AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buddha Purnima 2024: ಬುದ್ಧ ಪೂರ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿ

ವೈಶಾಖ ಮಾಸದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ, ಈ ಹುಣ್ಣಿಮೆಯ ದಿನದಂದು ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಲ್ಲವೂ ಸದಾಕಾಲ ಇರುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ದಾನ ಮಾಡಬೇಕು? ಇದರಿಂದ ಸಿಗುವ ಫಲಾಫಲಗಳೇನು ತಿಳಿದುಕೊಳ್ಳಿ.

Buddha Purnima 2024: ಬುದ್ಧ ಪೂರ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿ
Buddha Purnima 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 22, 2024 | 6:18 PM

Share

ಈ ವರ್ಷ ಬುದ್ಧ ಪೂರ್ಣಿಮೆಯನ್ನು ಮೇ 23 ರಂದು ಆಚರಿಸಲಾಗುತ್ತಿದೆ. ಈ ದಿನದಂದು ಗೌತಮ ಬುದ್ಧನು ವಿಷ್ಣುವಿನ ಅವತಾರ ಎತ್ತಿ ಭೂಮಿಗೆ ಬಂದನು ಎಂಬ ನಂಬಿಕೆ ಇದೆ. ಹಾಗಾಗಿ ಈ ದಿನವನ್ನು ಗೌತಮ ಬುದ್ಧನ ಜನ್ಮ ದಿನವನ್ನಾಗಿ ಆಚರಿಸಲಾಗುತ್ತದೆ. ಅದೇ ರೀತಿ ಈ ದಿನ ಭಗವಾನ್ ಬುದ್ಧನಿಗೆ ಜ್ಞಾನೋದಯವಾದ ದಿನ ಜೊತೆಗೆ ಮಹಾನಿರ್ವಾಣದ ಪವಿತ್ರ ದಿನವಾಗಿದೆ. ಅದರಲ್ಲಿಯೂ ವೈಶಾಖ ಮಾಸದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ, ಈ ಹುಣ್ಣಿಮೆಯ ದಿನದಂದು ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಲ್ಲವೂ ಸದಾಕಾಲ ಇರುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ದಾನ ಮಾಡಬೇಕು? ಇದರಿಂದ ಸಿಗುವ ಫಲಾಫಲಗಳೇನು ತಿಳಿದುಕೊಳ್ಳಿ.

ಬುದ್ಧ ಪೂರ್ಣಿಮೆಯಂದು ಈ ರೀತಿ ದಾನ ಮಾಡಿ:

  • ಈ ಹುಣ್ಣಿಮೆಯ ದಿನ ಸನ್ಯಾಸಿ ಮತ್ತು ಸಾಧುಗಳಿಗೆ ಭಿಕ್ಷೆ ನೀಡುವುದು ಒಳ್ಳೆಯದು ಎಂದು ಪರಿಗಣಿಸಲಾಗಿದೆ. ನೀವು ಅವರಿಗೆ ಆಹಾರ ಅಥವಾ ಇತರ ಅಗತ್ಯ ವಸ್ತುಗಳನ್ನು ದಾನ ಮಾಡಬಹುದು.
  • ಬಡ ಮಕ್ಕಳಿಗೆ ಪುಸ್ತಕ, ಪೆನ್ನು ಮುಂತಾದ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ದಾನ ಮಾಡುವುದು ಒಳ್ಳೆಯದು. ಅಥವಾ ಒಂದು ಮಗುವಿಗೆ ವಿದ್ಯಾ ದಾನ ಮಾಡಬಹುದು.
  • ಬಡವರು ಮತ್ತು ಹಸಿದವರಿಗೆ ಧಾನ್ಯಗಳು, ಬೇಳೆಕಾಳುಗಳು, ಅಕ್ಕಿ, ಹಿಟ್ಟು, ಎಣ್ಣೆ, ಮಸಾಲೆಗಳು ಇತ್ಯಾದಿ ಸಾಮಗ್ರಿಗಳನ್ನು ದಾನ ಮಾಡುವುದು ಅತ್ಯುತ್ತಮ ದಾನವೆಂದು ಪರಿಗಣಿಸಲಾಗುತ್ತದೆ.
  • ಆಸ್ಪತ್ರೆಗಳಿಗೆ ಅಥವಾ ಅಗತ್ಯವಿರುವವರಿಗೆ ಔಷಧಿಗಳು, ವೈದ್ಯಕೀಯ ಉಪಕರಣಗಳು ಅಥವಾ ಇತರ ವೈದ್ಯಕೀಯ ಸಾಮಗ್ರಿಗಳನ್ನು ದಾನ ಮಾಡುವುದು ಉತ್ತಮ ದಾನವಾಗಿದೆ.
  • ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಗಿಡಗಳನ್ನು ನೆಡಬಹುದು ಅಥವಾ ಅಂತಹ ಅಭಿಯಾನದಲ್ಲಿ ಭಾಗವಹಿಸಬಹುದು.
  • ಬೇಸಿಗೆಯಲ್ಲಿ ಬಾಯಾರಿದ ಪಕ್ಷಿಗಳು ಮತ್ತು ಪ್ರಾಣಿಗಳಿಗೆ ನೀರನ್ನು ದಾನ ಮಾಡುವುದು ಒಳ್ಳೆಯದು. ಸಾರ್ವಜನಿಕ ಸ್ಥಳಗಳಲ್ಲಿ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಇಡಬಹುದು.
  • ನೀವು ದೇವಾಲಯಗಳು, ಗೋಶಾಲೆಗಳು ಅಥವಾ ಇತರ ಧಾರ್ಮಿಕ ಸಂಸ್ಥೆಗಳಿಗೆ ದೇಣಿಗೆ ನೀಡಬಹುದು. ಇದು ಜೀವನದಲ್ಲಿ ಸಂತೋಷವನ್ನು ತರುತ್ತದೆ.

ಇದನ್ನೂ ಓದಿ: ನರಸಿಂಹ ಜಯಂತಿ ಆಚರಣೆ ಮಾಡುವವರು ಈ ವಿಷಯಗಳನ್ನು ಮರೆಯಬೇಡಿ

ಈ ವಿಷಯಗಳನ್ನು ಸಹ ನೆನಪಿನಲ್ಲಿಡಿ:

ಬುದ್ಧ ಪೂರ್ಣಿಮೆಯಂದು ಮಾಡುವ ದಾನವು ನಿಮಗೆ ತೃಪ್ತಿ ನೀಡುವುದಲ್ಲದೆ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ. ಇದೆಲ್ಲದರ ಜೊತೆಗೆ ನಿಮ್ಮ ನಂಬಿಕೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಯಾವುದೇ ವಸ್ತುವನ್ನು ದಾನ ಮಾಡಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌