AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buddha Purnima 2021 Date: ಬುದ್ಧ ಪೂರ್ಣಿಮೆ ಆಚರಣೆಯ ದಿನಾಂಕ, ಶುಭ ಸಮಯ ಮತ್ತು ಮಹತ್ವ

ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ ಬುದ್ಧ.

Buddha Purnima 2021 Date: ಬುದ್ಧ ಪೂರ್ಣಿಮೆ ಆಚರಣೆಯ ದಿನಾಂಕ, ಶುಭ ಸಮಯ ಮತ್ತು ಮಹತ್ವ
Buddha purnima 2021
shruti hegde
|

Updated on:May 25, 2021 | 10:50 AM

Share

ಬೌದ್ಧ ಧರ್ಮದ ಸಂಸ್ಥಾಪಕ ಬುದ್ಧ ಕರುಣೆ ಶಾಂತಿಯನ್ನು ಸಾರಿದ ಮಹಾನ್​ ವ್ಯಕ್ತಿ. ವೈಶಾಖ ಮಾಸದ ಹುಣ್ಣಿಮೆ ದಿನದಂದು ಬುದ್ಧ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷದ ಬುದ್ಧ ಪೂರ್ಣಿಮೆ ಆಚರಣೆಯನ್ನು ಮೇ 26ರಂದು ಆಚರಿಸಲಾಗುತ್ತಿದೆ.  ಹಿಂದೂ ಕ್ಯಾಲೆಂಡರ್​ ಪ್ರಕಾರ ವೈಶಾಖ ತಿಂಗಳ ಹುಣ್ಣಿಮೆಯ ದಿನದಂದು ಹಾಗೂ ಗ್ರೆಗೋರಿಯನ್​ ಕ್ಯಾಲೆಂಡರ್​ ಪ್ರಕಾರ ಏಪ್ರಿಲ್​ ಅಥವಾ ಮೇ ತಿಂಗಳಿನಲ್ಲಿ ಆಚರಿಸಲಾಗುತ್ತದೆ.

ಗೌತಮ ಬುದ್ಧನು ಈ ದಿನ ಜ್ಞಾನೋದಯವನ್ನು ಪಡೆದನು ಎಂಬುದಾಗಿ ಇತಿಹಾಸದ ಮೂಲಕ ತಿಳಿದುಕೊಳ್ಳಬಹುದು. ಬುದ್ಧನ ಜನನ ಮತ್ತು ಮರಣದ ದಿನದ ಕುರಿತಾಗಿ ಇತಿಹಾಸದಲ್ಲಿ ಗೊಂದಲವಿದೆ. ಹಾಗೂ ಕೆಲವು ನಂಬಿಕೆ ಪ್ರಕಾರ ಇಂದು ಬುದ್ಧನ ಜನ್ಮ ದಿನ ಎಂದೂ ಕರೆಯಲಾಗುತ್ತದೆ. ಈ ಪ್ರಕಾರ ಬುದ್ಧ ಪೂರ್ಣಿಯನ್ನು ಆಚರಿಸುತ್ತಾ ಬಂದಿದ್ದಾರೆ. ಈ ವರ್ಷ ಬುದ್ಧನ 2583ನೇ ಜನ್ಮ ಆಚಣೆಯನ್ನು ಮಾಡಲಾಗುತ್ತಿದೆ.

ಬುದ್ಧ ಪೂರ್ಣಿಮಾ ಆಚರಣೆಯ ದಿನಾಂಕ ಮತ್ತು ಸಮಯ ಬುದ್ಧ ಪೂರ್ಣಿಮಾ ದಿನಾಂಕ – 2021 ಮೇ 26ರ ಬುಧವಾರ ಪೂರ್ಣಿಮಾ ತಿಥಿ ಪ್ರಾರಂಭ– 2021 ಮೇ 25 ರ ಸಂಜೆ 08:29 ಪೂರ್ಣಿಮಾ ತಿಥಿ ಮುಕ್ತಾಯ– 2021 ಮೇ 26 ಸಂಜೆ 04:43

ಇತಿಹಾಸ ಗೌತಮ ಬುದ್ಧ ಸಿದ್ದಾರ್ಥ ಗೌತಮನಾಗಿ ಜನಿಸಿದನು. ಹೆಚ್ಚಿನ ಜನರು ನೇಪಾಳದ ಲುಂಬಿನಿ ಬುದ್ಧನ ಜನ್ಮ ಸ್ಥಳವೆಂದು ನಂಬಿದ್ದಾರೆ. ತನ್ನ ಧರ್ಮ ಪಾಠವನ್ನು ಮೊದಲು ಸಾರಾನಾಥದಲ್ಲಿ ಕಲಿತನು. ನಂತರ ಗೌತಮಬುದ್ಧನು ಬೋಧಗಯಾದಲ್ಲಿ ಜ್ಞಾನೋದಯವನ್ನು ಪಡೆದನು ಎಂಬುದನ್ನು ಇತಿಹಾಸ ತಿಳಿಸುತ್ತದೆ.

ಮಹತ್ವ ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ. ಸರಿಯಾದ ತಿಳುವಳಿಕೆ, ಸರಿಯಾದ ಚಿಂತನೆ, ಸರಿಯಾದ ಕ್ರಿಯೆ, ಮಾತು, ಮನಸ್ಸು, ಪ್ರಯತ್ನ, ಏಕಾಗ್ರತೆಯ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾನ್​ ವ್ಯಕ್ತಿ ಬುದ್ಧ. ಈ ದಿನದಂದು ಭಕ್ತರು ಬೌದ್ಧ ದೇವಾಲಯಗಳಿಗೆ ಭೇಟಿ ನೀಡಿ ಬುದ್ಧನನ್ನು ಸ್ಮರಿಸುತ್ತಾರೆ. ಉಪವಾಸ ಆಚರಿಸುತ್ತಾ ಬುದ್ಧನ ಧ್ಯಾನದಲ್ಲಿ ಇಡೀ ದಿನ ಕಳೆಯುತ್ತಾರೆ. ಇದರಿಂದ ಮನಸ್ಸಿಗೆ ಶಾಂತಿ ಜತೆಗೆ ಕೆಟ್ಟ ಯೋಚನೆಗಳೆಲ್ಲ ದೂರವಾಗಿ ಮನಸ್ಥಿತಿ ಹತೋಟಿಯಲ್ಲಿರುವಂತೆ ಧ್ಯಾನಸ್ಥರಾಗುತ್ತಾರೆ.

ಇದನ್ನೂ ಓದಿ:  Narasimha Jayanti 2021: ನರಸಿಂಹ ಜಯಂತಿಯ ಮಹತ್ವ, ಶುಭ ಮುಹೂರ್ತ ಮತ್ತು ಪೂಜೆಯ ಸಮಯ

Published On - 10:48 am, Tue, 25 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!