AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayudha Puja 2025: ಆಯುಧ ಪೂಜೆಗೆ ಅತ್ಯಂತ ಶುಭಕರ ಮುಹೂರ್ತವನ್ನು ಇಲ್ಲಿ ತಿಳಿದುಕೊಳ್ಳಿ

ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಆಯುಧ ಪೂಜೆಯ ಮಹತ್ವವನ್ನು ವಿವರಿಸಿದ್ದಾರೆ. ಮಹಾನವಮಿಯಂದು ಆಚರಿಸಲಾಗುವ ಈ ಪೂಜೆಯು ನಮ್ಮ ಜೀವನ ನಿರ್ವಹಣೆಗೆ ಸಹಾಯ ಮಾಡುವ ಆಯುಧಗಳಿಗೆ ಕೃತಜ್ಞತೆ ಸಲ್ಲಿಸುವ ಪದ್ಧತಿ. ಇದರ ಮೂಲಕ ದುಷ್ಟ ಶಕ್ತಿಗಳನ್ನು ದಮನಿಸಿ, ಶುಭ ಶಕ್ತಿಗಳನ್ನು ಸ್ವಾಗತಿಸಲಾಗುತ್ತದೆ. ನಿರ್ದಿಷ್ಟ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸುವುದರಿಂದ ವಿಶೇಷ ಫಲಗಳು ಲಭಿಸುತ್ತವೆ ಎಂದು ಗುರೂಜಿ ತಿಳಿಸಿದ್ದಾರೆ. ಇದು ಸುಖ, ಸಮೃದ್ಧಿ ತರುವ ಪವಿತ್ರ ಆಚರಣೆಯಾಗಿದೆ ಎಂದು ಗುರೂಜಿ ವಿವರಿಸಿದ್ದಾರೆ.

Ayudha Puja 2025: ಆಯುಧ ಪೂಜೆಗೆ ಅತ್ಯಂತ ಶುಭಕರ ಮುಹೂರ್ತವನ್ನು ಇಲ್ಲಿ ತಿಳಿದುಕೊಳ್ಳಿ
ಆಯುಧ ಪೂಜೆ
ಅಕ್ಷತಾ ವರ್ಕಾಡಿ
|

Updated on:Oct 01, 2025 | 10:44 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಆಯುಧ ಪೂಜೆಯ ಮಹತ್ವವನ್ನು ವಿವರಿಸಿದ್ದಾರೆ. ಮಹಾನವಮಿಯ ದಿನದಂದು ಆಯುಧ ಪೂಜೆಯನ್ನು ಕೂಡ ವಿಶೇಷವಾಗಿ ಆಚರಿಸಲಾಗುತ್ತದೆ. ಆಯುಧ ಪೂಜೆ ಎಂದರೆ ಅಸ್ತ್ರ ಪೂಜೆ ಅಥವಾ ಶಾಸ್ತ್ರ ಪೂಜೆ. ನಮ್ಮ ಜೀವನ ನಿರ್ವಹಣೆಗೆ ಕಾರಣವಾಗುವ ಪ್ರತಿಯೊಂದು ಸಾಧನವನ್ನೂ ಈ ದಿನ ಪೂಜಿಸಲಾಗುತ್ತದೆ. ಶಿಕ್ಷಕರಿಗೆ ಪೆನ್, ರೈತರಿಗೆ ನೇಗಿಲು, ಕಾರ್ಖಾನೆಯವರಿಗೆ ಯಂತ್ರೋಪಕರಣಗಳು ಹೀಗೆ ಪ್ರತಿಯೊಬ್ಬರ ವೃತ್ತಿಯ ಆಯುಧಗಳನ್ನು ಪೂಜಿಸಲಾಗುತ್ತದೆ. ಈ ಆಯುಧಗಳು ವರ್ಷಪೂರ್ತಿ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಆಯುಧಗಳಲ್ಲಿ ಜೀವಶಕ್ತಿ ಇರುತ್ತದೆ ಎಂದು ನಂಬಲಾಗಿದೆ. ವಾಹನ ಚಾಲನೆ ಮಾಡುವಾಗ ಅನಿರೀಕ್ಷಿತವಾಗಿ ಸಂಭವಿಸುವ ಅಪಾಯಗಳಿಂದ ಆಯುಧಗಳೇ ನಮ್ಮನ್ನು ಕಾಪಾಡುತ್ತವೆ ಎಂದು ಗುರೂಜಿ ವಿವರಿಸಿದ್ದಾರೆ.

ಈ ವಿಡಿಯೋ ಇಲ್ಲಿದೆ ನೋಡಿ:

ದುರ್ಗಾದೇವಿಯು ಮಹಿಷಾಸುರನನ್ನು ಸಂಹರಿಸಲು ಆಯುಧಗಳೇ ಕಾರಣೀಭೂತವಾಗಿದ್ದವು. ಪಾಂಡವರು ತಮ್ಮ ಆಯುಧಗಳನ್ನು ಶಮಿ ವೃಕ್ಷದಲ್ಲಿ ಇಟ್ಟು ಪೂಜಿಸಿದ್ದರು. ಶ್ರೀರಾಮನು ರಾವಣನನ್ನು ಜಯಿಸಲು ಆಯುಧಗಳನ್ನು ಬಳಸಿದ್ದನು. ಇಂತಹ ಐತಿಹಾಸಿಕ ನಿದರ್ಶನಗಳು ಆಯುಧಗಳ ಶಕ್ತಿಯನ್ನು ಎತ್ತಿಹಿಡಿಯುತ್ತವೆ. ಈ ದಿನ ಎಲ್ಲಾ ಆಯುಧಗಳಿಗೆ, ವಾದ್ಯಗಳಿಗೆ ಗಂಧ, ವಿಭೂತಿ, ಕುಂಕುಮ ಅರ್ಪಿಸಿ, ವಿಧಿವಿಧಾನಗಳಿಂದ ಪೂಜಿಸಿ ಪುಷ್ಪಗಳಿಂದ ಅಲಂಕರಿಸಲಾಗುತ್ತದೆ.

ಇದನ್ನೂ ಓದಿ: ನವರಾತ್ರಿಯ ಸಮಯದಲ್ಲಿ ದುರ್ಗಾ ದೇವಿಗೆ ಎಂದಿಗೂ ಈ ಹಣ್ಣುಗಳನ್ನು ಅರ್ಪಿಸಬೇಡಿ

ಪೂಜೆಯ ಶುಭ ಸಮಯ ಮತ್ತು ವಿಧಾನ:

ಮಹಾನವಮಿಯ ತಿಥಿಯು ಹಿಂದಿನ ದಿನದ ಸಂಜೆ 6:06ಕ್ಕೆ ಪ್ರಾರಂಭವಾಗಿ, ಇಂದು ರಾತ್ರಿ 7:01ರ ತನಕ ಇರುತ್ತದೆ. ಆಯುಧ ಪೂಜೆಗೆ ವಿಶೇಷವಾಗಿ ಮಧ್ಯಾಹ್ನ 2:28 ರಿಂದ 3:16 ರವರೆಗಿನ ಸಮಯವು ಅತ್ಯಂತ ಶುಭಕರವಾಗಿದೆ. ಈ ಸಮಯದಲ್ಲಿ ಪೂಜೆ ಸಲ್ಲಿಸುವುದರಿಂದ ವಿಶೇಷ ಶುಭ ಫಲಗಳು ದೊರೆಯುತ್ತವೆ. ಬೂದುಗುಂಬಳಕಾಯಿ, ನಿಂಬೆಹಣ್ಣು, ತೆಂಗಿನಕಾಯಿಯನ್ನು ಆಯುಧಗಳಿಗೆ ಅರ್ಪಿಸಿ, ತೆಂಗಿನಕಾಯಿ ಮೇಲೆ ಕರ್ಪೂರ ಇಟ್ಟು ದೃಷ್ಟಿ ತೆಗೆದು ಒಡೆಯುವುದು, ನಿಂಬೆಹಣ್ಣು ಒಡೆಯುವುದು ಮುಂತಾದ ಆಚರಣೆಗಳಿವೆ. ದುಷ್ಟ ಶಕ್ತಿಗಳನ್ನು ದಮನ ಮಾಡಿ, ಶುಭ ಶಕ್ತಿಗಳನ್ನು ಪ್ರಸಾದಿಸಲು ಆಯುಧಗಳು ಸಹಾಯ ಮಾಡುತ್ತವೆ. ಚಿಕ್ಕ ಪುಟ್ಟ ವ್ಯಾಪಾರ ಮಾಡುವವರು ಅರಿಶಿನ ಕುಂಕುಮ ಇಟ್ಟು, ಊದಬತ್ತಿ ಬೆಳಗಿ ಆರತಿ ಮಾಡಿದರೂ ಸಾಕು. ನಂಬಿಕೆ ಮತ್ತು ಅನುಭವಪೂರ್ವಕವಾಗಿ ಆಚರಿಸಲಾಗುವ ಈ ಪೂಜೆಗಳು ಎಲ್ಲರ ಬಾಳಲ್ಲಿ ಸುಖ, ಸಮೃದ್ಧಿ ಮತ್ತು ಮಂಗಳವನ್ನು ತರಲಿ ಎಂದು ಗುರೂಜಿ ಹಾರೈಸಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 am, Wed, 1 October 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ