AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ? ಶಾಸ್ತ್ರಗಳು ಹೇಳುವುದೇನು?

ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬ ಪ್ರಶ್ನೆಗೆ, ಲಿಂಗಭೇದವಿಲ್ಲದೆ ಅರ್ಹತೆ ಮುಖ್ಯ ಎಂದು ಶಾಸ್ತ್ರಗಳು ಹೇಳುತ್ತವೆ. ತಾಳ್ಮೆ, ಶಾಂತಿ, ಉತ್ತಮ ಮನಸ್ಸು ಹೊಂದಿದ ಮಹಿಳೆಯರು ಅರ್ಚಕ ವೃತ್ತಿಯನ್ನು ನಿರ್ವಹಿಸಬಹುದು. ಮೈತ್ರೇಯಿ, ಲೋಪಮುದ್ರರಂತಹ ವಿದ್ವಾಂಸರು, ಮಹಿಳಾ ಮಠಾಧೀಶರು ಇರುವುದನ್ನು ಉದಾಹರಿಸುತ್ತಾ, ಭಕ್ತಿ ಮತ್ತು ಅರ್ಹತೆಗೆ ಆದ್ಯತೆ ನೀಡಲಾಗುತ್ತದೆ.

Daily Devotional: ದೇವಸ್ಥಾನಗಳಲ್ಲಿ ಮಹಿಳೆಯರು ಅರ್ಚಕರಾಗಬಹುದೇ? ಶಾಸ್ತ್ರಗಳು ಹೇಳುವುದೇನು?
ಮಹಿಳೆಯರು ಅರ್ಚಕರಾಗಬಹುದೇ?Image Credit source: Pinterest
ಅಕ್ಷತಾ ವರ್ಕಾಡಿ
|

Updated on: May 30, 2026 | 8:07 AM

Share

ಅರ್ಚಕ ವೃತ್ತಿಗೆ ನಮ್ಮ ಸಂಸ್ಕೃತಿಯಲ್ಲಿ ಅತೀವ ಮಹತ್ವವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ಸೂಕ್ತಿ ಹೇಳುವಂತೆ, ಅರ್ಚಕರು ಮನಸ್ಸು ಮಾಡಿದರೆ ಒಂದು ಶಿಲೆಯಲ್ಲಿನ ಮೂರ್ತಿಯಲ್ಲೂ ಕೂಡ ಭಗವಂತನ ಶಕ್ತಿ ನೆಲೆಸುತ್ತದೆ. ಅರ್ಚಕರು ಭಗವಂತ ಮತ್ತು ನಮ್ಮ ನಡುವೆ ಇರುವ ಬಹುದೊಡ್ಡ ಶಕ್ತಿ. ಈ ವೃತ್ತಿಯು ಒಂದು ವಿಶೇಷವಾದ ಪುಣ್ಯದ ವೃತ್ತಿ. ಈ ಅರ್ಚಕ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬುದು ಪ್ರಸ್ತುತ ಪ್ರಶ್ನೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಕೆಲವು ದೇವಾಲಯಗಳಲ್ಲಿ, ಹಳ್ಳಿಗಳಲ್ಲಿ ಮಹಿಳೆಯರು ಬೆಳಗಿನ ಜಾವ ಎದ್ದು ಪೂಜೆ, ಅಭಿಷೇಕ, ಅಷ್ಟೋತ್ರಗಳನ್ನು ಮಾಡಿ ಭಗವಂತನಿಗೆ ಅರ್ಪಣೆ ಮಾಡುವ ಸಾಧ್ಯತೆಗಳನ್ನು ನಾವು ನೋಡಿದ್ದೇವೆ. ಆದರೆ, ಕೆಲವರ ಮನಸ್ಸಿನಲ್ಲಿ ಇದು ಸರಿನಾ ಎಂಬ ಗೊಂದಲವಿದೆ. ಆದರೆ, ಅರ್ಚಕ ವೃತ್ತಿಯಲ್ಲಿ ಪುರುಷಲಿಂಗ ಅಥವಾ ಸ್ತ್ರೀಲಿಂಗಕ್ಕೆ ಪ್ರಾಶಸ್ತ್ಯ ಎಂಬುದು ಎಲ್ಲೂ ಇಲ್ಲ. ಅರ್ಚಕರಿಗೆ ಪಂಡಿತ, ಪುರೋಹಿತ, ಪೂಜಾರಿ ಎಂದು ಹಲವು ಹೆಸರುಗಳಿಂದ ಕರೆಯಲಾಗುತ್ತದೆ.

ದೇವಾಲಯ ಪೂಜೆಗಳು, ದೊಡ್ಡ ಯಜ್ಞ ಯಾಗಾದಿಗಳು, ಹೋಮಗಳು, ಪ್ರತಿಷ್ಠಾಪನೆಗಳ ವಿಚಾರದಲ್ಲಿ ಮಹಿಳೆಯರು ಈ ವೃತ್ತಿಯನ್ನು ನಿರ್ವಹಿಸಬಹುದೇ ಎಂದು ನೋಡಿದರೆ, ಖಂಡಿತವಾಗಿಯೂ ಮಹಿಳೆಯರು ಈ ಎಲ್ಲಾ ಕಾರ್ಯಗಳನ್ನು ಮಾಡಬಹುದು. ಇಂತಹ ಕಾರ್ಯಗಳನ್ನು ಮಾಡಲು ಬೇಕಾದ ಯೋಗ ಮತ್ತು ಸಾಮರ್ಥ್ಯ ತಾಯಿಯಲ್ಲಿ ಇರುತ್ತದೆ. ಇದಕ್ಕೆ ಯಾವುದೇ ನಿಬಂಧನೆಗಳಿಲ್ಲ. ಅರ್ಹತೆ ಮಾತ್ರ ಮುಖ್ಯ. ಈ ಅರ್ಹತೆ ಎಂದರೆ ತಾಳ್ಮೆ, ಶಾಂತಿ ಮತ್ತು ಶುದ್ಧ ಮನಸ್ಸು. ಇದನ್ನೂ ಕೂಡ ಅರ್ಹತೆಯ ಒಂದು ಭಾಗವೆಂದು ಪರಿಗಣಿಸಬಹುದು.

ಇದನ್ನೂ ಓದಿ: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ!

ವೇದಗಳು ಮತ್ತು ಧಾರ್ಮಿಕ ಆಚರಣೆಗಳಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಶಾಸ್ತ್ರಗಳಲ್ಲಿ ಉಲ್ಲೇಖವಿದೆ. ಹಿಂದೆ ಅನೇಕ ಮಹಿಳಾ ವಿದ್ವಾಂಸರು ಇದ್ದ ಉದಾಹರಣೆಗಳಿವೆ. ಋಷಿಮುನಿಗಳ ಪತ್ನಿಯರು ಕೂಡ ಮಹಾ ಮೇಧಾವಿಗಳು ಮತ್ತು ವಿದ್ವಾಂಸರಾಗಿದ್ದರು. ಯಾಜ್ಞವಲ್ಕ್ಯ ಋಷಿಗಳ ಮಗಳು ಮೈತ್ರೇಯಿ ಮತ್ತು ವೇದಗಳ ಸಂಕೀರ್ಣ ಸ್ತೋತ್ರಗಳನ್ನು ರಚಿಸಿದ ಲೋಪಮುದ್ರಾ ದೇವಿ ಇದಕ್ಕೆ ಉತ್ತಮ ಉದಾಹರಣೆಗಳು. ಆಧ್ಯಾತ್ಮಿಕ ವಿಷಯಗಳಲ್ಲಿ ಲಿಂಗಭೇದವಿಲ್ಲ. ಮಠಾಧೀಶರು ಪುರುಷರೇ ಆಗಬೇಕೆಂಬ ನಿಯಮವಿಲ್ಲ, ಸಾಕಷ್ಟು ಮಹಿಳೆಯರು ಈಗಾಗಲೇ ಮಠಾಧೀಶರಾಗಿ ಯಶಸ್ವಿಯಾಗಿ ಧರ್ಮ ರಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿ ಅರ್ಹತೆ ಮತ್ತು ಅಧ್ಯಯನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಆದ್ದರಿಂದ, ಮಹಿಳೆಯರು ಅರ್ಚಕರಾಗಬಹುದು, ಪೂಜಾರಿಗಳಾಗಬಹುದು, ಪಂಡಿತರಾಗಬಹುದು, ಹೋಮ ಯಜ್ಞ ಯಾಗಾದಿಗಳನ್ನು ಮಾಡಬಹುದು. ಅವರಿಗೆ ಅರ್ಹತೆ ಮತ್ತು ಯೋಗ ಇದ್ದಾಗ ಇದನ್ನು ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ