AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buddha Purnima 2024: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಬುದ್ಧ ಪೂರ್ಣಿಮೆಯಂದು ಹೀಗೆ ಮಾಡಿ

ಧಾರ್ಮಿಕ ನಂಬಿಕೆಗಳ ಪ್ರಕಾರ ಬುದ್ಧ ಪೂರ್ಣಿಮೆಯಂದು ಮೂರು ಪ್ರಮುಖ ಘಟನೆಗಳು ನಡೆದಿವೆ ಎಂದು ನಂಬಲಾಗಿದೆ, ಈ ಕಾರಣದಿಂದಾಗಿ ಈ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಮೊದಲನೆಯದಾಗಿ ಬುದ್ಧ ದೇವನ ಜನನ, ಎರಡನೆಯದಾಗಿ ಬುದ್ಧ ದೇವನಿಗೆ ಜ್ಞಾನೋದಯವಾದ ದಿನ ಮತ್ತು ಮೂರನೆಯದಾಗಿ ಮೋಕ್ಷ, ಇವೆಲ್ಲವೂ ಒಂದೇ ದಿನದಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ಈ ದಿನ ಭಗವಾನ್ ಬುದ್ಧನನ್ನು ಪೂಜಿಸುವುದರ ಜೊತೆಗೆ ಉಪವಾಸ ಮಾಡಿ ಆತನ ಆಶೀರ್ವಾದ ಪಡೆದುಕೊಳ್ಳುತ್ತಾರೆ.

Buddha Purnima 2024: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಬುದ್ಧ ಪೂರ್ಣಿಮೆಯಂದು ಹೀಗೆ ಮಾಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 21, 2024 | 12:26 PM

Share

ಬುದ್ಧ ಪೂರ್ಣಿಮೆಯು ಬಹಳ ವಿಶೇಷವಾದ ದಿನವೆಂದು ಪರಿಗಣಿಸಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಬುದ್ಧ ಪೂರ್ಣಿಮೆಯಂದು ಮೂರು ಪ್ರಮುಖ ಘಟನೆಗಳು ನಡೆದಿವೆ ಎಂದು ನಂಬಲಾಗಿದೆ, ಈ ಕಾರಣದಿಂದಾಗಿ ಈ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಮೊದಲನೆಯದಾಗಿ ಬುದ್ಧ ದೇವನ ಜನನ, ಎರಡನೆಯದಾಗಿ ಬುದ್ಧ ದೇವನಿಗೆ ಜ್ಞಾನೋದಯವಾದ ದಿನ ಮತ್ತು ಮೂರನೆಯದಾಗಿ ಮೋಕ್ಷ, ಇವೆಲ್ಲವೂ ಒಂದೇ ದಿನದಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ಈ ದಿನ ಭಗವಾನ್ ಬುದ್ಧನನ್ನು ಪೂಜಿಸುವುದರ ಜೊತೆಗೆ ಉಪವಾಸ ಮಾಡಿ ಆತನ ಆಶೀರ್ವಾದ ಪಡೆದುಕೊಳ್ಳುತ್ತಾರೆ.

2024ರಲ್ಲಿ ಬುದ್ಧ ಪೂರ್ಣಿಮೆ ಯಾವಾಗ?

ಈ ಬಾರಿ ಹುಣ್ಣಿಮೆಯು ಮೇ 22 ರಂದು ಸಂಜೆ 6.47 ಕ್ಕೆ ಪ್ರಾರಂಭವಾಗುತ್ತದೆ. ಮರುದಿನ ಮೇ 23 ರ ಗುರುವಾರ ಸಂಜೆ 7.22 ಕ್ಕೆ ಕೊನೆಗೊಳ್ಳುತ್ತದೆ. ಉದಯ ತಿಥಿಯ ಪ್ರಕಾರ, ಈ ವರ್ಷ ಬುದ್ಧ ಪೂರ್ಣಿಮೆಯನ್ನು ಮೇ 23 ರಂದು ಆಚರಿಸಲಾಗುತ್ತದೆ.

ಬುದ್ಧ ಪೂರ್ಣಿಮೆಯಂದು ತೆಗೆದುಕೊಳ್ಳಬೇಕಾದ ಕೆಲವು ವಿಶೇಷ ಕ್ರಮಗಳು ಯಾವುದು ಗೊತ್ತಾ?

ಆರ್ಥಿಕ ಸಮಸ್ಯೆಗಳಿಗೆ ಪರಿಹಾರಗಳು; ಬುದ್ಧ ಪೂರ್ಣಿಮೆಯನ್ನು ವೈಶಾಖ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ, ಆದ್ದರಿಂದ ಈ ದಿನದಂದು ತಾಯಿ ಲಕ್ಷ್ಮೀ ದೇವಿಯನ್ನು ಪೂಜೆ ಮಾಡಿ. ಸೂರ್ಯೋದಯದ ಸಮಯದಲ್ಲಿ ಅರಳಿ ಮರಕ್ಕೆ ನೀರನ್ನು ಅರ್ಪಿಸಿ, ನಂತರ ಅರಳಿ ಮರವನ್ನು 7 ಬಾರಿ ಪ್ರದಕ್ಷಿಣೆ ಹಾಕಿ. ಹೀಗೆ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಶುಭ ಫಲಿತಾಂಶಗಳನ್ನು ಪಡೆಯಲು ಪರಿಹಾರಗಳು; ಬುದ್ಧ ಪೂರ್ಣಿಮೆಯ ದಿನ, ಕೆಲವು ವಿಶೇಷ ಕ್ರಮಗಳನ್ನು ಅನುಸರಿಸಲಾಗುತ್ತದೆ, ಅದರಲ್ಲಿ ಅಕ್ಕಿಯ ಪಾಯಸ ತಯಾರಿಸಿ ದೇವರಿಗೆ ನೈವೇದ್ಯ ಮಾಡುವ ಕ್ರಮವೂ ಇದೆ. ಈ ರೀತಿ ಮಾಡುವುದರಿಂದ ಜೀವನದಲ್ಲಿ ಶುಭ ಫಲಿತಾಂಶಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ:

ಬುದ್ಧ ಪೂರ್ಣಿಮೆಯಂದು ಈ ಕೆಲಸಗಳನ್ನು ಮಾಡಬೇಕು:

-ಈ ದಿನದಂದು ಮನೆಯಲ್ಲಿ ಸತ್ಯನಾರಾಯಣನ ಕಥೆಯನ್ನು ಪಠಿಸುವುದು ತುಂಬಾ ಒಳ್ಳೆಯದು.

-ಬುದ್ಧ ಪೂರ್ಣಿಮೆಯ ದಿನ ನೀರು ಮತ್ತು ಸಿಹಿತಿಂಡಿಗಳು ಅಥವಾ ವಿವಿಧ ರೀತಿಯ ಭಕ್ಷ್ಯಗಳನ್ನು ದಾನ ಮಾಡುವುದು ಉತ್ತಮ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ