AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gayatri Jayanti 2025: ಗಾಯತ್ರಿ ಜಯಂತಿ ಯಾವಾಗ? ಪೂಜೆಯ ಮಹತ್ವ ಮತ್ತು ಮಂತ್ರ ಪಠಣೆಯ ಮಾಹಿತಿ ಇಲ್ಲಿದೆ

ಗಾಯತ್ರಿ ಜಯಂತಿಯು ವೇದಗಳ ದೇವತೆಯಾದ ಗಾಯತ್ರಿ ದೇವಿಯನ್ನು ಪೂಜಿಸುವ ಪ್ರಮುಖ ಹಿಂದೂ ಹಬ್ಬವಾಗಿದೆ. ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಏಕಾದಶಿಯಂದು ಆಚರಿಸಲಾಗುವ ಈ ಹಬ್ಬದಲ್ಲಿ ಗಾಯತ್ರಿ ಮಂತ್ರ ಪಠಣೆ, ಪೂಜೆ ಮತ್ತು ನೈವೇದ್ಯ ಅರ್ಪಣೆ ಮುಖ್ಯ. ಗಾಯತ್ರಿ ಮಂತ್ರವು ನಾಲ್ಕು ವೇದಗಳ ಸಾರವಾಗಿದೆ ಎಂದು ನಂಬಲಾಗಿದೆ ಮತ್ತು ಇದನ್ನು ಪಠಿಸುವುದರಿಂದ ಆಧ್ಯಾತ್ಮಿಕ ಮತ್ತು ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ ಎಂದು ಹೇಳಲಾಗುತ್ತದೆ.

Gayatri Jayanti 2025: ಗಾಯತ್ರಿ ಜಯಂತಿ ಯಾವಾಗ? ಪೂಜೆಯ ಮಹತ್ವ ಮತ್ತು ಮಂತ್ರ ಪಠಣೆಯ ಮಾಹಿತಿ ಇಲ್ಲಿದೆ
Gayatri Jayanti
ಅಕ್ಷತಾ ವರ್ಕಾಡಿ
|

Updated on: May 31, 2025 | 11:05 AM

Share

ಗಾಯತ್ರಿ ದೇವಿಯನ್ನು ವೇದಗಳ ದೇವತೆ ಎಂದು ಪರಿಗಣಿಸಲಾಗುತ್ತದೆ. ತಾಯಿ ಗಾಯತ್ರಿ ಎಲ್ಲಾ ಶಕ್ತಿಗಳ ಆಧಾರ.  ಗಾಯತ್ರಿ ಮಂತ್ರವು ನಾಲ್ಕು ವೇದಗಳ ಸಾರವಾಗಿದೆ. ಅದಕ್ಕಾಗಿಯೇ ಗಾಯತ್ರಿ ಮಂತ್ರವು ಎಲ್ಲಾ ಮಂತ್ರಗಳಲ್ಲಿ ಅತ್ಯಂತ ಪವಿತ್ರವಾಗಿದೆ. ಗಾಯತ್ರಿ ದೇವಿಯನ್ನು ಲಕ್ಷ್ಮಿ, ಸರಸ್ವತಿ ಮತ್ತು ಕಾಳಿಕಾ ದೇವತೆಗಳ ರೂಪದಲ್ಲೂ ಪೂಜಿಸಲಾಗುತ್ತದೆ. ಏಕೆಂದರೆ ಆ ತಾಯಿಯೇ ಎಲ್ಲಾ ವೇದಗಳ ಮೂಲ. ಗಾಯತ್ರಿ ದೇವಿಯು ಜ್ಞಾನ ಮತ್ತು ಆಧ್ಯಾತ್ಮಿಕ ಬೆಳವಣಿಗೆಯ ಸಂಕೇತವಾಗಿದ್ದಾಳೆ, ಆದ್ದರಿಂದ ಗಾಯತ್ರಿ ಜಯಂತಿಯನ್ನು ವಿದ್ಯಾರ್ಥಿಗಳಿಗೆ ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಗಾಯತ್ರಿ ಮಂತ್ರವನ್ನು ಪಠಿಸುವುದರಿಂದ ವ್ಯಕ್ತಿಯ ಜೀವನದಿಂದ ಕತ್ತಲೆ, ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂದು ನಂಬಲಾಗಿದೆ.

ಗಾಯತ್ರಿ ಜಯಂತಿ ಯಾವಾಗ?

ವೈದಿಕ ಪಂಚಾಂಗದ ಪ್ರಕಾರ, ಜ್ಯೇಷ್ಠ ಮಾಸದ ಶುಕ್ಲ ಪಕ್ಷ ಏಕಾದಶಿಯ ದಿನವಾದ ನಿರ್ಜಲ ಏಕಾದಶಿಯ ದಿನದಂದು ಗಾಯತ್ರಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ವರ್ಷ, ಈ ತಿಥಿ ಜೂನ್ 6 ರಂದು ಬೆಳಗಿನ ಜಾವ 2:15 ಕ್ಕೆ ಪ್ರಾರಂಭವಾಗುತ್ತದೆ. ಅದು ಮರುದಿನ, ಜೂನ್ 7 ರಂದು ಬೆಳಿಗ್ಗೆ 4:47 ಕ್ಕೆ ಕೊನೆಗೊಳ್ಳುತ್ತದೆ. ಗಾಯತ್ರಿ ಜಯಂತಿ ಉತ್ಸವವನ್ನು ಜೂನ್ 6 ರಂದು ಉದಯ ತಿಧಿಯ ಪ್ರಕಾರ ಆಚರಿಸಲಾಗುತ್ತದೆ.

ಗಾಯತ್ರಿ ಜಯಂತಿ ಪೂಜಾ ವಿಧಿವಿಧಾನಗಳು:

ಗಾಯತ್ರಿ ಜಯಂತಿಯಂದು ಪೂಜೆ ಮಾಡಲು, ಬೆಳಿಗ್ಗೆ ಬೇಗನೆ ಎದ್ದು, ಸ್ನಾನ ಮಾಡಿ, ಸ್ವಚ್ಛವಾದ ಬಟ್ಟೆಗಳನ್ನು ಧರಿಸಬೇಕು. ನಂತರ ಮನೆಯ ಪೂಜಾ ಕೋಣೆಯಲ್ಲಿ ದೀಪ ಹಚ್ಚಿ. ನಂತರ ದೇವರುಗಳಿಗೆ ಗಂಗಾಜಲದಿಂದ ಅಭಿಷೇಕ ಮಾಡಿ. ನಂತರ ಗಾಯತ್ರಿ ಮಂತ್ರವನ್ನು ಪಠಿಸಿ. ನಂತರ ಗಾಯತ್ರಿ ದೇವಿಯ ನೆಚ್ಚಿನ ಆಹಾರವನ್ನು ನೈವೇದ್ಯವಾಗಿ ಅರ್ಪಿಸಿ.

ಇದನ್ನೂ ಓದಿ: ಸೂರ್ಯ ಮೃಗಶಿರ ನಕ್ಷತ್ರಕ್ಕೆ ಪ್ರವೇಶ; ಈ ಮೂರು ರಾಶಿಗೆ ಅದೃಷ್ಟದ ಸುರಿಮಳೆ

ಗಾಯತ್ರಿ ಜಯಂತಿಯ ಮಹತ್ವ:

” ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್‌” ಗಾಯತ್ರಿ ಮಂತ್ರವು ಹಿಂದೂ ಧರ್ಮದ ಅತ್ಯಂತ ಪವಿತ್ರ ಮಂತ್ರಗಳಲ್ಲಿ ಒಂದಾಗಿದೆ. ಗಾಯತ್ರಿ ಜಯಂತಿಯ ದಿನದಂದು ಗಾಯತ್ರಿ ದೇವಿಯನ್ನು ಪೂಜಿಸುವುದರಿಂದ ಭಕ್ತರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ ಎಂದು ನಂಬಲಾಗಿದೆ. ಇದಲ್ಲದೆ, ಈ ದಿನ ಈ ಗಾಯತ್ರಿ ಮಂತ್ರವನ್ನು 108 ಬಾರಿ ಪಠಿಸುವುದರಿಂದ ಆರೋಗ್ಯ ಮತ್ತು ಸಂಪತ್ತು ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು