AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basava Jayanti 2021: ಬಸವಣ್ಣನವರ ತತ್ವಾದರ್ಶಗಳು ಯುವ ಪಿಳಿಗೆಗೆ ಹುರುಪು ನೀಡುವ ಸಂದೇಶಗಳಾಗಿವೆ

Basaveshwara Jayanti 2021: ಹೆಣ್ಣು ಮಕ್ಕಳಿಗೂ ಕೂಡ ಸಮಾನ ಶಿಕ್ಷಣ ನೀಡಬೇಕು ಎನ್ನುವ ಬಸವಣ್ಣನವರ ಈ ಪರಿಕಲ್ಪನೆ ಇಂದು ಹೆಣ್ಣು ಮಕ್ಕಳು ಸಾಧನೆಯತ್ತ ಮುಂದೆ ಸಾಗಲು ಸಹಾಯಕವಾಗಿದೆ. ಹೀಗಾಗಿ ವಿಶ್ವಗುರು ಬಸವಣ್ಣನವರು ಇಂದಿಗೂ ಕೂಡ ಜನರ ಮನದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ.

Basava Jayanti 2021: ಬಸವಣ್ಣನವರ ತತ್ವಾದರ್ಶಗಳು ಯುವ ಪಿಳಿಗೆಗೆ ಹುರುಪು ನೀಡುವ ಸಂದೇಶಗಳಾಗಿವೆ
ಬಸವ ಜಯಂತಿ
preethi shettigar
|

Updated on: May 14, 2021 | 9:44 AM

Share

ಬಸವ ಜಯಂತಿಯನ್ನು 12 ನೇ ಶತಮಾನದ ಕವಿ, ದಾರ್ಶನಿಕ ಮತ್ತು ಲಿಂಗಾಯತ ಎಂಬ ಪರಿಕಲ್ಪನೆಯ ಸ್ಥಾಪಕ ಸಂತ ಭಗವಾನ್ ಬಸವಣ್ಣನವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಲಿಂಗಾಯತ ಸಮುದಾಯದ ಜನರು ಹೆಚ್ಚಾಗಿ ಆಚರಿಸುತ್ತಾರೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಭಾಗಗಳಲ್ಲಿ ಹೆಚ್ಚಿನ ಅಭಿಮಾನಿಗಳೊಂದಿಗೆ ಆಚರಿಸಲ್ಪಡುವ ಈ ದಿನ ಅತ್ಯಂತ ವಿಶೇಷತೆಯನ್ನು ಒಳಗೊಂಡ ದಿನವಾಗಿದೆ.

ಈ ದಿನದಂದು ಜನರು ಶುಭಾಶಯದ ಸಂದೇಶವನ್ನು ಪರಸ್ಪರ ಕೋರುತ್ತಾರೆ. ಈ ಶುಭಾಶಯದ ಸಂದೇಶಗಳು ಬಸವಣ್ಣನವರ ವಚನಗಳ ರೂಪದಲ್ಲಿರುತ್ತದೆ ಎನ್ನುವುದು ಮತ್ತೊಂದು ವಿಶೇಷ. ಆ ಮೂಲಕ ಅವರ ಬೋಧನೆಗಳು ಮತ್ತು ವಚನಗಳನ್ನು ಪಠಿಸುತ್ತಾರೆ ಮತ್ತು ಬಸವಣ್ಣನವರನ್ನು ಸ್ಮರಿಸುತ್ತಾರೆ. ‘ವಾಸುದೈವ ಕುಟುಂಬಕಂ’ (ಸಾರ್ವತ್ರಿಕ ಭ್ರಾತೃತ್ವ) ಸಂದೇಶವನ್ನು ರವಾನಿಸುವುದು ಬಸವ ಜಯಂತಿಯ ಉದ್ದೇಶ. ದೇವರು ಮತ್ತು ಜೀವನವನ್ನು ನೋಡುವ ಹೊಸ ಮಾರ್ಗವನ್ನು ವ್ಯಾಖ್ಯಾನಿಸುವ ಬಸವಣ್ಣನವರ ವಚನಗಳು ಇಂದಿಗೂ ಅಭಿವ್ಯಕ್ತಿಯನ್ನು ಕಂಡುಕೊಂಡಿದೆ ಹಾಗೂ ಜನರಿಗೆ ಹೊಸ ಹುರುಪನ್ನು ನೀಡುತ್ತದೆ.

ಅನುಭವ ಮಂಟಪದ ಸ್ಥಾಪಕ: ಬಸವಣ್ಣನವರ ಅನುಭವ ಮಂಟಪ ಎನ್ನುವ ಅದ್ಭುತ ಪರಿಕಲ್ಪನೆ ನಿಜಕ್ಕೂ ಮಾದರಿಯುತವಾದದ್ದು, ಇದು ಎಲ್ಲಾ ವರ್ಗದವರನ್ನು ಒಂದೆಡೆ ತರುವ ಪ್ರಯತ್ನವಾಗಿತ್ತು. ಆ ಮೂಲಕ ಸಮಾಜದಲ್ಲಿ ಬೇರೂರಿದ್ದ ತಾರತಮ್ಯ, ಅಂದಶ್ರದ್ಧೆಯನ್ನು ದೂರ ಮಾಡುವ ಕಾರ್ಯಮಾಡಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಮೇಲೇರಲು ಸಮಾನ ಅವಕಾಶವನ್ನು ನೀಡಿದ ಬಸವಣ್ಣನವರ ತತ್ವಾದರ್ಶಗಳು ಇಂದಿಗೂ ಮಾದರಿ. ಹೀಗಾಗಿ ಮೇ 14 ರಂದು ಅವರ ನೆನಪಿಗಾಗಿ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ.

ಹೆಣ್ಣು ಮಕ್ಕಳಿಗೂ ಕೂಡ ಸಮಾನ ಶಿಕ್ಷಣ ನೀಡಬೇಕು ಎನ್ನುವ ಬಸವಣ್ಣನವರ ಈ ಪರಿಕಲ್ಪನೆ ಇಂದು ಹೆಣ್ಣು ಮಕ್ಕಳು ಸಾಧನೆಯತ್ತ ಮುಂದೆ ಸಾಗಲು ಸಹಾಯಕವಾಗಿದೆ. ಹೀಗಾಗಿ ವಿಶ್ವಗುರು ಬಸವಣ್ಣನವರು ಇಂದಿಗೂ ಕೂಡ ಜನರ ಮನದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ ಮತ್ತು ಅವರ ತತ್ವಾದರ್ಶಗಳು ಇಂದಿಗೂ ಯುವ ಪಿಳಿಗೆಗೆ ಸ್ಪೂರ್ತಿದಾಯಕವಾಗಿದೆ.

ಇದನ್ನೂ ಓದಿ:

Akshaya Tritiya 2021: ಅಕ್ಷಯ ತೃತೀಯ ಹಬ್ಬದ, ಮಹತ್ವ, ವಿಶೇಷತೆ ಮತ್ತು ಪೂಜಾ ವಿಧಾನ ಇಲ್ಲಿದೆ

Gold Silver Rate Today: ಅಕ್ಷಯ ತೃತೀಯದಂದು ಚಿನ್ನ ಕೊಳ್ಳಿರಿ; ಶುಭ ದಿನದಂದು ಚಿನ್ನ, ಬೆಳ್ಳಿ ದರ ಹೀಗಿದೆ!

ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ