AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಮನೆಯಲ್ಲಿ ಮನಿ ಪ್ಲಾಂಟ್ ಒಂದಿದ್ದರೆ ಸಾಲದು; ಸಂಪತ್ತು ದ್ವಿಗುಣಗೊಳಿಸಲು ಈ ಗಿಡಗಳೂ ಬೇಕು!

ಮನೆಯಲ್ಲಿ ಕೇವಲ ಮನಿ ಪ್ಲಾಂಟ್ ಇಟ್ಟರೆ ಸಾಲದು. ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಮತ್ತು ಬಿದಿರಿನ ಗಿಡಗಳನ್ನು ಮನೆಯಲ್ಲಿ ಸೂಕ್ತ ದಿಕ್ಕಿನಲ್ಲಿ ನೆಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗಿ, ಆರ್ಥಿಕ ಅಭಿವೃದ್ಧಿ ಮತ್ತು ಅದೃಷ್ಟ ದ್ವಿಗುಣಗೊಳ್ಳುತ್ತದೆ ಎಂದು ನಂಬಲಾಗಿದೆ. ಇದು ವ್ಯಾಪಾರ ಮತ್ತು ಉದ್ಯೋಗದಲ್ಲಿ ಪ್ರಗತಿ ತಂದುಕೊಟ್ಟು, ಮನೆಯ ಸಂಪತ್ತನ್ನು ದ್ವಿಗುಣಗೊಳಿಸಲು ಸಹಕಾರಿಯಾಗಿದೆ.

Vasthu Tips: ಮನೆಯಲ್ಲಿ ಮನಿ ಪ್ಲಾಂಟ್ ಒಂದಿದ್ದರೆ ಸಾಲದು; ಸಂಪತ್ತು ದ್ವಿಗುಣಗೊಳಿಸಲು ಈ ಗಿಡಗಳೂ ಬೇಕು!
ವಾಸ್ತು ಶಾಸ್ತ್ರImage Credit source: Getty Images
ಅಕ್ಷತಾ ವರ್ಕಾಡಿ
|

Updated on:Jul 28, 2026 | 10:56 AM

Share

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಮನಿ ಪ್ಲಾಂಟ್ (Money Plant) ಇರುವುದು ಸಾಮಾನ್ಯ. ಮನೆಗೆ ಸುಂದರ ರೂಪ ನೀಡುವ ಜೊತೆಗೆ, ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿ ಎಂಬ ನಂಬಿಕೆಯಿಂದ ಹೆಚ್ಚಿನವರು ಇದನ್ನು ಬೆಳೆಸುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೇವಲ ಮನಿ ಪ್ಲಾಂಟ್ ಒಂದಿದ್ದರೆ ಸಾಲದು. ಅದರ ಜೊತೆಗೆ ಕೆಲವು ವಿಶೇಷ ಗಿಡಗಳನ್ನು ನೆಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿ, ಆರ್ಥಿಕ ಮುಗ್ಗಟ್ಟು ದೂರವಾಗುತ್ತದೆ. ವಾಸ್ತು ವಿದ್ವಾಂಸರ ಪ್ರಕಾರ, ಮನಿ ಪ್ಲಾಂಟ್ ಹೊರತುಪಡಿಸಿ ನಿಮ್ಮ ಮನೆಯಲ್ಲಿರಬೇಕಾದ ಅತ್ಯಂತ ಶುಭ ತರುವ ಸಸ್ಯಗಳ ವಿವರ ಇಲ್ಲಿದೆ.

ತುಳಸಿ ಗಿಡ (Tulsi Plant):

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನವಿದೆ. ಈ ಸಸ್ಯ ಮನೆಯಲ್ಲಿರುವ ದುಷ್ಟ ಶಕ್ತಿ ಹಾಗೂ ನಕಾರಾತ್ಮಕತೆಯನ್ನು ತುಳಸಿ ಧೂಳೀಪಟ ಮಾಡುತ್ತದೆ. ತುಳಸಿ ಗಿಡವನ್ನು ಮನೆಯ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಇಡುವುದು ಅತ್ಯಂತ ಶುಭ. ಇದು ಕುಟುಂಬದಲ್ಲಿ ಶಾಂತಿ, ನೆಮ್ಮದಿ ತರುವುದಲ್ಲದೆ ಲಕ್ಷ್ಮೀ ದೇವಿಯ ಅನುಗ್ರಹದಿಂದ ಆರ್ಥಿಕ ಅಭಿವೃದ್ಧಿಗೆ ಹಾದಿ ಮಾಡಿಕೊಡುತ್ತದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ಬಿದಿರಿನ ಗಿಡ (Lucky Bamboo):

ಅನೇಕರು ಮನಿ ಪ್ಲಾಂಟ್ ಇಟ್ಟರೆ ಸಾಕು ಆದಾಯ ದ್ವಿಗುಣಗೊಳ್ಳುತ್ತದೆ ಎಂದು ಭಾವಿಸುತ್ತಾರೆ. ಆದರೆ ವಾಸ್ತು ಪ್ರಕಾರ ಬಿದಿರಿನ ಗಿಡ (Bamboo Plant) ಅದಕ್ಕಿಂತಲೂ ಶಕ್ತಿಶಾಲಿ. ಮನೆಯಲ್ಲಿ ಬಿದಿರಿನ ಗಿಡವನ್ನು ಬೆಳೆಸುವುದರಿಂದ ಅದೃಷ್ಟ ಒಲಿದುಬರುತ್ತದೆ. ಇದು ವ್ಯಾಪಾರ ಮತ್ತು ಉದ್ಯೋಗದಲ್ಲಿ ಪ್ರಗತಿ ತಂದುಕೊಟ್ಟು, ಮನೆಯ ಸಂಪತ್ತನ್ನು ದ್ವಿಗುಣಗೊಳಿಸಲು ಸಹಕಾರಿಯಾಗಿದೆ.

ವಿಶೇಷ ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ವಾಸ್ತು ಶಾಸ್ತ್ರವನ್ನು ಆಧರಿಸಿದೆ. ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡುವ ಮುನ್ನ ಹತ್ತಿರದ ವಾಸ್ತು ತಜ್ಞರನ್ನು ಸಂಪರ್ಕಿಸಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 am, Tue, 28 July 26

Follow Us
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ