AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani Amavasya 2025: ಆಗಸ್ಟ್ 23 ಶನಿ ಅಮಾವಾಸ್ಯೆ; ಅಪ್ಪಿ ತಪ್ಪಿಯೂ ಈ ಕೆಲಸ ಮಾಡಬೇಡಿ

ಆಗಸ್ಟ್ 23 ರ ಭಾದ್ರಪದ ಅಮವಾಸ್ಯೆಯು ಶನಿವಾರ ಬಂದಿರುವುದರಿಂದ ಅದನ್ನು ಶನಿ ಅಮವಾಸ್ಯೆ ಎಂದೂ ಕರೆಯಲ್ಪಡುತ್ತದೆ. ಶನಿ ದೋಷ, ಸಾಡೇಸಾತಿಯಿಂದ ಮುಕ್ತಿ ಪಡೆಯಲು ಈ ದಿನ ತುಂಬಾ ವಿಶೇಷ. ಆದರೆ ಅಮವಾಸ್ಯೆಯ ರಾತ್ರಿ ನಕಾರಾತ್ಮಕ ಶಕ್ತಿಯಿಂದ ಕೂಡಿರುತ್ತದೆ. ಈ ದಿನ ಉಗುರು/ಕೂದಲು ಕತ್ತರಿಸುವುದು, ತಡವಾಗಿ ಮಲಗುವುದು, ಉಪ್ಪು/ಎಣ್ಣೆ/ಕಬ್ಬಿಣ ಖರೀದಿಸುವುದು, ಮಾಂಸಾಹಾರ ಸೇವಿಸುವುದು, ಮತ್ತು ಪ್ರಾಣಿಗಳಿಗೆ ಹಾನಿ ಮಾಡುವುದು ತಪ್ಪು. ಧನಾತ್ಮಕತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ.

Shani Amavasya 2025: ಆಗಸ್ಟ್ 23 ಶನಿ ಅಮಾವಾಸ್ಯೆ; ಅಪ್ಪಿ ತಪ್ಪಿಯೂ ಈ ಕೆಲಸ ಮಾಡಬೇಡಿ
ಶನಿ ಅಮಾವಾಸ್ಯೆ
ಅಕ್ಷತಾ ವರ್ಕಾಡಿ
|

Updated on: Aug 22, 2025 | 8:15 AM

Share

ಈ ಬಾರಿ ಭಾದ್ರಪದ ಅಮಾವಾಸ್ಯೆಯು ಆಗಸ್ಟ್ 23 ರ ಶನಿವಾರ ಬರುವುದರಿಂದ, ಇದನ್ನು ಶನಿ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಭಾದ್ರಪದ ಅಮಾವಾಸ್ಯೆ ತಿಥಿ ಆಗಸ್ಟ್ 22, ಶುಕ್ರವಾರ ಬೆಳಿಗ್ಗೆ 11:55 ಕ್ಕೆ ಪ್ರಾರಂಭವಾಗಿ ಆಗಸ್ಟ್ 23, ಶನಿವಾರ ಬೆಳಿಗ್ಗೆ 11:35 ಕ್ಕೆ ಕೊನೆಗೊಳ್ಳುತ್ತದೆ. ಶನಿ ದೋಷ, ಸಾಡೇಸಾತಿ ಮತ್ತು ಧೈಯ್ಯಾಗಳಿಂದ ಮುಕ್ತಿ ಪಡೆಯಲು ಈ ದಿನವು ಬಹಳ ವಿಶೇಷವಾಗಿದೆ, ಆದರೆ ಅಮಾವಾಸ್ಯೆ ರಾತ್ರಿಯನ್ನು ಭಯಾನಕವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಈ ದಿನದಂದು ಚಂದ್ರ ಕಣ್ಮರೆಯಾಗುತ್ತಾನೆ ಮತ್ತು ನಕಾರಾತ್ಮಕ ಶಕ್ತಿಯು ಸಕ್ರಿಯವಾಗಿರುತ್ತದೆ. ಅಲ್ಲದೆ, ಶನಿಯು ಬಹಳ ಪ್ರಭಾವಶಾಲಿ ಗ್ರಹ, ಆದ್ದರಿಂದ ಶನಿ ಅಮವಾಸ್ಯೆಯ ದಿನದಂದು ಯಾವುದೇ ತಪ್ಪುಗಳನ್ನು ಮಾಡಬಾರದು, ಇಲ್ಲದಿದ್ದರೆ ಜೀವನದುದ್ದಕ್ಕೂ ಅದರ ಕೆಟ್ಟ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ.

ಶನಿ ಅಮವಾಸ್ಯೆಯಂದು ಈ ಕೆಲಸಗಳನ್ನು ಮಾಡಬೇಡಿ:

  • ಶನಿ ಅಮಾವಾಸ್ಯೆಯ ದಿನ ತಡವಾಗಿ ಮಲಗಬಾರದು, ಉಗುರು ಅಥವಾ ಕೂದಲನ್ನು ಕತ್ತರಿಸಬಾರದು, ಇದು ಅದೃಷ್ಟವನ್ನು ದುರದೃಷ್ಟವಾಗಿ ಪರಿವರ್ತಿಸುತ್ತದೆ ಎಂದು ನಂಬಲಾಗಿದೆ.
  • ಶನಿ ಅಮಾವಾಸ್ಯೆಯಂದು, ಬಡವರು, ಕಾರ್ಮಿಕರು, ನಿರ್ಗತಿಕರು, ನಾಯಿ ಅಥವಾ ಕಾಗೆ ನಿಮ್ಮ ಮನೆ ಬಾಗಿಲಿಗೆ ಬಂದರೆ ಆಹಾರ ನೀಡಿ. ಈ ದಿನ ಪ್ರಾಣಿಗಳಿಗೆ ಹಾನಿ ಮಾಡಿದರೆ ಶನಿಯ ಕೋಪಕ್ಕೆ ನೀವು ಗುರಿಯಾಗುತ್ತೀರಿ.
  • ಶನಿ ಅಮವಾಸ್ಯೆಯಂದು ಉಪ್ಪು, ಎಣ್ಣೆ, ಕಬ್ಬಿಣ ಖರೀದಿಸುವುದು ಅಶುಭ, ಅದು ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು.
  • ಅಮವಾಸ್ಯೆಯ ರಾತ್ರಿ ನಕಾರಾತ್ಮಕ ಶಕ್ತಿಗಳು ಹೆಚ್ಚಿರುತ್ತದೆ. ಆದ್ದರಿಂದ ಅಮವಾಸ್ಯೆಯ ರಾತ್ರಿ ಸ್ಮಶಾನಅಥವಾ ನಿರ್ಜನ ಸ್ಥಳಕ್ಕೆ ಹೋಗಬೇಡಿ.
  • ಶನಿ ಅಮಾವಾಸ್ಯೆಯಂದು ಮಾದಕ ದ್ರವ್ಯಗಳು ಮತ್ತು ಮಾಂಸಾಹಾರ ಸೇವಿಸುವುದನ್ನು ನಿಷೇಧಿಸಲಾಗಿದೆ.
  • ಈ ದಿನದಂದು, ಯಾರನ್ನೂ ತಪ್ಪಾಗಿ ಮಾನಸಿಕವಾಗಿ ಅಥವಾ ದೈಹಿಕವಾಗಿ ನೋಯಿಸಬೇಡಿ. ಮರಗಳನ್ನು ಕಡಿಯಬೇಡಿ. ಇದು ಪಿತೃ ದೋಷಕ್ಕೆ ಕಾರಣವಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ