AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rama Navami: ರಾಮನವಮಿ ಇಂದು ಏಕೆ ಆಚರಿಸಲಾಗುತ್ತದೆ? ಪಂಚಾಂಗ ಹೇಳುವುದೇನು?

ಶ್ರೀರಾಮ ನವಮಿಯು ಹಿಂದೂ ಧರ್ಮದ ಪವಿತ್ರ ಹಬ್ಬವಾಗಿದ್ದು, ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣು ಮರ್ಯಾದಾ ಪುರುಷೋತ್ತಮ ಶ್ರೀರಾಮನಾಗಿ ಜನಿಸಿದ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಪಾನಕ, ಹೆಸರುಬೇಳೆ ಪ್ರಸಾದ ವಿತರಣೆ, ರಾಮಾಯಣ ಪಾರಾಯಣ, ಭಜನೆ ಹಾಗೂ ಶ್ರೀ ರಾಮ ಜಯ ರಾಮ ಜಯ ಜಯ ರಾಮ ಮಂತ್ರ ಪಠಣವು ಆರೋಗ್ಯ, ನೆಮ್ಮದಿ ಮತ್ತು ಸಮೃದ್ಧಿ ನೀಡುತ್ತದೆ. ಸತ್ಯತೆ, ತಾಳ್ಮೆ, ಸಹನೆ, ಶ್ರೀರಾಮನ ಆದರ್ಶ ಪಾಲನೆಯೇ ಈ ಹಬ್ಬದ ಮುಖ್ಯ ಉದ್ದೇಶ ಎಂದು ಡಾ. ಬಸವರಾಜ್ ಗುರೂಜಿ ಸಲಹೆ ನೀಡಿದ್ದಾರೆ.

Rama Navami: ರಾಮನವಮಿ ಇಂದು ಏಕೆ ಆಚರಿಸಲಾಗುತ್ತದೆ? ಪಂಚಾಂಗ ಹೇಳುವುದೇನು?
ಶ್ರೀರಾಮ ನವಮಿ
ಅಕ್ಷತಾ ವರ್ಕಾಡಿ
|

Updated on:Mar 27, 2026 | 10:20 AM

Share

ಶ್ರೀರಾಮ ನವಮಿಯ ಮಹತ್ವ ಮತ್ತು ಅದರ ಆಚರಣೆಯ ವಿಧಾನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಶ್ರೀರಾಮ ನವಮಿಯೂ ಒಂದು. ತ್ರೇತಾಯುಗದಲ್ಲಿ ಶ್ರೀ ಮಹಾವಿಷ್ಣು ಮರ್ಯಾದಾ ಪುರುಷೋತ್ತಮನಾಗಿ ಅವತರಿಸಿದ ದಿನವೇ ಈ ಶ್ರೀರಾಮ ನವಮಿ. ರಾಮ ನವಮಿಯನ್ನು ಮಾರ್ಚ್ 26 ರಂದು ಆಚರಿಸಲಾಗುವುದು, ಆದರೆ ಮಹಾ ನವಮಿಯನ್ನು ಮಾರ್ಚ್ 27 ರಂದು ಆಚರಿಸಲಾಗುವುದು. ಅದು ಯಾಕೆ ಅಷ್ಟಮಿ ದಿನ ರಾಮನವಮಿಯನ್ನು ಆಚರಿಸಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.

ಇಂದು ಶ್ರೀರಾಮ ನವಮಿ ಆಚರಣೆ ಏಕೆ?

ಪಂಚಾಂಗದ ಪ್ರಕಾರ, ನಿನ್ನೆ ರಾತ್ರಿ 11 ಗಂಟೆ 48 ನಿಮಿಷಕ್ಕೆ ನವಮಿ ಪ್ರಾರಂಭವಾಗಿ, ಇಂದು ಬೆಳಿಗ್ಗೆ 10 ಗಂಟೆ 6 ನಿಮಿಷಕ್ಕೆ ಮುಕ್ತಾಯಗೊಂಡರೂ, ಸೂರ್ಯೋದಯದಲ್ಲಿ ಯಾವ ತಿಥಿ ಇರುತ್ತದೆಯೋ, ಅಂದೇ ಆ ಸಂಪೂರ್ಣ ದಿನವನ್ನು ಆಚರಿಸುವ ಸಂಪ್ರದಾಯವಿದೆ. ಹಾಗಾಗಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಗುತ್ತಿದೆ. ಅಲ್ಲದೆ, ಇಂದು ಮಧ್ಯಾಹ್ನ 3 ಗಂಟೆ 24 ನಿಮಿಷದ ತನಕ ಪುನರ್ವಸು ನಕ್ಷತ್ರವೂ ಇರುವುದು ವಿಶೇಷ. ಇದು ಸಾಕ್ಷಾತ್ ಶ್ರೀರಾಮಚಂದ್ರರ ಜನ್ಮದಿನ.

ಶ್ರೀರಾಮ ನವಮಿ ಆಚರಣೆಗಳು ಹಳ್ಳಿಗಳಿಂದ ಹಿಡಿದು ದೇಶಾದ್ಯಂತ ವಿವಿಧ ರೂಪಗಳಲ್ಲಿ ನಡೆಯುತ್ತವೆ. ಈ ಸಂದರ್ಭದಲ್ಲಿ ಪಾನಕ, ಹೆಸರುಬೇಳೆ, ಪ್ರಸಾದ, ನೈವೇದ್ಯಗಳನ್ನು ಸಿದ್ಧಪಡಿಸಿ ವಿತರಿಸಲಾಗುತ್ತದೆ. ಶ್ರೀರಾಮ ಮತ್ತು ಆಂಜನೇಯ ದೇವಸ್ಥಾನಗಳಲ್ಲಿ ಅಭಿಷೇಕ ಹಾಗೂ ಕಲ್ಯಾಣೋತ್ಸವಗಳನ್ನು ನಡೆಸಲಾಗುತ್ತದೆ. ಈ ಆಚರಣೆಗಳು ಬಾಂಧವ್ಯಗಳನ್ನು ಬಲಪಡಿಸುತ್ತವೆ. ಅಲ್ಲದೆ, ಪಾನಕ ಮತ್ತು ಹೆಸರುಬೇಳೆಯಂತಹ ಆಹಾರ ಪದಾರ್ಥಗಳು ದೇಹವನ್ನು ತಂಪಾಗಿರಿಸಲು ಸಹಾಯ ಮಾಡುತ್ತವೆ.

ಚೈತ್ರ ಮಾಸದ ಶುಕ್ಲಪಕ್ಷದ ಒಂಬತ್ತನೇ ದಿನವನ್ನು ಶ್ರೀರಾಮಚಂದ್ರರ ನವಮಿ ಎಂದು ಆಚರಿಸಲಾಗುತ್ತದೆ. ಇದು ಧರ್ಮದ ವಿಜಯದ ದಿನ. ಶ್ರೀರಾಮಚಂದ್ರರು ಸದಾ ಧರ್ಮ ಮಾರ್ಗದಲ್ಲಿಯೇ ನಡೆದ ಅದ್ಭುತ ಭಗವಂತನ ಸ್ವರೂಪವಾಗಿದ್ದರಿಂದ, ಅವರ ಆದರ್ಶ ಪಾಲನೆ ಈ ಹಬ್ಬದ ಮುಖ್ಯ ಉದ್ದೇಶ. ವಸಂತ ನವರಾತ್ರಿಯ ಮುಕ್ತಾಯವನ್ನೂ ಸಹ ಈ ದಿನ ಸೂಚಿಸುತ್ತದೆ. ಭಾರತದಾದ್ಯಂತ ಈ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ. ಕೆಲವರು ರಾಮಾಯಣ ಪಾರಾಯಣ ಮಾಡಿದರೆ, ಇನ್ನು ಕೆಲವರು ಭಜನೆಗಳನ್ನು ನಡೆಸುತ್ತಾರೆ.

ಶ್ರೀ ರಾಮ ಜಯ ರಾಮ ಜಯ ಜಯ ರಾಮ ಎಂಬ ಮಂತ್ರವನ್ನು ಪಠಿಸುವುದು ಈ ದಿನದ ಪ್ರಮುಖ ಆಚರಣೆಗಳಲ್ಲಿ ಒಂದು. ಈ ಮಹಾಮಂತ್ರವನ್ನು ಎಷ್ಟು ಹೆಚ್ಚಾಗಿ ಪಠಿಸುತ್ತೇವೆಯೋ, ಅಷ್ಟು ಆರೋಗ್ಯದಲ್ಲಿ ಸುಧಾರಣೆ, ಮಾನಸಿಕ ನೆಮ್ಮದಿ, ಶತ್ರುಕಾಟ, ಗ್ರಹಕಾಟಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಕೇವಲ ಈ ಮಹಾಮಂತ್ರವನ್ನು ಪಠಿಸುವುದರಿಂದ ವಿಷ್ಣು ಸಹಸ್ರನಾಮವನ್ನು ಸಂಪೂರ್ಣವಾಗಿ ಓದಿದ ಫಲ ದೊರೆಯುತ್ತದೆ ಎಂದು ಹೇಳಲಾಗುತ್ತದೆ: ಶ್ರೀ ರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ, ಸಹಸ್ರನಾಮ ತತ್ತುಲ್ಯಂ ರಾಮನಾಮ ವರಾನನೇ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಕೆಲವು ಕಡೆ ಸೀತಾರಾಮ ಕಲ್ಯಾಣೋತ್ಸವಗಳನ್ನು, ವಿಶೇಷವಾಗಿ ರಾಮಾ-ಸೀತಾ ವಿವಾಹ ಮಹೋತ್ಸವಗಳನ್ನು ಆಚರಿಸಲಾಗುತ್ತದೆ. ಪಾನಕ, ಹೆಸರುಬೇಳೆ, ಮಜ್ಜಿಗೆ (ಬೆಲ್ಲ ಮತ್ತು ಒಣಶುಂಠಿ ಸೇರಿಸಿದ ನೀರು ಮಜ್ಜಿಗೆ) ದಾನ ಮಾಡುವುದು ಸಹ ಪುಣ್ಯ ಕಾರ್ಯವೆಂದು ನಂಬಲಾಗಿದೆ. ಇತರರ ಆರೋಗ್ಯದ ಬಗ್ಗೆ ಗಮನ ನೀಡಿದಾಗ, ಅದರ ಸತ್ಫಲ ನಮಗೆ ದ್ವಿಗುಣವಾಗಿ ದೊರೆಯುತ್ತದೆ.

ಕೆಲವು ಪ್ರದೇಶಗಳಲ್ಲಿ ಶೋಭಾಯಾತ್ರೆಗಳನ್ನು ಆಯೋಜಿಸಲಾಗುತ್ತದೆ. ರಾಮನ, ಸೀತೆಯ, ಲಕ್ಷ್ಮಣನ, ಹನುಮನ ವೇಷಧಾರಿಗಳು ಮೆರವಣಿಗೆಗಳಲ್ಲಿ ಪಾಲ್ಗೊಂಡು ಭಕ್ತರನ್ನು ರಂಜಿಸುತ್ತಾರೆ. ಈ ಹಬ್ಬದ ಮುಖ್ಯ ಉದ್ದೇಶ ಸತ್ಯತೆ, ತಾಳ್ಮೆ, ಸಹನೆ, ಇವೆಲ್ಲವನ್ನೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮತ್ತು ಶ್ರೀರಾಮಚಂದ್ರರ ಆದರ್ಶಗಳನ್ನು ಪಾಲಿಸುವುದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 27 March 26

Follow Us
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ