AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buddha Purnima 2024: ಬುದ್ಧ ಪೂರ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿ

ವೈಶಾಖ ಮಾಸದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ, ಈ ಹುಣ್ಣಿಮೆಯ ದಿನದಂದು ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಲ್ಲವೂ ಸದಾಕಾಲ ಇರುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ದಾನ ಮಾಡಬೇಕು? ಇದರಿಂದ ಸಿಗುವ ಫಲಾಫಲಗಳೇನು ತಿಳಿದುಕೊಳ್ಳಿ.

Buddha Purnima 2024: ಬುದ್ಧ ಪೂರ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿ
Buddha Purnima 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 22, 2024 | 6:18 PM

Share

ಈ ವರ್ಷ ಬುದ್ಧ ಪೂರ್ಣಿಮೆಯನ್ನು ಮೇ 23 ರಂದು ಆಚರಿಸಲಾಗುತ್ತಿದೆ. ಈ ದಿನದಂದು ಗೌತಮ ಬುದ್ಧನು ವಿಷ್ಣುವಿನ ಅವತಾರ ಎತ್ತಿ ಭೂಮಿಗೆ ಬಂದನು ಎಂಬ ನಂಬಿಕೆ ಇದೆ. ಹಾಗಾಗಿ ಈ ದಿನವನ್ನು ಗೌತಮ ಬುದ್ಧನ ಜನ್ಮ ದಿನವನ್ನಾಗಿ ಆಚರಿಸಲಾಗುತ್ತದೆ. ಅದೇ ರೀತಿ ಈ ದಿನ ಭಗವಾನ್ ಬುದ್ಧನಿಗೆ ಜ್ಞಾನೋದಯವಾದ ದಿನ ಜೊತೆಗೆ ಮಹಾನಿರ್ವಾಣದ ಪವಿತ್ರ ದಿನವಾಗಿದೆ. ಅದರಲ್ಲಿಯೂ ವೈಶಾಖ ಮಾಸದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ, ಈ ಹುಣ್ಣಿಮೆಯ ದಿನದಂದು ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಲ್ಲವೂ ಸದಾಕಾಲ ಇರುತ್ತದೆ. ಹಾಗಾದರೆ ಈ ದಿನ ಯಾವ ವಸ್ತುಗಳನ್ನು ದಾನ ಮಾಡಬೇಕು? ಇದರಿಂದ ಸಿಗುವ ಫಲಾಫಲಗಳೇನು ತಿಳಿದುಕೊಳ್ಳಿ.

ಬುದ್ಧ ಪೂರ್ಣಿಮೆಯಂದು ಈ ರೀತಿ ದಾನ ಮಾಡಿ:

  • ಈ ಹುಣ್ಣಿಮೆಯ ದಿನ ಸನ್ಯಾಸಿ ಮತ್ತು ಸಾಧುಗಳಿಗೆ ಭಿಕ್ಷೆ ನೀಡುವುದು ಒಳ್ಳೆಯದು ಎಂದು ಪರಿಗಣಿಸಲಾಗಿದೆ. ನೀವು ಅವರಿಗೆ ಆಹಾರ ಅಥವಾ ಇತರ ಅಗತ್ಯ ವಸ್ತುಗಳನ್ನು ದಾನ ಮಾಡಬಹುದು.
  • ಬಡ ಮಕ್ಕಳಿಗೆ ಪುಸ್ತಕ, ಪೆನ್ನು ಮುಂತಾದ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ದಾನ ಮಾಡುವುದು ಒಳ್ಳೆಯದು. ಅಥವಾ ಒಂದು ಮಗುವಿಗೆ ವಿದ್ಯಾ ದಾನ ಮಾಡಬಹುದು.
  • ಬಡವರು ಮತ್ತು ಹಸಿದವರಿಗೆ ಧಾನ್ಯಗಳು, ಬೇಳೆಕಾಳುಗಳು, ಅಕ್ಕಿ, ಹಿಟ್ಟು, ಎಣ್ಣೆ, ಮಸಾಲೆಗಳು ಇತ್ಯಾದಿ ಸಾಮಗ್ರಿಗಳನ್ನು ದಾನ ಮಾಡುವುದು ಅತ್ಯುತ್ತಮ ದಾನವೆಂದು ಪರಿಗಣಿಸಲಾಗುತ್ತದೆ.
  • ಆಸ್ಪತ್ರೆಗಳಿಗೆ ಅಥವಾ ಅಗತ್ಯವಿರುವವರಿಗೆ ಔಷಧಿಗಳು, ವೈದ್ಯಕೀಯ ಉಪಕರಣಗಳು ಅಥವಾ ಇತರ ವೈದ್ಯಕೀಯ ಸಾಮಗ್ರಿಗಳನ್ನು ದಾನ ಮಾಡುವುದು ಉತ್ತಮ ದಾನವಾಗಿದೆ.
  • ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಗಿಡಗಳನ್ನು ನೆಡಬಹುದು ಅಥವಾ ಅಂತಹ ಅಭಿಯಾನದಲ್ಲಿ ಭಾಗವಹಿಸಬಹುದು.
  • ಬೇಸಿಗೆಯಲ್ಲಿ ಬಾಯಾರಿದ ಪಕ್ಷಿಗಳು ಮತ್ತು ಪ್ರಾಣಿಗಳಿಗೆ ನೀರನ್ನು ದಾನ ಮಾಡುವುದು ಒಳ್ಳೆಯದು. ಸಾರ್ವಜನಿಕ ಸ್ಥಳಗಳಲ್ಲಿ ಮಣ್ಣಿನ ಪಾತ್ರೆಯಲ್ಲಿ ನೀರನ್ನು ಇಡಬಹುದು.
  • ನೀವು ದೇವಾಲಯಗಳು, ಗೋಶಾಲೆಗಳು ಅಥವಾ ಇತರ ಧಾರ್ಮಿಕ ಸಂಸ್ಥೆಗಳಿಗೆ ದೇಣಿಗೆ ನೀಡಬಹುದು. ಇದು ಜೀವನದಲ್ಲಿ ಸಂತೋಷವನ್ನು ತರುತ್ತದೆ.

ಇದನ್ನೂ ಓದಿ: ನರಸಿಂಹ ಜಯಂತಿ ಆಚರಣೆ ಮಾಡುವವರು ಈ ವಿಷಯಗಳನ್ನು ಮರೆಯಬೇಡಿ

ಈ ವಿಷಯಗಳನ್ನು ಸಹ ನೆನಪಿನಲ್ಲಿಡಿ:

ಬುದ್ಧ ಪೂರ್ಣಿಮೆಯಂದು ಮಾಡುವ ದಾನವು ನಿಮಗೆ ತೃಪ್ತಿ ನೀಡುವುದಲ್ಲದೆ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ. ಇದೆಲ್ಲದರ ಜೊತೆಗೆ ನಿಮ್ಮ ನಂಬಿಕೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ನೀವು ಯಾವುದೇ ವಸ್ತುವನ್ನು ದಾನ ಮಾಡಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ