AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Friday Puja Tips: ಶುಕ್ರವಾರ ಈ ಪರಿಹಾರ ಮಾಡಿದರೆ ಎಂದಿಗೂ ನಿಮಗೆ ಹಣದ ಕೊರತೆಯಾಗದು

ಶುಕ್ರವಾರ ಲಕ್ಷ್ಮೀ ದೇವಿಯ ಪೂಜೆಯ ದಿನ. ಹಣದ ಕೊರತೆಯನ್ನು ತಪ್ಪಿಸಲು ಮತ್ತು ಆರ್ಥಿಕ ಸಮೃದ್ಧಿಗಾಗಿ, ಶುಕ್ರವಾರ ಲಕ್ಷ್ಮೀ ದೇವಿಗೆ ಹಾಲು, ಪಾಯಸ, ಸಕ್ಕರೆ ಮಿಠಾಯಿ, ವೀಳ್ಯದೆಲೆ, ಹೂವುಗಳು ಮತ್ತು ಕೆಂಪು ಬಟ್ಟೆ ಅರ್ಪಿಸುವುದು ಶುಭ. ಇವುಗಳಿಂದ ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಬಹುದು ಮತ್ತು ಸಮೃದ್ಧಿಯನ್ನು ಆಕರ್ಷಿಸಬಹುದು. ಈ ಪರಿಹಾರಗಳನ್ನು ಅನುಸರಿಸುವುದರಿಂದ ದ್ವಿಗುಣ ಲಾಭವಿದೆ ಎಂಬ ನಂಬಿಕೆಯಿದೆ.

Friday Puja Tips: ಶುಕ್ರವಾರ ಈ ಪರಿಹಾರ ಮಾಡಿದರೆ ಎಂದಿಗೂ ನಿಮಗೆ ಹಣದ ಕೊರತೆಯಾಗದು
Friday Puja Tips
ಅಕ್ಷತಾ ವರ್ಕಾಡಿ
|

Updated on: May 16, 2025 | 8:52 AM

Share

ಶುಕ್ರವಾರ ಲಕ್ಷ್ಮಿ ದೇವಿಯ ಆರಾಧನೆಗೆ ಸಮರ್ಪಿತವಾದ ದಿನ. ನಿಮಗೆ ಎಂದಿಗೂ ಹಣದ ಕೊರತೆ ಬರಬಾರದು ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದ ಯಾವಾಗಲೂ ನಿಮ್ಮೊಂದಿಗೆ ಇರಬೇಕೆಂದು ಬಯಸಿದರೆ, ಶುಕ್ರವಾರದಂದು ಲಕ್ಷ್ಮಿ ದೇವಿಗೆ ಕೆಲವು ವಸ್ತುಗಳನ್ನು ಅರ್ಪಿಸುವುದು ಬಹಳ ಮುಖ್ಯ. ಹೀಗೆ ಮಾಡುವುದರಿಂದ ನಿಮಗೆ ಎಂದಿಗೂ ಹಣದ ಕೊರತೆಯಾಗುವುದಿಲ್ಲ. ಆದ್ದರಿಂದ ಶುಕ್ರವಾರ ಲಕ್ಷ್ಮಿ ದೇವಿಯ ಪೂಜೆಯ ವೇಳೆ ದೇವಿಗೆ ಏನನ್ನು ಅರ್ಪಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶುಕ್ರವಾರ ಈ ಪರಿಹಾರ ಮಾಡಿದರೆ, ನಿಮಗೆ ಎರಡು ಪಟ್ಟು ಲಾಭ ಸಿಗುತ್ತದೆ ಎಂಬ ನಂಬಿಕೆಯಿದೆ.

ಹಾಲಿನಿಂದ ಮಾಡಿದ ವಸ್ತು:

ಲಕ್ಷ್ಮಿ ದೇವಿಗೆ ಬಿಳಿ ಬಣ್ಣದ ವಸ್ತುಗಳು ಮತ್ತು ಹಾಲಿನಿಂದ ಮಾಡಿದ ವಸ್ತುಗಳು ಇಷ್ಟ. ಆದ್ದರಿಂದ ಶುಕ್ರವಾರ ಹಾಲು ಮತ್ತು ಅನ್ನದಿಂದ ಮಾಡಿದ ಪಾಯಸ ಅಥವಾ ಖೀರ್‌ನ್ನು ನೈವೇದ್ಯವಾಗಿ ಅರ್ಪಿಸಿ. ನೀವು ಲಕ್ಷ್ಮಿ ದೇವಿಗೆ ಸಕ್ಕರೆ ಮಿಠಾಯಿಯನ್ನು ಸಹ ನೀಡಬಹುದು.

ವೀಳ್ಯದೆಲೆ ಅರ್ಪಿಸಿ:

ಲಕ್ಷ್ಮಿ ದೇವಿಗೆ ವೀಳ್ಯದ ಎಲೆಗಳೆಂದರೆ ತುಂಬಾ ಇಷ್ಟ ಆದ್ದರಿಂದ ಈ ಎಲೆಯನ್ನು ದೇವಿಗೆ ಅರ್ಪಿಸಿ. ಲಕ್ಷ್ಮಿ ದೇವಿಯನ್ನು ಸಂಪತ್ತು ಮತ್ತು ಅದೃಷ್ಟದ ದೇವತೆ ಎಂದೂ ಕರೆಯುತ್ತಾರೆ. ವೀಳ್ಯದ ಎಲೆಯು ಸಂತೋಷದೊಂದಿಗೆ ಸಂಬಂಧ ಹೊಂದಿದೆ. ಏಕೆಂದರೆ ಹಿಂದೂ ಸಂಪ್ರದಾಯದಲ್ಲಿ ವೀಳ್ಯದ ಎಲೆಗಳಿಗೆ ವಿಶೇಷ ಮಹತ್ವವಿದೆ. ಪೂಜೆಗಳು, ಮದುವೆಗಳು ಮತ್ತು ಶುಭ ಸಮಾರಂಭಗಳಲ್ಲಿ ವೀಳ್ಯದ ಎಲೆಗಳು ಅತ್ಯಗತ್ಯ.

ಇದನ್ನೂ ಓದಿ
Image
ಹೆಣ್ಣಿನ ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ
Image
ಈ ನಾಲ್ಕು ರಾಶಿಯವರಿಗೆ ಚಿನ್ನ ಧರಿಸುವುದು ಅತ್ಯಂತ ಶುಭ
Image
ಮೇ 8 ಮೋಹಿನಿ ಏಕಾದಶಿ; ಪೂಜಾ ವಿಧಾನ ಮತ್ತು ಮಹತ್ವ
Image
ಶಿವನ ವಿಶೇಷ ಅನುಗ್ರಹ ಪಡೆಯಲು ಈ ಸರಳ ಪರಿಹಾರವನ್ನು ಪ್ರಯತ್ನಿಸಿ

ಇದನ್ನೂ ಓದಿ: ವಾಸ್ತು, ರಾಹು-ಕೇತು ದೋಷ ನಿವಾರಣೆಗೆ ಮನೆಯ ದಕ್ಷಿಣ ದಿಕಿನಲ್ಲಿ ಈ ಒಂದು ಮರ ನೆಡಿ!

ಸುವಾಸನೆಯ ವಸ್ತುಗಳು:

ಸಂಪತ್ತು ಮತ್ತು ಅದೃಷ್ಟದ ದೇವತೆಯಾದ ಲಕ್ಷ್ಮಿ ದೇವಿಗೆ ಸುವಾಸನೆಯ ವಸ್ತು ಇಷ್ಟ. ಹೂವುಗಳ ಸುವಾಸನೆ ಇರುವ ಮನೆಯಲ್ಲಿ ಲಕ್ಷ್ಮಿ ದೇವಿಯು ಯಾವಾಗಲೂ ವಾಸಿಸುತ್ತಾಳೆ ಎಂದು ಹೇಳಲಾಗುತ್ತದೆ. ನೀವು ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಬಯಸಿದರೆ, ನೀವು ಲಕ್ಷ್ಮಿ ದೇವಿಗೆ ಹೂವುಗಳನ್ನು ಅರ್ಪಿಸಬೇಕು. ಗುಲಾಬಿ ಹೂವುಗಳು, ಕಮಲದ ಹೂವುಗಳು ಅಥವಾ ಶ್ರೀಗಂಧವನ್ನು ಅರ್ಪಿಸುವುದು ಸಹ ಶುಭ.

ಕೆಂಪು ಬಟ್ಟೆ:

ಕೆಂಪು ಬಟ್ಟೆಯನ್ನು ಅದೃಷ್ಟ, ಪ್ರೀತಿ ಮತ್ತು ಐಷಾರಾಮಿ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಕೆಂಪು ವಸ್ತುಗಳನ್ನು ಹೆಚ್ಚಾಗಿ ಶುಭ ಸಮಾರಂಭಗಳಲ್ಲಿ, ವಿಶೇಷವಾಗಿ ಮದುವೆಗಳಲ್ಲಿ ಬಳಸಲಾಗುತ್ತದೆ. ವಿವಾಹಿತ ಮಹಿಳೆಯರು ಶುಕ್ರವಾರದಂದು ಲಕ್ಷ್ಮಿ ದೇವಿಗೆ ಕೆಂಪು ಬಳೆ ಅಥವಾ ಕೆಂಪು ಬಟ್ಟೆಯನ್ನು ಅರ್ಪಿಸಿ ದೇವಿಯ ಆಶೀರ್ವಾದವನ್ನು ಪಡೆಯುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ