AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಹಿಂದೂ ಧರ್ಮದಲ್ಲಿ ಯಾವ ದಿನ ಉಪವಾಸಕ್ಕೆ ಶ್ರೇಷ್ಠ?

ಡಾ. ಬಸವರಾಜ್ ಗುರೂಜಿಯವರು ಉಪವಾಸದ ಮಹತ್ವ ಮತ್ತು ಅದನ್ನು ಯಾವ ದಿನಗಳಲ್ಲಿ ಆಚರಿಸುವುದು ಶ್ರೇಷ್ಠ ಎಂಬುದರ ಕುರಿತು ಸಲಹೆ ನೀಡಿದ್ದಾರೆ. ಸೋಮವಾರ, ಶುಕ್ರವಾರ ಮತ್ತು ಶನಿವಾರದ ಉಪವಾಸಗಳಿಗೆ ವಿಶೇಷ ಮಹತ್ವವಿದೆ ಎಂದು ಹೇಳಲಾಗಿದೆ. ಸೋಮವಾರದ ಉಪವಾಸದಿಂದ ಮಕ್ಕಳ ಕ್ಷೇಮ ಮತ್ತು ಶುಭಕಾರ್ಯಗಳಿಗೆ ಅನುಕೂಲವಾಗುತ್ತದೆ. ಶುಕ್ರವಾರದ ಉಪವಾಸವು ಆರ್ಥಿಕ ಸಮೃದ್ಧಿ ಮತ್ತು ದುಷ್ಟಶಕ್ತಿಗಳ ನಿಗ್ರಹಕ್ಕೆ ಸಹಾಯ ಮಾಡುತ್ತದೆ. ಶನಿವಾರದ ಉಪವಾಸವು ಗ್ರಹದೋಷಗಳಿಂದ ಮುಕ್ತಿ ಪಡೆಯಲು ಸಹಾಯಕವಾಗಿದೆ.

Daily Devotional: ಹಿಂದೂ ಧರ್ಮದಲ್ಲಿ ಯಾವ ದಿನ ಉಪವಾಸಕ್ಕೆ ಶ್ರೇಷ್ಠ?
Fasting Days For Women
ಅಕ್ಷತಾ ವರ್ಕಾಡಿ
|

Updated on:Jun 26, 2025 | 10:18 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಹಿಳೆಯರು ಯಾವ ದಿನಗಳಲ್ಲಿ ಉಪವಾಸ ಮಾಡುವುದು ಶ್ರೇಷ್ಠ ಎಂಬುದರ ಬಗ್ಗೆ ವಿವರಿಸಿದ್ದಾರೆ. ಅನೇಕ ರೀತಿಯ ಉಪವಾಸಗಳಿವೆ, ಆದರೆ ವಾರದಲ್ಲಿ ಪ್ರತಿ ದಿನವೂ ಉಪವಾಸ ಮಾಡುವ ಅಗತ್ಯವಿಲ್ಲ. ನಿರ್ಜಲ ಉಪವಾಸ, ಲಘು ಆಹಾರ ಉಪವಾಸ, ಹಣ್ಣಿನ ಉಪವಾಸ ಮತ್ತು ಹಾಲಿನ ಉಪವಾಸ. ಆದರೆ, ಯಾವ ದಿನ ಉಪವಾಸ ಮಾಡುವುದು ಶ್ರೇಷ್ಠ ಎಂಬುದು ಪ್ರಮುಖ ಪ್ರಶ್ನೆ. ಸೋಮವಾರ, ಶುಕ್ರವಾರ ಮತ್ತು ಶನಿವಾರ ಈ ದಿನಗಳಲ್ಲಿ ಉಪವಾಸ ಮಾಡುವುದು ತುಂಬಾ ಒಳ್ಳೆಯದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಸೋಮವಾರ ಶಿವನ ಮತ್ತು ಚಂದ್ರನ ವಾರ. ಈ ದಿನ ಉಪವಾಸ ಮಾಡುವುದರಿಂದ ಮಕ್ಕಳ ಶ್ರೇಯಸ್ಸು, ಶುಭಕಾರ್ಯಗಳು, ಆರೋಗ್ಯ ಸಮಸ್ಯೆಗಳು ಮತ್ತು ಕೋರ್ಟ್ ಪ್ರಕರಣಗಳಲ್ಲಿ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ. ಶುಕ್ರವಾರ ಮಹಾಲಕ್ಷ್ಮೀ ದೇವಿಯ ವಾರ. ಈ ದಿನದ ಉಪವಾಸವು ಆರ್ಥಿಕ ಸಮೃದ್ಧಿ, ಸಾಲದ ಸಮಸ್ಯೆಗಳ ನಿವಾರಣೆ ಮತ್ತು ದುಷ್ಟಶಕ್ತಿಗಳ ನಿಗ್ರಹಕ್ಕೆ ಸಹಾಯ ಮಾಡುತ್ತದೆ. ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ಸಾಧ್ಯತೆ ಹೆಚ್ಚು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಗಣೇಶನ ಪೂಜೆಯ ವೇಳೆ ತಪ್ಪಾಗಿಯೂ ಈ ವಸ್ತುಗಳನ್ನು ಅರ್ಪಿಸಬೇಡಿ!

ಶನಿವಾರದ ಉಪವಾಸವು ಗ್ರಹಕಾಟ, ಶನಿಕಾಟ, ಸಾಡೇಸಾತಿ ಮುಂತಾದ ಗ್ರಹದೋಷಗಳಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಮಾಟ, ಮಂತ್ರ, ತಂತ್ರ ಮತ್ತು ಕೆಟ್ಟ ದೃಷ್ಟಿಯಿಂದ ರಕ್ಷಣೆ ನೀಡುತ್ತದೆ. ನವಗ್ರಹಗಳ ಕೃಪೆಗೆ ಪಾತ್ರರಾಗುವ ಸಾಧ್ಯತೆ ಇದೆ. ಹೀಗೆ, ಸೋಮವಾರ, ಶುಕ್ರವಾರ ಮತ್ತು ಶನಿವಾರದ ಉಪವಾಸಗಳು ಸರ್ವಶ್ರೇಷ್ಠ ಎಂದು ಡಾ. ಬಸವರಾಜ್ ಗುರುಜಿ ಅವರು ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 am, Thu, 26 June 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ