AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buddha Purnima 2021 Date: ಬುದ್ಧ ಪೂರ್ಣಿಮೆ ಆಚರಣೆಯ ದಿನಾಂಕ, ಶುಭ ಸಮಯ ಮತ್ತು ಮಹತ್ವ

ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ ಬುದ್ಧ.

Buddha Purnima 2021 Date: ಬುದ್ಧ ಪೂರ್ಣಿಮೆ ಆಚರಣೆಯ ದಿನಾಂಕ, ಶುಭ ಸಮಯ ಮತ್ತು ಮಹತ್ವ
Buddha purnima 2021
shruti hegde
|

Updated on:May 25, 2021 | 10:50 AM

Share

ಬೌದ್ಧ ಧರ್ಮದ ಸಂಸ್ಥಾಪಕ ಬುದ್ಧ ಕರುಣೆ ಶಾಂತಿಯನ್ನು ಸಾರಿದ ಮಹಾನ್​ ವ್ಯಕ್ತಿ. ವೈಶಾಖ ಮಾಸದ ಹುಣ್ಣಿಮೆ ದಿನದಂದು ಬುದ್ಧ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷದ ಬುದ್ಧ ಪೂರ್ಣಿಮೆ ಆಚರಣೆಯನ್ನು ಮೇ 26ರಂದು ಆಚರಿಸಲಾಗುತ್ತಿದೆ.  ಹಿಂದೂ ಕ್ಯಾಲೆಂಡರ್​ ಪ್ರಕಾರ ವೈಶಾಖ ತಿಂಗಳ ಹುಣ್ಣಿಮೆಯ ದಿನದಂದು ಹಾಗೂ ಗ್ರೆಗೋರಿಯನ್​ ಕ್ಯಾಲೆಂಡರ್​ ಪ್ರಕಾರ ಏಪ್ರಿಲ್​ ಅಥವಾ ಮೇ ತಿಂಗಳಿನಲ್ಲಿ ಆಚರಿಸಲಾಗುತ್ತದೆ.

ಗೌತಮ ಬುದ್ಧನು ಈ ದಿನ ಜ್ಞಾನೋದಯವನ್ನು ಪಡೆದನು ಎಂಬುದಾಗಿ ಇತಿಹಾಸದ ಮೂಲಕ ತಿಳಿದುಕೊಳ್ಳಬಹುದು. ಬುದ್ಧನ ಜನನ ಮತ್ತು ಮರಣದ ದಿನದ ಕುರಿತಾಗಿ ಇತಿಹಾಸದಲ್ಲಿ ಗೊಂದಲವಿದೆ. ಹಾಗೂ ಕೆಲವು ನಂಬಿಕೆ ಪ್ರಕಾರ ಇಂದು ಬುದ್ಧನ ಜನ್ಮ ದಿನ ಎಂದೂ ಕರೆಯಲಾಗುತ್ತದೆ. ಈ ಪ್ರಕಾರ ಬುದ್ಧ ಪೂರ್ಣಿಯನ್ನು ಆಚರಿಸುತ್ತಾ ಬಂದಿದ್ದಾರೆ. ಈ ವರ್ಷ ಬುದ್ಧನ 2583ನೇ ಜನ್ಮ ಆಚಣೆಯನ್ನು ಮಾಡಲಾಗುತ್ತಿದೆ.

ಬುದ್ಧ ಪೂರ್ಣಿಮಾ ಆಚರಣೆಯ ದಿನಾಂಕ ಮತ್ತು ಸಮಯ ಬುದ್ಧ ಪೂರ್ಣಿಮಾ ದಿನಾಂಕ – 2021 ಮೇ 26ರ ಬುಧವಾರ ಪೂರ್ಣಿಮಾ ತಿಥಿ ಪ್ರಾರಂಭ– 2021 ಮೇ 25 ರ ಸಂಜೆ 08:29 ಪೂರ್ಣಿಮಾ ತಿಥಿ ಮುಕ್ತಾಯ– 2021 ಮೇ 26 ಸಂಜೆ 04:43

ಇತಿಹಾಸ ಗೌತಮ ಬುದ್ಧ ಸಿದ್ದಾರ್ಥ ಗೌತಮನಾಗಿ ಜನಿಸಿದನು. ಹೆಚ್ಚಿನ ಜನರು ನೇಪಾಳದ ಲುಂಬಿನಿ ಬುದ್ಧನ ಜನ್ಮ ಸ್ಥಳವೆಂದು ನಂಬಿದ್ದಾರೆ. ತನ್ನ ಧರ್ಮ ಪಾಠವನ್ನು ಮೊದಲು ಸಾರಾನಾಥದಲ್ಲಿ ಕಲಿತನು. ನಂತರ ಗೌತಮಬುದ್ಧನು ಬೋಧಗಯಾದಲ್ಲಿ ಜ್ಞಾನೋದಯವನ್ನು ಪಡೆದನು ಎಂಬುದನ್ನು ಇತಿಹಾಸ ತಿಳಿಸುತ್ತದೆ.

ಮಹತ್ವ ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟನು. ಮೋಕ್ಷ ಸಾಧಿಸಲು ಕರುಣೆ ಮತ್ತು ಶಾಂತಿಯ ಮಾರ್ಗದಲ್ಲಿ ಸಾಗಬೇಕು ಎಂದು ಲೋಕಕ್ಕೆ ಸಾರಿದಾತ. ಸರಿಯಾದ ತಿಳುವಳಿಕೆ, ಸರಿಯಾದ ಚಿಂತನೆ, ಸರಿಯಾದ ಕ್ರಿಯೆ, ಮಾತು, ಮನಸ್ಸು, ಪ್ರಯತ್ನ, ಏಕಾಗ್ರತೆಯ ಮೌಲ್ಯಗಳನ್ನು ತಿಳಿಸಿಕೊಟ್ಟ ಮಹಾನ್​ ವ್ಯಕ್ತಿ ಬುದ್ಧ. ಈ ದಿನದಂದು ಭಕ್ತರು ಬೌದ್ಧ ದೇವಾಲಯಗಳಿಗೆ ಭೇಟಿ ನೀಡಿ ಬುದ್ಧನನ್ನು ಸ್ಮರಿಸುತ್ತಾರೆ. ಉಪವಾಸ ಆಚರಿಸುತ್ತಾ ಬುದ್ಧನ ಧ್ಯಾನದಲ್ಲಿ ಇಡೀ ದಿನ ಕಳೆಯುತ್ತಾರೆ. ಇದರಿಂದ ಮನಸ್ಸಿಗೆ ಶಾಂತಿ ಜತೆಗೆ ಕೆಟ್ಟ ಯೋಚನೆಗಳೆಲ್ಲ ದೂರವಾಗಿ ಮನಸ್ಥಿತಿ ಹತೋಟಿಯಲ್ಲಿರುವಂತೆ ಧ್ಯಾನಸ್ಥರಾಗುತ್ತಾರೆ.

ಇದನ್ನೂ ಓದಿ:  Narasimha Jayanti 2021: ನರಸಿಂಹ ಜಯಂತಿಯ ಮಹತ್ವ, ಶುಭ ಮುಹೂರ್ತ ಮತ್ತು ಪೂಜೆಯ ಸಮಯ

Published On - 10:48 am, Tue, 25 May 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ