
ಶ್ರಾವಣ ಮಾಸದ ಹುಣ್ಣಿಮೆಯ ದಿನವಾದ ಆಗಸ್ಟ್ 28 ರಂದು ಕನ್ಯಾರಾಶಿಯಲ್ಲಿ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಬೆಳಿಗ್ಗೆ 8:04 ಕ್ಕೆ ಪ್ರಾರಂಭವಾಗಿ 9:44 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲವಾದ್ದರಿಂದ ಸೂತಕದ ನಿಯಮಗಳು ಅನ್ವಯಿಸುವುದಿಲ್ಲ. ಆದಾಗ್ಯೂ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಗ್ರಹಣವು ಕೆಲ ರಾಶಿಗಳ ಮೇಲೆ ನಕಾರಾತ್ಮಕ ಪ್ರಭಾವ ಬೀರಲಿದೆ.
ಕನ್ಯಾರಾಶಿಯಲ್ಲಿ ಗ್ರಹಣ ಸಂಭವಿಸುತ್ತಿರುವುದರಿಂದ ಧನು ರಾಶಿಯವರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಅವಧಿಯಲ್ಲಿ ಆರ್ಥಿಕ ಸಂಕಷ್ಟಗಳು ಹಾಗೂ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗಬಹುದು. ಗ್ರಹಣ ಮುಗಿದ ಮರುದಿನದವರೆಗೆ ಹಣಕಾಸಿನ ವಿಷಯಗಳಲ್ಲಿ ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ.
ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಅಷ್ಟಲಕ್ಷ್ಮಿ ರಾಜಯೋಗ; ಈ 4 ರಾಶಿಗೆ ಒಲಿಯಲಿದೆ ಅಪಾರ ಧನಸಂಪತ್ತು!
ಕನ್ಯಾರಾಶಿಯಲ್ಲೇ ಗ್ರಹಣ ನಡೆಯುತ್ತಿರುವುದರಿಂದ ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು. ಅನಗತ್ಯ ಖರ್ಚುಗಳು ಹೆಚ್ಚಿ, ಮಾನಸಿಕ ಶಾಂತಿ ಭಂಗವಾಗುವ ಸಾಧ್ಯತೆ ಇದೆ. ಆದ್ದರಿಂದ ಹಣದ ವಹಿವಾಟು ನಡೆಸುವಾಗ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಕನ್ಯಾ ರಾಶಿಯವರು ಹೆಚ್ಚಿನ ಜಾಗ್ರತೆ ವಹಿಸಬೇಕು.
ಸಿಂಹ ರಾಶಿಯವರಿಗೆ ಈ ಅವಧಿಯಲ್ಲಿ ನಿಂದನೆಗಳು ಮತ್ತು ಅಪವಾದಗಳು ಎದುರಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರೊಂದಿಗೆ ವಾದ-ವಿವಾದಗಳು ಉಂಟಾಗಬಹುದು ಹಾಗೂ ನ್ಯಾಯಾಲಯ ಅಥವಾ ಕಾನೂನು ಸಂಬಂಧಿತ ವ್ಯವಹಾರಗಳು ನಿರೀಕ್ಷೆಗೆ ವಿರುದ್ಧವಾಗಿ ಹೋಗಬಹುದು. ಪ್ರತಿಯೊಂದು ಕೆಲಸದಲ್ಲೂ ಜಾಗರೂಕರಾಗಿರುವುದು ಒಳಿತು.
ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ