಯಾದ ಹನುಮಂತನ ದಿನ. ಆದ್ದರಿಂದ, ಭಜರಂಗಬಲಿಯ ಆಶೀರ್ವಾದ ಪಡೆಯಲು, ಕಿತ್ತಳೆ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಎಲ್ಲಾ ರೀತಿಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ದೇವಾಲಯದಿಂದ ಹೊರಬರುವಾಗ ಗಂಟೆ ಬಾರಿಸಬಾರದು ಏಕೆ ಗೊತ್ತಾ?

ಬುಧವಾರ:

ಬುಧವಾರ ಗಣಪನಿಗೆ ಸಮರ್ಪಿತವಾದ ದಿನವಾಗಿದೆ. ಹಸಿರು ಗಣೇಶನಿಗೆ ತುಂಬಾ ಇಷ್ಟವಾದ್ದರಿಂದ ಈ ದಿನ ಹಸಿರು ಬಣ್ಣದ ಬಟ್ಟೆಗಳನ್ನು ಧರಿಸುವುದು ಶುಭವೆಂದು ಪರಿಗಣಿಸಲಾಗಿದೆ.

ಗುರುವಾರ:

ಗುರುವಾರದಂದು ವಿಷ್ಣು ಮತ್ತು ಗುರು ರಾಯರನ್ನು ನೆನೆಯಲಾಗುತ್ತದೆ. ಹಾಗಾಗಿ ಈ ದಿನ ಹಳದಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಶುಭವೆಂದು ಹೇಳಲಾಗುತ್ತದೆ.

ಶುಕ್ರವಾರ:

ಶುಕ್ರವಾರವನ್ನು ಲಕ್ಷ್ಮೀ ಮತ್ತು ಶುಕ್ರ ದೇವನನ್ನು ನೆನೆಯಲಾಗುತ್ತದೆ. ಈ ದಿನದ ಪೂಜೆಯಲ್ಲಿ ಲಕ್ಷ್ಮೀ ದೇವಿಗೆ ಕೆಂಪು ಕುಂಕುಮ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಅರ್ಪಿಸಲಾಗುತ್ತದೆ, ಆದ್ದರಿಂದ ಈ ದಿನದಂದು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು ಎನ್ನಲಾಗುತ್ತದೆ ಈ ರೀತಿ ಮಾಡುವುದರಿಂದ ನಿಮ್ಮ ಎಲ್ಲಾ ರೀತಿಯ ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ.

ಶನಿವಾರ:

ಈ ವಾರ ಶನಿ ದೇವರಿಗೆ ಸಮರ್ಪಿತವಾಗಿದೆ. ಆತನ ಆಶೀರ್ವಾದ ಪಡೆಯುವುದರಿಂದ ಜೀವನದಲ್ಲಿ ಬರುವ ಎಲ್ಲಾ ರೀತಿಯ ತೊಂದರೆಗಳು ನಿವಾರಣೆ ಯಾಗುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನಿಗೆ ಕಪ್ಪು ಬಣ್ಣ ಬಲು ಪ್ರೀತಿಯಾಗಿರುವುದರಿಂದ ಅದೇ ಬಣ್ಣದ ಬಟ್ಟೆಗಳನ್ನು ಧರಿಸುವುದು ಶುಭವೆಂದು ಪರಿಗಣಿಸಲಾಗಿದೆ.

ಭಾನುವಾರ:

ಭಾನುವಾರವನ್ನು ಸೂರ್ಯ ದೇವನ ಆರಾಧನೆಯ ದಿನವೆಂದು ಪರಿಗಣಿಸಲಾಗುತ್ತದೆ. ಸೂರ್ಯ ದೇವರ ಮಹಿಮೆಯಂತೆ, ಈ ದಿನದಂದು ಚಿನ್ನ, ಗುಲಾಬಿ ಅಥವಾ ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸುವುದು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ ಮತ್ತು ಪ್ರತಿಯೊಂದು ಕೆಲಸದಲ್ಲೂ ಯಶಸ್ಸನ್ನು ತರುತ್ತದೆ ಎಂದು ನಂಬಲಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!