AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Camphor Bath Benefits: ಸಾನ್ನದ ನೀರಿಗೆ ಒಂದು ಚಿಟಿಕೆ ಕರ್ಪೂರ ಬೆರೆಸಿ; ಇದರ ಚಮತ್ಕಾರಿ ಪ್ರಯೋಜನಗಳು ಇಲ್ಲಿವೆ…

ಅನೇಕರು ಜೀವನದಲ್ಲಿ ಆರ್ಥಿಕ, ಆರೋಗ್ಯ ಸಮಸ್ಯೆಗಳು ಹಾಗೂ ಕೌಟುಂಬಿಕ ಕಲಹಗಳಿಂದ ಬಳಲುತ್ತಿರುತ್ತಾರೆ. ಇದಕ್ಕೆ ನಕಾರಾತ್ಮಕ ಶಕ್ತಿಯೇ ಕಾರಣವಿರಬಹುದು. ಪ್ರತಿದಿನ ಸ್ನಾನದ ನೀರಿಗೆ ಕರ್ಪೂರ ಬೆರೆಸಿ ಸ್ನಾನ ಮಾಡುವುದರಿಂದ ಶುಕ್ರ-ಚಂದ್ರ ದೋಷ ನಿವಾರಣೆಯಾಗಿ, ಆರ್ಥಿಕ ತೊಂದರೆಗಳು, ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕತೆ ಹೆಚ್ಚುತ್ತದೆ. ಚರ್ಮದ ಸಮಸ್ಯೆಗಳಿಗೂ ಇದು ಉತ್ತಮ ಆಯುರ್ವೇದ ಮದ್ದು.

Camphor Bath Benefits: ಸಾನ್ನದ ನೀರಿಗೆ ಒಂದು ಚಿಟಿಕೆ ಕರ್ಪೂರ ಬೆರೆಸಿ; ಇದರ ಚಮತ್ಕಾರಿ ಪ್ರಯೋಜನಗಳು ಇಲ್ಲಿವೆ...
ಸ್ನಾನದ ನೀರಿಗೆ ಕರ್ಪೂರ ಬೆರೆಸಿ
ಅಕ್ಷತಾ ವರ್ಕಾಡಿ
|

Updated on: Jul 01, 2026 | 9:45 AM

Share

ಮುಖ್ಯಾಂಶಗಳು

  • ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕರ್ಪೂರವನ್ನು ಶುಕ್ರ ಮತ್ತು ಚಂದ್ರ ಗ್ರಹಗಳ ಸಂಕೇತವೆಂದು ಪರಿಗಣಿಸಲಾಗುತ್ತದೆ.
  • ಕರ್ಪೂರದ ನೀರಿನಿಂದ ಸ್ನಾನ ಮಾಡುವುದರಿಂದ ಮನೆಯಲ್ಲಿದ್ದ ದರಿದ್ರ ಲಕ್ಷ್ಮಿ ದೂರ
  • ಕರ್ಪೂರದ ನೀರಿನ ಸ್ನಾನ ಚರ್ಮದ ಸಮಸ್ಯೆಗಳಿಗೂ ಉತ್ತಮ ಆಯುರ್ವೇದ ಮದ್ದು.

ಅನೇಕ ಜನರು ಜೀವನದಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರೂ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಕಲಹಗಳು ಅಥವಾ ನಿರಂತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಮನೆಯಲ್ಲಿ ಅಥವಾ ನಮ್ಮ ಸುತ್ತಮುತ್ತ ಆವರಿಸಿರುವ ನಕಾರಾತ್ಮಕ ಶಕ್ತಿ ಇರಬಹುದು. ಈ ಎಲ್ಲಾ ಸಮಸ್ಯೆಗಳಿಗೆ ಕರ್ಪೂರದಿಂದ ಮಾಡುವ ಒಂದು ಸಣ್ಣ ಮತ್ತು ಸರಳ ಪರಿಹಾರವು ಅದ್ಭುತವಾಗಿ ಕೆಲಸ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಸ್ವಲ್ಪ ಕರ್ಪೂರದ ಪುಡಿ ಅಥವಾ ಎರಡು ಹನಿ ಕರ್ಪೂರದ ಎಣ್ಣೆಯನ್ನು (Camphor Oil) ಸ್ನಾನ ಮಾಡುವ ನೀರಿಗೆ ಹಾಕಿ ಸ್ನಾನ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಜಾತಕದಲ್ಲಿ ಶುಕ್ರ ಮತ್ತು ಚಂದ್ರ ದೋಷ ನಿವಾರಣೆ:

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕರ್ಪೂರವನ್ನು ಶುಕ್ರ ಮತ್ತು ಚಂದ್ರ ಗ್ರಹಗಳ ಸಂಕೇತವೆಂದು ಪರಿಗಣಿಸಲಾಗುತ್ತದೆ. ಶುಕ್ರನು ನಮ್ಮ ಜೀವನಕ್ಕೆ ಸಂಪತ್ತು, ಐಷಾರಾಮಿ ಜೀವನ ಮತ್ತು ಸಂತೋಷವನ್ನು ತಂದರೆ, ಚಂದ್ರನು ನಮ್ಮ ಮನಸ್ಸಿನ ಸ್ಥಿತಿಯನ್ನು ನಿಯಂತ್ರಿಸುತ್ತಾನೆ. ಕರ್ಪೂರದ ನೀರಿನಿಂದ ಸ್ನಾನ ಮಾಡುವುದರಿಂದ ಜಾತಕದಲ್ಲಿ ಈ ಎರಡು ಗ್ರಹಗಳ ದೋಷಗಳು ನಿವಾರಣೆಯಾಗಿ, ಸಕಾರಾತ್ಮಕ ಫಲಿತಾಂಶಗಳು ಲಭಿಸುತ್ತವೆ ಎಂದು ನಂಬಲಾಗಿದೆ.

ಆರ್ಥಿಕ ತೊಂದರೆಗಳಿಂದ ಮುಕ್ತಿ, ವ್ಯಾಪಾರದಲ್ಲಿ ಲಾಭ:

ನಿಯಮಿತವಾಗಿ ಕರ್ಪೂರದ ನೀರಿನಿಂದ ಸ್ನಾನ ಮಾಡುವುದರಿಂದ ಮನೆಯಲ್ಲಿದ್ದ ದರಿದ್ರ ಲಕ್ಷ್ಮಿ ದೂರವಾಗಿ, ಆರ್ಥಿಕ ತೊಂದರೆಗಳು ಕ್ರಮೇಣ ನಿವಾರಣೆಯಾಗುತ್ತವೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ ಮತ್ತು ವ್ಯಾಪಾರ-ವ್ಯವಹಾರಗಳಲ್ಲಿ ನಷ್ಟ ಅನುಭವಿಸುತ್ತಿರುವವರಿಗೆ ಧನಲಾಭ ಉಂಟಾಗುತ್ತದೆ.

ಮಾನಸಿಕ ಶಾಂತಿ ಮತ್ತು ಅದ್ಭುತ ಉಲ್ಲಾಸ:

ಕರ್ಪೂರದ ವಿಶಿಷ್ಟ ಸುವಾಸನೆಯು ಮನಸ್ಸಿನಿಂದ ತೀವ್ರವಾದ ಒತ್ತಡ ಮತ್ತು ಆತಂಕವನ್ನು (Stress & Anxiety) ದೂರ ಮಾಡುತ್ತದೆ. ಇದು ದಿನವಿಡೀ ಸಕ್ರಿಯವಾಗಿ ಕೆಲಸ ಮಾಡಲು ಅಗತ್ಯವಾದ ಸಕಾರಾತ್ಮಕ ಶಕ್ತಿಯನ್ನು (Positive Energy) ಒದಗಿಸುತ್ತದೆ. ರಾತ್ರಿ ಸರಿಯಾಗಿ ನಿದ್ರೆ ಬಾರದವರು ಅಥವಾ ಕೆಟ್ಟ ಕನಸುಗಳಿಂದ ತೊಂದರೆಗೊಳಗಾಗುವವರು ಈ ಪರಿಹಾರ ಮಾಡುವುದರಿಂದ ಗಾಢವಾದ ನಿದ್ರೆ ಪಡೆಯಬಹುದು.

ಚರ್ಮದ ಸಮಸ್ಯೆಗಳಿಗೆ ಉತ್ತಮ ಆಯುರ್ವೇದ ಮದ್ದು:

ಆರೋಗ್ಯದ ದೃಷ್ಟಿಕೋನದಿಂದ ನೋಡುವುದಾದರೆ, ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ (Antibacterial) ಮತ್ತು ಶಿಲೀಂಧ್ರನಾಶಕ (Antifungal) ಗುಣಗಳು ಸಮೃದ್ಧವಾಗಿವೆ. ಕರ್ಪೂರ ನೀರಿನಿಂದ ಸ್ನಾನ ಮಾಡುವುದರಿಂದ ಚರ್ಮದ ಮೇಲಿನ ಬ್ಯಾಕ್ಟೀರಿಯಾಗಳು ನಾಶವಾಗಿ, ತುರಿಕೆ ಮತ್ತು ಅಲರ್ಜಿಯಂತಹ ಚರ್ಮದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ವಿಶೇಷವಾಗಿ ಮಳೆಗಾಲ ಮತ್ತು ಚಳಿಗಾಲದಲ್ಲಿ ಇದು ಚರ್ಮವನ್ನು ಸೋಂಕುಗಳಿಂದ ರಕ್ಷಿಸುತ್ತದೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ಮನೆಯ ನಕಾರಾತ್ಮಕ ಶಕ್ತಿ ಓಡಿಸಲು ಸರಳ ಉಪಾಯ:

ನಿಮ್ಮ ಮನೆಯಲ್ಲಿ ಸದಾ ಅಶಾಂತಿ ನೆಲೆಸಿದ್ದರೆ, ಪ್ರತಿ ಶನಿವಾರ ಅಥವಾ ಮಂಗಳವಾರ ಮನೆಯ ಮೂಲೆ ಮೂಲೆಗಳಲ್ಲಿ ಕರ್ಪೂರವನ್ನು ಬೆಳಗಿಸಿ. ಇದರಿಂದ ಮನೆಯಲ್ಲಿರುವ ದುಷ್ಟ ಶಕ್ತಿಗಳು ಮತ್ತು ನಕಾರಾತ್ಮಕತೆ ದೂರವಾಗಿ, ಲಕ್ಷ್ಮಿ ದೇವಿಯ ಕೃಪೆ ಸದಾ ನಿಮ್ಮ ಮೇಲಿರುತ್ತದೆ.

ಗಮನಿಸಬೇಕಾದ ಮುಖ್ಯ ವಿಷಯ:

ಸ್ನಾನದ ನೀರಿಗೆ ಕರ್ಪೂರವನ್ನು ಬಳಸುವಾಗ ಅತಿ ಕಡಿಮೆ ಪ್ರಮಾಣದಲ್ಲಿ (ಕೇವಲ 1 ಅಥವಾ 2 ಹನಿ ಎಣ್ಣೆ ಅಥವಾ ಚಿಟಿಕೆ ಪುಡಿ) ಬಳಸಿ. ಅತಿಯಾದ ಬಳಕೆ ಚರ್ಮಕ್ಕೆ ಉರಿ ಉಂಟುಮಾಡಬಹುದು. ಹಸುಗೂಸುಗಳು ಅಥವಾ ಅತಿ ಸೂಕ್ಷ್ಮ ಚರ್ಮ ಹೊಂದಿರುವವರು ಇದನ್ನು ಬಳಸುವ ಮುನ್ನ ಎಚ್ಚರ ವಹಿಸುವುದು ಸೂಕ್ತ. ಬಾಹ್ಯ ಸೌಂದರ್ಯದ ಜೊತೆಗೆ ಆಂತರಿಕ ಸಕಾರಾತ್ಮಕತೆಯನ್ನು ಹೆಚ್ಚಿಸುವ ಈ ಸರಳ ಪರಿಹಾರವನ್ನು ನಿಮ್ಮ ದೈನಂದಿನ ದಿನಚರಿಯ ಭಾಗವಾಗಿಸಿ. ಕೆಲವೇ ದಿನಗಳಲ್ಲಿ ನಿಮ್ಮ ಆಲೋಚನೆಗಳು ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಅದ್ಭುತ ಬದಲಾವಣೆಗಳನ್ನು ನೀವೇ ಗಮನಿಸಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ