AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ಮತ್ತು ಆಧ್ಯಾತ್ಮಿಕ ಮಹತ್ವವನ್ನು ತಿಳಿಯಿರಿ

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ವಿಶೇಷತೆಗಳು ಮತ್ತು ಆಚರಣಾ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಬ್ಬದ ಮಹತ್ವವನ್ನು ಅರ್ಥಮಾಡಿಕೊಳ್ಳಲು, ಅದರ ಹಿನ್ನೆಲೆ ಮತ್ತು ಆಚರಣೆಗಳನ್ನು ಅರಿಯುವುದು ಅವಶ್ಯಕ ಎಂದು ಗುರೂಜಿ ವಿವರಿಸಿದ್ದಾರೆ.

Krishna Janmashtami 2025: ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ಮತ್ತು ಆಧ್ಯಾತ್ಮಿಕ ಮಹತ್ವವನ್ನು ತಿಳಿಯಿರಿ
Krishna Janmashtami
ಅಕ್ಷತಾ ವರ್ಕಾಡಿ
|

Updated on: Aug 16, 2025 | 8:53 AM

Share

ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ವಿಶೇಷತೆಗಳು ಮತ್ತು ಆಚರಣಾ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಜನ್ಮಾಷ್ಟಮಿ ಎಂದರೆ ಕೇವಲ ಒಂದು ಹಬ್ಬವಲ್ಲ, ಅದು ಭಕ್ತಿ, ಆಧ್ಯಾತ್ಮ ಮತ್ತು ಸಾಂಸ್ಕೃತಿಕ ಪರಂಪರೆಯ ಸಮ್ಮಿಳನ. ಈ ಹಬ್ಬದ ಮಹತ್ವವನ್ನು ಅರ್ಥಮಾಡಿಕೊಳ್ಳಲು, ಅದರ ಹಿನ್ನೆಲೆ ಮತ್ತು ಆಚರಣೆಗಳನ್ನು ಅರಿಯುವುದು ಅವಶ್ಯಕ ಎಂದು ಗುರೂಜಿ ವಿವರಿಸಿದ್ದಾರೆ.

ಕೃಷ್ಣನ ಜನ್ಮದಿನವನ್ನು ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಆಚರಿಸಲಾಗುತ್ತದೆ. ಇದನ್ನು ಕೃಷ್ಣಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದೂ ಕರೆಯಲಾಗುತ್ತದೆ. ಈ ದಿನ, ಭಗವಾನ್ ಕೃಷ್ಣನು ದೇವಕಿ ಮತ್ತು ವಾಸುದೇವರಿಗೆ ಜನಿಸಿದನೆಂದು ಹಿಂದೂ ಪುರಾಣಗಳು ಹೇಳುತ್ತವೆ. ಅವನು ಲೀಲೆಗಳಿಂದ ತುಂಬಿದ ಜೀವನವನ್ನು ನಡೆಸಿದನು ಮತ್ತು ಭಗವದ್ಗೀತೆಯ ಮೂಲಕ ಜಗತ್ತಿಗೆ ಜ್ಞಾನೋದಯವನ್ನು ನೀಡಿದನು. ಅವನು ವಿಷ್ಣುವಿನ ಎಂಟನೇ ಅವತಾರ ಎಂದು ಪರಿಗಣಿಸಲ್ಪಟ್ಟಿದ್ದಾನೆ.

ಇದನ್ನೂ ಓದಿ: ಮಕ್ಕಳಲ್ಲಿ ಕಂಡುಬರುವ ಬಾಲಾರಿಷ್ಟ ದೋಷಕ್ಕೆ ಸರಳ ಪರಿಹಾರ ಇಲ್ಲಿದೆ

ಜನ್ಮಾಷ್ಟಮಿ ಆಚರಣೆಗಳು ವಿಭಿನ್ನವಾಗಿವೆ. ಕೃಷ್ಣ ದೇವಾಲಯಗಳಿಗೆ ಭೇಟಿ ನೀಡುವುದು, ಪೂಜೆ, ಅಭಿಷೇಕ, ಮತ್ತು ನೈವೇದ್ಯ ಅರ್ಪಿಸುವುದು ಮುಖ್ಯ ಅಂಶಗಳಾಗಿವೆ. ಹಾಲು, ಮೊಸರು ಮತ್ತು ತುಪ್ಪವನ್ನು ಬಳಸಿ ಕೃಷ್ಣನಿಗೆ ಅಭಿಷೇಕ ಮಾಡುವುದು ಸಾಂಪ್ರದಾಯಿಕವಾಗಿದೆ. ವಿವಿಧ ಸಿಹಿ ಮತ್ತು ಖಾರದ ಭಕ್ಷ್ಯಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಮನೆಗಳನ್ನು ರಂಗೋಲಿ ಮತ್ತು ಹೂವುಗಳಿಂದ ಅಲಂಕರಿಸಲಾಗುತ್ತದೆ. ಪುಟ್ಟ ಮಕ್ಕಳನ್ನು ಕೃಷ್ಣನ ವೇಷದಲ್ಲಿ ಅಲಂಕರಿಸುವುದು ಕೂಡಾ ಒಂದು ರೂಢಿಯಾಗಿದೆ. ಭಗವದ್ಗೀತೆ ಪಠಣ, ಉಪವಾಸ, ಜಾಗರಣೆ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸುವುದರ ಮೂಲಕ ಜನರು ಕೃಷ್ಣನನ್ನು ಸ್ಮರಿಸುತ್ತಾರೆ. “ಹರೇ ಕೃಷ್ಣ” ಮಂತ್ರ ಪಾರಾಯಣ ಕೂಡಾ ಜನ್ಮಾಷ್ಟಮಿಯ ಒಂದು ಅವಿಭಾಜ್ಯ ಅಂಗವಾಗಿದೆ. ಓಂ ನಮೋ ಭಗವತೇ ವಾಸುದೇವಾಯ ನಮಃ ಮಂತ್ರವನ್ನು ಕನಿಷ್ಠ 21 ಬಾರಿ ಪಾರಾಯಣ ಮಾಡಲು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ