AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spiritual Health Practices: ಯಾವುದೇ ಕಾಯಿಲೆ ಓಡಿಸುವ ಪುರಾತನ, ಸಾರ್ವಕಾಲಿಕ, ಸರಳ ಚಿಕಿತ್ಸಾ ಸೂತ್ರಗಳು ಇಲ್ಲಿವೆ

ಪೂರ್ವಾಪರ ವಿಮರ್ಶೆ ಹಾಗೂ ವಿವೇಕಗಳನ್ನು ನಿಮ್ಮದಾಗಿಸಿಕೊಂಡಲ್ಲಿ ಎಂಥ ವಿಷಮ ಪರಿಸ್ಥಿತಿಯನ್ನೂ, ಸಂದಿಗ್ಧ ಸನ್ನಿವೇಶಗಳಲ್ಲೂ ಯಶಸ್ಸು ನಿಮ್ಮದಾಗಬಹುದು. ಎಂಥ ವಿಷಮ ಪರಿಸ್ಥಿತಿಯನ್ನೂ ಸರಿಪಡಿಸುವ ನವಶಕ್ತಿ ಸಂಜೀವಿನಿಯ ರಸಭರಿತ ಟಾನಿಕ್ ಇದಲ್ಲದೆ ಬೇರೆ ಇರದು.

Spiritual Health Practices: ಯಾವುದೇ ಕಾಯಿಲೆ ಓಡಿಸುವ ಪುರಾತನ, ಸಾರ್ವಕಾಲಿಕ, ಸರಳ ಚಿಕಿತ್ಸಾ ಸೂತ್ರಗಳು ಇಲ್ಲಿವೆ
ಯಾವುದೇ ಕಾಯಿಲೆಯನ್ನು ಓಡಿಸುವ ಪುರಾತನ, ಸಾರ್ವಕಾಲಿಕ ಸರಳ ಚಿಕಿತ್ಸಾ ಸೂತ್ರಗಳು ಇಲ್ಲಿವೆ
TV9 Web
| Updated By: ಸಾಧು ಶ್ರೀನಾಥ್​|

Updated on: Apr 07, 2022 | 6:06 AM

Share

ನೀವು ಶಿವಲಿಂಗದ ಮೇಲಿರುವ ಧಾರಾಪಾತ್ರೆಯನ್ನು ನೋಡಿದ್ದೀರಾ? ಆದರಿಂದ ಹನಿ ಹನಿಯಾಗಿ ಬೀಳುವ ಜಲದಂತೆ ದಿನ ನಿತ್ಯವೂ ಹಟ ತೊಟ್ಟು ಈ ಕೆಳಗಿನ ಭಾವನೆಗಳನ್ನು ನಿಮ್ಮದಾಗಿಸಿಕೊಂಡರೆ ಮನಸ್ಸು ಪ್ರಸನ್ನವಾಗಿ ಇರಲು ಸಾಧ್ಯ. ಯಾವುದೇ ಟಾನಿಕ್ಕು, ಮಾತ್ರೆಗಳಿಗಿಂತ ಇದು ಹೆಚ್ಚು ಆರೋಗ್ಯಕಾರಿ. ಸದ್ಭಾವನೆಗಳಿಂದ ಆರೋಗ್ಯಕ್ಕೆ ಎಂದಿಗೂ ಕೆಡಕು ಆಗದು (Everyday Spiritual Health Practices).

  1. ಜೀವಿಗಳಲ್ಲಿ ಅನುಕಂಪ, ದಯೆ, ಸಹಾನುಭೂತಿಗಳನ್ನು ಬೆಳೆಸಿ ಉಳಿಸಿಕೊಂಡಲ್ಲಿ ತನ್ಮೂಲಕ ಆಂತರಿಕ ಸುಖ ಸಂತೋಷ ಹೆಚ್ಚುತ್ತದೆ ಮಾತ್ರವಲ್ಲ, ಎಲ್ಲ ಜೀರ್ಣರಸಗಳ ನಿರಾತಂಕ ಉತ್ಪಾದನೆಯಿಂದ ಸಂಬಂಧಿತ ರೋಗರುಜಿನಗಳು ದೂರವಾಗುತ್ತವೆ.
  2. ಮಾತು ಕಡಿಮೆ – ಜಾಸ್ತಿ ದುಡಿಮೆ ಎಂಬ ತತ್ವದ ಅನ್ವಯ ಅನವಶ್ಯಕ ಮಾತುಕತೆ, ಕ್ಷುಲ್ಲಕ ವ್ಯವಹಾರಗಳನ್ನು ನಿಲ್ಲಿಸಿ ಕಾರ್ಯೋನ್ಮುಖರಾದಲ್ಲಿ ಆಸ್ಪತ್ರೆಯ ಒಳ ರೋಗಿಯಾಗಿ ನರಳುವ ಪ್ರಮೇಯವೇ ಬಾರದು, ಬಂಗಾರದ ಬದುಕು ಕನ್ನಡಿಯೊಳಗಿನ ಗಂಟಿನಂತೆ ಎಂದೆಂದಿಗೂ ಆಗದು.
  3. ಪರೋಪಕಾರ ಗುಣ, ಉದಾರತೆ ಹಾಗೂ ಸಹಕಾರ ಮನೋಭಾವವನ್ನು ದೇಹದ ಕಣಕಣದಲ್ಲೂ ತುಂಬಿಕೊಂಡು, ಹೃದಯದ ಮಿಡಿತದೊಂದಿಗೆ ಪ್ರತಿಸ್ಪಂದಿಸುತ್ತಿದ್ದರೆ, ಕಳ್ಳತನ, ಕೊಲೆ, ಸುಲಿಗೆ, ಅನ್ಯಾಯ, ಅನಾಚಾರಗಳ ಯಾವ ಸಾಂಕ್ರಾಮಿಕ ರೋಗವೂ ಬಂದು ತಟ್ಟದು.
  4. ಬಿಗುಮಾನವನ್ನು ತೊರೆದು ನಗುವನ್ನು ಹೊರಸೂಸುತ್ತಾ, ಆತ್ಮವಿಶ್ವಾಸದ ಕೆಚ್ಚಿನಿಂದ ಮುನ್ನಡೆದಲ್ಲಿ ಪರಸ್ಪರ ವ್ಯಷಮ್ಯದ, ವಿರೋಧದ ಯಾವುದೇ ಗಾಯವನ್ನೂ ಬೇಗ ವಾಸಿಮಾಡಬಹುದು.
  5. ತಾಳಿದವನು ಬಾಳಿಯಾನು ಎಂಬುದನ್ನು ನೆಚ್ಚಿ ಸಹನೆಯನ್ನು ಹೆಚ್ಚಿಸಿಕೊಂಡು ವರ್ತಿಸಿದಲ್ಲಿ ದೂರದೃಷ್ಟಿಯೊಂದಿಗೆ ಅಂತದೃಷ್ಟಿಯೂ ವೃದ್ಧಿಸಿ ಬಾಳು ಬೆಳಗುತ್ತಾ ಹೋದೀತು, ಜೀವನ ಜೇನಾದೀತು!
  6. ಪೂರ್ವಾಪರ ವಿಮರ್ಶೆ ಹಾಗೂ ವಿವೇಕಗಳನ್ನು ನಿಮ್ಮದಾಗಿಸಿಕೊಂಡಲ್ಲಿ ಎಂಥ ವಿಷಮ ಪರಿಸ್ಥಿತಿಯನ್ನೂ, ಸಂದಿಗ್ಧ ಸನ್ನಿವೇಶಗಳಲ್ಲೂ ಯಶಸ್ಸು ನಿಮ್ಮದಾಗಬಹುದು. ಎಂಥ ವಿಷಮ ಪರಿಸ್ಥಿತಿಯನ್ನೂ ಸರಿಪಡಿಸುವ ನವಶಕ್ತಿ ಸಂಜೀವಿನಿಯ ರಸಭರಿತ ಟಾನಿಕ್ ಇದಲ್ಲದೆ ಬೇರೆ ಇರದು.
  7. ದಿನನಿತ್ಯವೂ ಮಾಡುವ ಕ್ರಮಬದ್ಧ ಪ್ರಾರ್ಥನೆಯಿಂದ ದೇಹದ ಸರ್ವೋತೋಮುಖ ಏಳಿಗೆ ಸುಲಭ ಸಾಧ್ಯವಾಗಿ, ಆಂತರಿಕ ಶಕ್ತಿ ಚ್ಯೆತನ್ಯ ಹಾಗು ಸ್ಥಿರತೆ ಹೆಚ್ಚುತ್ತದೆ. ತನ್ಮೂಲಕ ಇತರರಲ್ಲೂ ಈ ಹೊಸತನ ಹಾಗೂ ಸ್ಪೂರ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಪುಟಿದೇಳುತ್ತದೆ. (ಬರಹ – ವಾಟ್ಸಪ್​ ಸಂದೇಶ)

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್