AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijaya Ekadashi 2025: ವಿಜಯ ಏಕಾದಶಿಯಂದು ತುಳಸಿಯನ್ನು ಪೂಜಿಸಿ, ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ!

ಫಾಲ್ಗುಣ ಮಾಸದ ಕೃಷ್ಣ ಪಕ್ಷದ ವಿಜಯ ಏಕಾದಶಿ, ಫೆಬ್ರವರಿ 24 ರಂದು ಆಚರಿಸಲಾಗುತ್ತದೆ. ಈ ದಿನ ತುಳಸಿ ಪೂಜೆಯು ಅತ್ಯಂತ ಮಹತ್ವದ್ದಾಗಿದೆ. ತುಳಸಿ ಗಿಡಕ್ಕೆ ಕೆಂಪು ಬಟ್ಟೆ ಅರ್ಪಿಸಿ, ತುಪ್ಪದ ದೀಪ ಬೆಳಗಿಸಿ. ಇದರಿಂದ ಲಕ್ಷ್ಮೀದೇವಿಯ ಆಶೀರ್ವಾದ ದೊರೆಯುತ್ತದೆ ಮತ್ತು ಆರ್ಥಿಕ ಸಮೃದ್ಧಿ ಲಭಿಸುತ್ತದೆ ಎಂಬ ನಂಬಿಕೆಯಿದೆ. ಉಪವಾಸವೂ ಸಹ ಶುಭಕರ.

Vijaya Ekadashi 2025: ವಿಜಯ ಏಕಾದಶಿಯಂದು ತುಳಸಿಯನ್ನು ಪೂಜಿಸಿ, ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ!
Tulasi Pooja
ಅಕ್ಷತಾ ವರ್ಕಾಡಿ
|

Updated on: Feb 15, 2025 | 11:46 AM

Share

ಫಾಲ್ಗುಣ ಮಾಸ ಫೆಬ್ರವರಿ 13 ರಿಂದ ಪ್ರಾರಂಭವಾಗಿ ಮಾರ್ಚ್ 14 ರಂದು ಕೊನೆಗೊಳ್ಳುತ್ತದೆ. ಈ ತಿಂಗಳ ಕೃಷ್ಣ ಪಕ್ಷದ ಏಕಾದಶಿಯಂದು (ಹನ್ನೊಂದನೇ ದಿನ) ವಿಜಯ ಏಕಾದಶಿ ಬರುತ್ತದೆ. ಹಿಂದೂ ಧರ್ಮದಲ್ಲಿ, ಏಕಾದಶಿಗೆ ಅಪಾರ ಆಧ್ಯಾತ್ಮಿಕ ಮಹತ್ವವಿದೆ. ಈ ಶುಭ ದಿನದಂದು ಉಪವಾಸ ಮಾಡಿ ವಿಷ್ಣುವನ್ನು ಪೂಜಿಸುವುದರಿಂದ ಎಲ್ಲಾ ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ. ಇದಲ್ಲದೆ, ಹಿಂದೂ ಸಂಸ್ಕೃತಿಯಲ್ಲಿ ‘ವಿಷ್ಣುಪ್ರಿಯ’ ಎಂದು ಪೂಜಿಸಲ್ಪಡುವ ತುಳಸಿಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ.

ತುಳಸಿ ಗಿಡವು ವಿಷ್ಣುವಿಗೆ ಪ್ರಿಯವಾದದ್ದು ಮತ್ತು ಇದನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ ಎಂದು ನಂಬಲಾಗಿದೆ. ಪಂಚಾಂಗದ ಪ್ರಕಾರ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಏಕಾದಶಿ ಫೆಬ್ರವರಿ 23 ರಂದು ಮಧ್ಯಾಹ್ನ 1:55 ಕ್ಕೆ ಪ್ರಾರಂಭವಾಗಿ ಫೆಬ್ರವರಿ 24 ರಂದು ಮಧ್ಯಾಹ್ನ 1:44 ಕ್ಕೆ ಕೊನೆಗೊಳ್ಳುತ್ತದೆ. ಉದಯತಿಥಿಯ ಪ್ರಕಾರ, ವಿಜಯ ಏಕಾದಶಿಯ ಉಪವಾಸವನ್ನು ಫೆಬ್ರವರಿ 24 ರಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಾಶಿವರಾತ್ರಿ ಈ 5 ರಾಶಿಯವರಿಗೆ ಅದೃಷ್ಟ ತರಲಿದೆ

ವಿಜಯ ಏಕಾದಶಿಯಂದು ತುಳಸಿಯನ್ನು ಹೇಗೆ ಪೂಜಿಸಬೇಕು? ವಿಜಯ ಏಕಾದಶಿಯ ದಿನದಂದು, ಬೆಳಿಗ್ಗೆ ಬೇಗನೆ ಎದ್ದು, ಸ್ನಾನ ಮಾಡಿ ಮತ್ತು ಗಂಗಾಜಲ ಸಿಂಪಡಿಸುವ ಮೂಲಕ ನಿಮ್ಮ ಮನೆಯನ್ನು ಶುದ್ಧೀಕರಿಸಿ. ತುಳಸಿ ಗಿಡಕ್ಕೆ ಕೆಂಪು ಬಟ್ಟೆಯನ್ನುಅರ್ಪಿಸಿ ಮತ್ತು ಅದರ ಮುಂದೆ ತುಪ್ಪದ ದೀಪವನ್ನು ಬೆಳಗಿಸಿ. ಈ ಆಚರಣೆಗಳನ್ನು ಮಾಡುವುದರಿಂದ ಲಕ್ಷ್ಮಿ ದೇವಿಯು ತನ್ನ ಆಶೀರ್ವಾದವನ್ನು ನೀಡುತ್ತಾಳೆ, ಇದು ಆರ್ಥಿಕ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌