AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಎಷ್ಟೇ ದುಡಿದರೂ ಹಣ ಕೈಯಲ್ಲಿ ಉಳಿಯುತ್ತಿಲ್ಲವೇ, ಹಾಗಿದ್ರೆ ನಿಮ್ಮ ಪರ್ಸ್‌ನಲ್ಲಿ ಈ ವಸ್ತು ಇಡಿ

ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಜೇಬಿನಲ್ಲಿ ಕರ್ಪೂರ, ಲಕ್ಷ್ಮಿ ಯಂತ್ರ, ಕೇಸರಿ, ಬೆಳ್ಳಿ ನಾಣ್ಯ ಅಥವಾ ಗೋಮತಿ ಚಕ್ರ ಇಟ್ಟುಕೊಳ್ಳುವುದರಿಂದ ಹಣಕಾಸಿನ ಸಮಸ್ಯೆಗಳನ್ನು ನಿವಾರಿಸಬಹುದು. ಈ ವಸ್ತುಗಳು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಶುಕ್ರವಾರದಂದು ಈ ವಸ್ತುಗಳನ್ನು ಪೂಜಿಸಿ, ನಂತರ ಜೇಬಿನಲ್ಲಿ ಇಟ್ಟುಕೊಳ್ಳುವುದು ಶ್ರೇಷ್ಠ.

Vasthu Tips: ಎಷ್ಟೇ ದುಡಿದರೂ ಹಣ ಕೈಯಲ್ಲಿ ಉಳಿಯುತ್ತಿಲ್ಲವೇ, ಹಾಗಿದ್ರೆ ನಿಮ್ಮ ಪರ್ಸ್‌ನಲ್ಲಿ ಈ ವಸ್ತು ಇಡಿ
Attract Wealth
ಅಕ್ಷತಾ ವರ್ಕಾಡಿ
|

Updated on: May 03, 2025 | 9:08 AM

Share

ಎಷ್ಟೇ ದುಡಿದು ಸಂಪಾದಿಸಿದರೂ ಹಣ ನಮ್ಮ ಕೈಯಲ್ಲಿ ಉಳಿಯುವುದೇ ಇಲ್ಲ ಎನ್ನುವುದು ಪ್ರತಿಯೊಬ್ಬರ ಸಮಸ್ಯೆ. ಈ ಸಮಸ್ಯೆಗಳಿಂದ ಮುಕ್ತರಾಗಲು ವಾಸ್ತು ಸಲಹೆಯನ್ನು ಅನುಸರಿಸುವುದು ಅಗತ್ಯ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಹಣದ ಸಮಸ್ಯೆಯಿಂದ ದೂರವಿರಲು ವಾಸ್ತುವಿನಲ್ಲಿ ಕೆಲವು ಪರಿಹಾರಗಳಿವೆ. ವಾಸ್ತು ಪ್ರಕಾರ, ನಿಮ್ಮ ಜೇಬಿನಲ್ಲಿ ಅಥವಾ ಪರ್ಸ್‌ನಲ್ಲಿ ಕೆಲವು ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಸಂಪತ್ತು ಆಕರ್ಷಿಸುತ್ತದೆ. ಈ ವಸ್ತುಗಳು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತವೆ ಎಂದು ನಂಬಲಾಗಿದೆ.

ಕರ್ಪೂರ:

ಹಳದಿ ಬಟ್ಟೆಯಲ್ಲಿ ಕರ್ಪೂರದ ಸಣ್ಣ ತುಂಡನ್ನು ಕಟ್ಟಿ ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ ಆರ್ಥಿಕ ಲಾಭ ಸಿಗುತ್ತದೆ. ಈ ಕರ್ಪೂರದ ಸುವಾಸನೆಯು ಲಕ್ಷ್ಮಿ ದೇವಿಯನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಪ್ರತಿ ಶುಕ್ರವಾರ ಈ ತುಂಡನ್ನು ಬದಲಾಯಿಸುವುದು ಅಗತ್ಯ.

ಲಕ್ಷ್ಮಿ ಯಂತ್ರ:

ನಿಮ್ಮ ಜೇಬಿನಲ್ಲಿ ಸಣ್ಣ ಲಕ್ಷ್ಮಿ ಯಂತ್ರ ಇಟ್ಟುಕೊಳ್ಳುವುದರಿಂದ ಸಂಪತ್ತು ವೃದ್ಧಿಯಾಗುತ್ತದೆ. ಈ ಯಂತ್ರವನ್ನು ಶುಕ್ರವಾರದಂದು ಪೂಜಿಸಿ, ಸ್ವಚ್ಛವಾದ ಬಟ್ಟೆಯಲ್ಲಿ ಸುತ್ತಿ ಜೇಬಿನಲ್ಲಿ ಇಡಬೇಕು.

ಇದನ್ನೂ ಓದಿ
Image
ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ; ನೋಂದಣಿ ಸೇರಿದಂತೆ ಸಂಪೂರ್ಣ ವಿವರ
Image
ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ
Image
ದೇವಾಲಯ ನಿರ್ಮಾಣವಾಗುತ್ತಿದ್ದಾಗಲೇ ಕೊಳಕ್ಕೆ ಹಾರಿದ ಶಿಲ್ಪಿ,ಇಂದಿಗೂ ಅಪೂರ್ಣ!
Image
ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕರಿಗೆ ಸಿಗುವ ಸಂಬಳ, ಸೌಲಭ್ಯ ಏನೇನು?

ಕೇಸರಿ:

ನಿಮ್ಮ ಜೇಬಿನಲ್ಲಿ ಸಣ್ಣ ಕೇಸರಿ ಪ್ಯಾಕೆಟ್ ಇಟ್ಟುಕೊಳ್ಳುವುದರಿಂದ ಸಂಪತ್ತು ಆಕರ್ಷಿಸುತ್ತದೆ. ಕೇಸರಿ ಲಕ್ಷ್ಮಿ ದೇವಿಗೆ ಪ್ರಿಯವಾದದ್ದು ಎಂದು ಪರಿಗಣಿಸಲಾಗಿದೆ. ಇದನ್ನು ಪ್ರತೀ ಶುಕ್ರವಾರದಂದು ಬದಲಾಯಿಸುವುದು ಉತ್ತಮ.

ಇದನ್ನೂ ಓದಿ: ವಿವಾಹಿತ ಮಹಿಳೆಯರು ಈ ದಿನ ತಪ್ಪಿಯೂ ತಲೆ ಸ್ನಾನ ಮಾಡಬಾರದು!

ಬೆಳ್ಳಿ ನಾಣ್ಯ:

ನಿಮ್ಮ ಜೇಬಿನಲ್ಲಿ ಸಣ್ಣ ಬೆಳ್ಳಿ ನಾಣ್ಯವನ್ನು ಇಟ್ಟುಕೊಳ್ಳುವುದರಿಂದ ಹಣದ ನಿರಂತರ ಹರಿವು ಖಚಿತ. ಈ ನಾಣ್ಯವನ್ನು ಶುಕ್ರವಾರದಂದು ಲಕ್ಷ್ಮಿ ದೇವಿಯ ಪಾದದಲ್ಲಿ ಇಟ್ಟು ಪೂಜಿಸಬೇಕು, ನಂತರ ಜೇಬಿನಲ್ಲಿ ಇಡಬೇಕು.

ಗೋಮತಿ ಚಕ್ರ:

ಗೋಮತಿ ಚಕ್ರವು ಸಮುದ್ರದಲ್ಲಿ ಕಂಡುಬರುವ ಪವಿತ್ರ ಕಲ್ಲು. ಅದನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ ಆರ್ಥಿಕ ಲಾಭ ಸಿಗುವುದರ ಜೊತೆಗೆ ದುಷ್ಟ ಶಕ್ತಿಗಳಿಂದ ರಕ್ಷಣೆಯೂ ಸಿಗುತ್ತದೆ. ಅದನ್ನು ಸ್ವಚ್ಛವಾದ ಬಟ್ಟೆಯಲ್ಲಿ ಸುತ್ತಿ ನಿಮ್ಮ ಜೇಬಿನಲ್ಲಿ ಇರಿಸಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ