AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Karaga: ಬೆಂಗಳೂರು ಕರಗ ಮೆರವಣಿಗೆಯಲ್ಲಿ ಸಾಗುತ್ತಾ ತಪ್ಪದೆ ದರ್ಗಾಗೆ ಹೋಗುವುದೇಕೆ ಗೊತ್ತಾ!? ಮಿಸ್ ಮಾಡದೆ ವಿಡಿಯೋ ನೋಡಿ

ಆ ಘಟನೆಯ ನಂತರ, ಕರಗ ಹೊರುವವರು ಪ್ರತಿ ವರ್ಷ ತಪ್ಪದೇ ದರ್ಗಾಗೆ ಬಂದು ಹೋಗುವುದಾಗಿ ಆಣೆ ಮಾಡುತ್ತಾರೆ. ಇದು ಕರಗವು ದರ್ಗಾಗೆ ಬರಲು ಕಾರಣ ಎಂದು ಅಕ್ಕಿಪೇಟೆ ರಸ್ತೆಯ ತವಕ್ಕಲ್‌ ಮಸ್ತಾನ್‌ ದರ್ಗಾದ ಮುಜಾವರ್ ಇಂತಿಯಾಜ್ ಅಹ್ಮದ್ ಅವರು ವಿವರಿಸಿದ್ದಾರೆ. ಭಕ್ತಿ ಪ್ರಧಾನ ಕಹಾನಿ ಇಲ್ಲಿದೆ ಓದಿ.

Bengaluru Karaga: ಬೆಂಗಳೂರು ಕರಗ ಮೆರವಣಿಗೆಯಲ್ಲಿ ಸಾಗುತ್ತಾ ತಪ್ಪದೆ ದರ್ಗಾಗೆ ಹೋಗುವುದೇಕೆ ಗೊತ್ತಾ!? ಮಿಸ್ ಮಾಡದೆ ವಿಡಿಯೋ ನೋಡಿ
ದರ್ಗಾಗೆ ಭೇಟಿ ನೀಡಿದ ಬೆಂಗಳೂರು ಕರಗ
ಆಯೇಷಾ ಬಾನು
|

Updated on:Apr 27, 2024 | 4:33 PM

Share

ಕತ್ತಲ ರಾತ್ರಿ, ಪೂರ್ಣಿಮೆ ಬೆಳಕಲ್ಲಿ ಮುತ್ತೈದೆ ಉಡುಪು ಧರಿಸಿ ತಾಯಿ ದ್ರೌಪದಿಯ ಪ್ರತಿರೂಪದಂತೆ ತೋರುವ ಪೂಜಾರಿ. ಆತನ ಸುತ್ತ ಸಾವಿರಾರು ವೀರಗಾರರು ಕೈಯಲ್ಲಿ ಕತ್ತಿ ಹಿಡಿದು ಗೋವಿಂದ ಗೋವಿಂದ ಎಂಬ ಕೂಗು. ಬೀದಿ ಬೀದಿಯಲ್ಲಿ ರಾಜಕಳೆ. ಗೆಜ್ಜೆ ಸದ್ದು, ಪೂಜಾ ಕುಣಿತ, ವಾದ್ಯಗಳ ಮೇಳ. ಹೂವಿನ ಕರಗ ಹೊತ್ತ ಪೂಜಾರಿ ಮುಸ್ಲಿಂ ಸಂತನ ಸಮಾಧಿಗೆ ಭೇಟಿ ನೀಡಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರುವ ಈ ಆಚರಣೆ ಬಗ್ಗೆ ನಿಮಗೆ ತಿಳಿದಿರಬಹುದು. ಮಹಾಭಾರತದ ಸಮಯದ ಹುಟ್ಟಿಕೊಂಡ ಈ ಆಚರಣೆಯೇ ಬೆಂಗಳೂರು ಕರಗ. ಕರ್ನಾಟಕದಲ್ಲಿ ಕರಗ ಉತ್ಸವವನ್ನು ನಾನಾ ರೀತಿಯಲ್ಲಿ ಆಚರಿಸಲಾಗುತ್ತೆ. ಆದರೆ ಬೆಂಗಳೂರು ಕರಗ ಎಲ್ಲದಕ್ಕಿಂತ ದೊಡ್ಡದು. ಹಾಗೂ ಪೌರಾಣಿಕ ಹಿನ್ನೆಲೆಯನ್ನು ಹೊಂದಿರುವ ವಿಶ್ವವಿಖ್ಯಾತ ಜಾನಪದ ಆಚರಣೆ. ಇಲ್ಲಿ ಆದಿಶಕ್ತಿ ಶ್ರೀ ದ್ರೌಪದಿಯನ್ನು, ವಹ್ನಿಕುಲ ಕ್ಷತ್ರಿಯ ಜನಾಂಗದವರು ಕುಲದೇವತೆಯಾಗಿ ಆರಾಧಿಸುತ್ತಾರೆ. ಬೆಂಗಳೂರಿನ ತಿಗಳರಪೇಟೆಯಲ್ಲಿ ವಹ್ನಿಕುಲ ಅಥವಾ ತಿಗಳ ಸಮುದಾಯದವರು ಕರಗ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಇವರ ನಂಬಿಕೆಗಳ ಪ್ರಕಾರ ದ್ರೌಪದಿ ಮತ್ತು ಪಾಂಡವರಲ್ಲಿ ಹಿರಿಯನಾದ ಧರ್ಮರಾಯನಿಗೆ ಮೀಸಲಿಟ್ಟು ಇಲ್ಲಿ ಸುಮಾರು 800 ವರ್ಷಗಳ ಹಿಂದೆ ದೇವಾಲಯ ನಿರ್ಮಿಸಿ ಪೂಜಿಸಿಕೊಂಡು ಬರಲಾಗುತ್ತಿದೆ. ಹಾಗೂ ಅಂದಾಜು 5 ಶತಮಾನಗಳಿಂದ ತಿಗಳರು ಬೆಂಗಳೂರಿನ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಕರಗ ಉತ್ಸವವನ್ನು ಆಚರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಪ್ರತೀ ವರ್ಷ ಯುಗಾದಿ ಹಬ್ಬದ ನಂತರ ಕರಗ ಉತ್ಸವಕ್ಕೆ ಚಾಲನೆ ಸಿಗುತ್ತೆ. ದ್ವಾದಶಿಯಂದು ಆರತಿ ಸೇವೆ ಮತ್ತು ದೀಪೋತ್ಸವ ನಡೆಯುತ್ತೆ. ಮತ್ತು ತ್ರಯೋದಶಿಯಂದು ಹಸಿಕರಗ. ಪೂರ್ಣಿಮೆಯಂದು ಕರಗದ ಉತ್ಸವ ನಡೆಯುತ್ತೆ. ಬೆಂಗಳೂರಿನ ತಿಗಳರ ಪೇಟೆಯಲ್ಲಿರುವ ದ್ರೌಪದಿ ಹಾಗೂ...

Published On - 4:24 pm, Wed, 10 April 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ