AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buddha Purnima 2024: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಬುದ್ಧ ಪೂರ್ಣಿಮೆಯಂದು ಹೀಗೆ ಮಾಡಿ

ಧಾರ್ಮಿಕ ನಂಬಿಕೆಗಳ ಪ್ರಕಾರ ಬುದ್ಧ ಪೂರ್ಣಿಮೆಯಂದು ಮೂರು ಪ್ರಮುಖ ಘಟನೆಗಳು ನಡೆದಿವೆ ಎಂದು ನಂಬಲಾಗಿದೆ, ಈ ಕಾರಣದಿಂದಾಗಿ ಈ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಮೊದಲನೆಯದಾಗಿ ಬುದ್ಧ ದೇವನ ಜನನ, ಎರಡನೆಯದಾಗಿ ಬುದ್ಧ ದೇವನಿಗೆ ಜ್ಞಾನೋದಯವಾದ ದಿನ ಮತ್ತು ಮೂರನೆಯದಾಗಿ ಮೋಕ್ಷ, ಇವೆಲ್ಲವೂ ಒಂದೇ ದಿನದಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ಈ ದಿನ ಭಗವಾನ್ ಬುದ್ಧನನ್ನು ಪೂಜಿಸುವುದರ ಜೊತೆಗೆ ಉಪವಾಸ ಮಾಡಿ ಆತನ ಆಶೀರ್ವಾದ ಪಡೆದುಕೊಳ್ಳುತ್ತಾರೆ.

Buddha Purnima 2024: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಬುದ್ಧ ಪೂರ್ಣಿಮೆಯಂದು ಹೀಗೆ ಮಾಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 21, 2024 | 12:26 PM

Share

ಬುದ್ಧ ಪೂರ್ಣಿಮೆಯು ಬಹಳ ವಿಶೇಷವಾದ ದಿನವೆಂದು ಪರಿಗಣಿಸಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಬುದ್ಧ ಪೂರ್ಣಿಮೆಯಂದು ಮೂರು ಪ್ರಮುಖ ಘಟನೆಗಳು ನಡೆದಿವೆ ಎಂದು ನಂಬಲಾಗಿದೆ, ಈ ಕಾರಣದಿಂದಾಗಿ ಈ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಮೊದಲನೆಯದಾಗಿ ಬುದ್ಧ ದೇವನ ಜನನ, ಎರಡನೆಯದಾಗಿ ಬುದ್ಧ ದೇವನಿಗೆ ಜ್ಞಾನೋದಯವಾದ ದಿನ ಮತ್ತು ಮೂರನೆಯದಾಗಿ ಮೋಕ್ಷ, ಇವೆಲ್ಲವೂ ಒಂದೇ ದಿನದಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ಈ ದಿನ ಭಗವಾನ್ ಬುದ್ಧನನ್ನು ಪೂಜಿಸುವುದರ ಜೊತೆಗೆ ಉಪವಾಸ ಮಾಡಿ ಆತನ ಆಶೀರ್ವಾದ ಪಡೆದುಕೊಳ್ಳುತ್ತಾರೆ.

2024ರಲ್ಲಿ ಬುದ್ಧ ಪೂರ್ಣಿಮೆ ಯಾವಾಗ?

ಈ ಬಾರಿ ಹುಣ್ಣಿಮೆಯು ಮೇ 22 ರಂದು ಸಂಜೆ 6.47 ಕ್ಕೆ ಪ್ರಾರಂಭವಾಗುತ್ತದೆ. ಮರುದಿನ ಮೇ 23 ರ ಗುರುವಾರ ಸಂಜೆ 7.22 ಕ್ಕೆ ಕೊನೆಗೊಳ್ಳುತ್ತದೆ. ಉದಯ ತಿಥಿಯ ಪ್ರಕಾರ, ಈ ವರ್ಷ ಬುದ್ಧ ಪೂರ್ಣಿಮೆಯನ್ನು ಮೇ 23 ರಂದು ಆಚರಿಸಲಾಗುತ್ತದೆ.

ಬುದ್ಧ ಪೂರ್ಣಿಮೆಯಂದು ತೆಗೆದುಕೊಳ್ಳಬೇಕಾದ ಕೆಲವು ವಿಶೇಷ ಕ್ರಮಗಳು ಯಾವುದು ಗೊತ್ತಾ?

ಆರ್ಥಿಕ ಸಮಸ್ಯೆಗಳಿಗೆ ಪರಿಹಾರಗಳು; ಬುದ್ಧ ಪೂರ್ಣಿಮೆಯನ್ನು ವೈಶಾಖ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ, ಆದ್ದರಿಂದ ಈ ದಿನದಂದು ತಾಯಿ ಲಕ್ಷ್ಮೀ ದೇವಿಯನ್ನು ಪೂಜೆ ಮಾಡಿ. ಸೂರ್ಯೋದಯದ ಸಮಯದಲ್ಲಿ ಅರಳಿ ಮರಕ್ಕೆ ನೀರನ್ನು ಅರ್ಪಿಸಿ, ನಂತರ ಅರಳಿ ಮರವನ್ನು 7 ಬಾರಿ ಪ್ರದಕ್ಷಿಣೆ ಹಾಕಿ. ಹೀಗೆ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಶುಭ ಫಲಿತಾಂಶಗಳನ್ನು ಪಡೆಯಲು ಪರಿಹಾರಗಳು; ಬುದ್ಧ ಪೂರ್ಣಿಮೆಯ ದಿನ, ಕೆಲವು ವಿಶೇಷ ಕ್ರಮಗಳನ್ನು ಅನುಸರಿಸಲಾಗುತ್ತದೆ, ಅದರಲ್ಲಿ ಅಕ್ಕಿಯ ಪಾಯಸ ತಯಾರಿಸಿ ದೇವರಿಗೆ ನೈವೇದ್ಯ ಮಾಡುವ ಕ್ರಮವೂ ಇದೆ. ಈ ರೀತಿ ಮಾಡುವುದರಿಂದ ಜೀವನದಲ್ಲಿ ಶುಭ ಫಲಿತಾಂಶಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ:

ಬುದ್ಧ ಪೂರ್ಣಿಮೆಯಂದು ಈ ಕೆಲಸಗಳನ್ನು ಮಾಡಬೇಕು:

-ಈ ದಿನದಂದು ಮನೆಯಲ್ಲಿ ಸತ್ಯನಾರಾಯಣನ ಕಥೆಯನ್ನು ಪಠಿಸುವುದು ತುಂಬಾ ಒಳ್ಳೆಯದು.

-ಬುದ್ಧ ಪೂರ್ಣಿಮೆಯ ದಿನ ನೀರು ಮತ್ತು ಸಿಹಿತಿಂಡಿಗಳು ಅಥವಾ ವಿವಿಧ ರೀತಿಯ ಭಕ್ಷ್ಯಗಳನ್ನು ದಾನ ಮಾಡುವುದು ಉತ್ತಮ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ