AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balarishta Dosha: ಮಕ್ಕಳಲ್ಲಿ ಕಂಡುಬರುವ ಬಾಲಾರಿಷ್ಟ ದೋಷಕ್ಕೆ ಸರಳ ಪರಿಹಾರ ಇಲ್ಲಿದೆ

ಡಾ. ಬಸವರಾಜ್ ಗುರೂಜಿಯವರು ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರವೇನು ಎಂಬುದನ್ನು ವಿವರಿಸಿದ್ದಾರೆ. ಬಾಲಾರಿಷ್ಟ ದೋಷಗಳಿಗೆ ಒಂದು ಸರಳ ಪರಿಹಾರವಿದೆ. ಶುದ್ಧ ಕುಂಕುಮವನ್ನು ನೀರಿನಲ್ಲಿ ಬೆರೆಸಿ, ಹೂವಿನ ಸಹಾಯದಿಂದ ಮಗುವಿನ ಮೇಲೆ ಅಥವಾ ಅವರ ಮಲಗುವ ಜಾಗದ ಮೇಲೆ ಮೂರು ಬಾರಿ ಸಿಂಪಡಿಸಬೇಕು. ಓಂ ಭೈರವಾಯ ನಮಃ ಎಂಬ ಮಂತ್ರವನ್ನು ಪಠಿಸುವುದು ಸಹ ಉತ್ತಮ.

Balarishta Dosha: ಮಕ್ಕಳಲ್ಲಿ ಕಂಡುಬರುವ ಬಾಲಾರಿಷ್ಟ ದೋಷಕ್ಕೆ ಸರಳ ಪರಿಹಾರ ಇಲ್ಲಿದೆ
ಬಾಲಾರಿಷ್ಟ ದೋಷ
ಅಕ್ಷತಾ ವರ್ಕಾಡಿ
|

Updated on: Aug 12, 2025 | 8:20 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರವೇನು ಎಂಬುದನ್ನು ವಿವರಿಸಿದ್ದಾರೆ. ಗುರೂಜಿ ಹೇಳುವಂತೆ, ಚಿಕ್ಕ ಮಕ್ಕಳಲ್ಲಿ ಅತಿಯಾದ ಅಳು, ಕಿರಿಚುವುದು, ಹಠಮಾಡುವುದು, ನಿದ್ರಾಹೀನತೆ ಮತ್ತು ಅನಿರೀಕ್ಷಿತ ಜ್ವರದಂತಹ ಸಮಸ್ಯೆಗಳು ಕಂಡುಬಂದರೆ, ಅದನ್ನು ಬಾಲಾರಿಷ್ಟ ದೋಷ ಎಂದು ಪರಿಗಣಿಸಲಾಗುತ್ತದೆ. ಈ ಸಮಸ್ಯೆಗಳು ಸಾಮಾನ್ಯವಾಗಿ ಒಂದು ವರ್ಷದಿಂದ ಹನ್ನೊಂದು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುತ್ತವೆ. ಮಕ್ಕಳ ವಯಸ್ಸು ಮತ್ತು ಅವರ ಮಾನಸಿಕ, ದೈಹಿಕ ಬೆಳವಣಿಗೆಯನ್ನು ಅವಲಂಬಿಸಿ ಈ ಸಮಸ್ಯೆಗಳ ತೀವ್ರತೆ ಬದಲಾಗುತ್ತದೆ. ವೈದ್ಯಕೀಯ ಸಲಹೆ ಪಡೆಯುವುದು ಅತ್ಯಗತ್ಯ. ವೈದ್ಯಕೀಯ ಚಿಕಿತ್ಸೆಯ ಜೊತೆಗೆ, ಪ್ರಾಚೀನ ನಂಬಿಕೆಗಳ ಪ್ರಕಾರ, ಬಾಲಾರಿಷ್ಟ ದೋಷ ನಿವಾರಣೆಗೆ ಕೆಲವು ಸರಳವಾದ ಪರಿಹಾರಗಳಿವೆ.

ಈ ಪರಿಹಾರಗಳಲ್ಲಿ ಒಂದು ಕುಂಕುಮದ ನೀರಿನ ಬಳಕೆ. ಶುದ್ಧ ಕುಂಕುಮವನ್ನು ಸ್ವಲ್ಪ ನೀರಿನಲ್ಲಿ ಬೆರೆಸಿ, ಅದನ್ನು ಹೂವಿನ ಸಹಾಯದಿಂದ ಮಗುವಿನ ಮೇಲೆ ಅಥವಾ ಅವರು ಮಲಗುವ ಸ್ಥಳದ ಮೇಲೆ ಮೂರು ಬಾರಿ ಸಿಂಪಡಿಸಬೇಕು. ಈ ಕ್ರಿಯೆಯನ್ನು ಬೆಳಿಗ್ಗೆ ಅಥವಾ ಸಂಜೆ, ಬ್ರಾಹ್ಮಿ ಮುಹೂರ್ತ, ಅಭಿಜಿತ್ ಮುಹೂರ್ತ ಅಥವಾ ಗೋಧೂಳಿ ಮುಹೂರ್ತದ ಸಮಯದಲ್ಲಿ ಮಾಡುವುದು ಉತ್ತಮ ಎಂದು ನಂಬಲಾಗಿದೆ. ಈ ಕ್ರಿಯೆಯ ಸಮಯದಲ್ಲಿ “ಓಂ ಭೈರವಾಯ ನಮಃ” ಎಂಬ ಮಂತ್ರವನ್ನು ಪಠಿಸಬಹುದು. ತುಳಸಿ ಎಲೆಯನ್ನು ಬಳಸಿ ಕುಂಕುಮದ ನೀರನ್ನು ಸಿಂಪಡಿಸುವುದರಿಂದಲೂ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ನಂಬಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ದೇವರಿಗೆ ಆರತಿ ಮಾಡುವಾಗ ಕಣ್ಣು ಮುಚ್ಚಬಾರದು ಎಂದು ಹೇಳುವುದೇಕೆ? ಕಾರಣ ಇಲ್ಲಿದೆ

ಇದು ಪರಿಹಾರ ಒಂದು ಪೂರ್ವಿಕರಿಂದ ಬಂದಿರುವ ನಂಬಿಕೆಯಾಗಿದೆ. ಅರಿಶಿಣ ಅಥವಾ ಸುಣ್ಣವನ್ನು ಕುಂಕುಮದ ನೀರಿಗೆ ಬೆರೆಸಬಾರದು. ಕುಂಕುಮದ ನೀರನ್ನು ಕೈಯಿಂದ ಸಿಂಪಡಿಸದೆ, ಹೂವಿನ ಸಹಾಯದಿಂದ ಸಿಂಪಡಿಸುವುದು ಮುಖ್ಯ. ಈ ಪರಿಹಾರವು ಯಾವುದೇ ವೆಚ್ಚವಿಲ್ಲದ, ಸುಲಭವಾಗಿ ಮನೆಯಲ್ಲಿ ಮಾಡಬಹುದಾದ ಒಂದು ಪರಿಹಾರವಾಗಿದೆ. ಆದಾಗ್ಯೂ, ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆಯನ್ನು ನಿರ್ಲಕ್ಷಿಸದೇ ಇರುವುದು ಅತಿ ಮುಖ್ಯ ಎಂದು ಗುರೂಜಿ ಎಚ್ಚರಿಕೆ ನೀಡುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!