AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaitra Navratri 2024: ನವರಾತ್ರಿಯ ಕನ್ಯಾ ಪೂಜೆಯಲ್ಲಿ ಎಷ್ಟು ಹುಡುಗಿಯರು ಕುಳಿತುಕೊಳ್ಳಬೇಕು?

ನವರಾತ್ರಿಯಲ್ಲಿಕನ್ಯಾ ಪೂಜೆ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನವರಾತ್ರಿ ಉಪವಾಸವು ಕೂಡ ಈ ಪೂಜೆಯೊಂದಿಗೆ ಕೊನೆಗೊಳ್ಳುತ್ತದೆ. ಅಷ್ಟಮಿ ಅಥವಾ ನವಮಿ ತಿಥಿಯಂದು ನೀವು ಕನ್ಯಾ ಪೂಜೆ ಮಾಡಬಹುದು. ಆದರೆ ಎಷ್ಟು ಕನ್ಯೆಯರನ್ನು ಮನೆಗೆ ಆಹ್ವಾನಿಸಬೇಕು? ಎಂಬುದು ಹಲವರ ಪ್ರಶ್ನೆಯಾಗಿರುತ್ತದೆ. ಇಲ್ಲಿದೆ ಈ ಬಗ್ಗೆ ಮಾಹಿತಿ.

Chaitra Navratri 2024: ನವರಾತ್ರಿಯ ಕನ್ಯಾ ಪೂಜೆಯಲ್ಲಿ ಎಷ್ಟು ಹುಡುಗಿಯರು ಕುಳಿತುಕೊಳ್ಳಬೇಕು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 16, 2024 | 10:36 AM

Share

ಚೈತ್ರ ಮತ್ತು ಶಾರದೀಯ ನವರಾತ್ರಿಯಲ್ಲಿ ಕನ್ಯಾ ಪೂಜೆ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನವರಾತ್ರಿ ಉಪವಾಸವು ಕೂಡ ಈ ಪೂಜೆಯೊಂದಿಗೆ ಕೊನೆಗೊಳ್ಳುತ್ತದೆ. ಅಷ್ಟಮಿ ಅಥವಾ ನವಮಿ ತಿಥಿಯಂದು ನೀವು ಕನ್ಯಾ ಪೂಜೆ ಮಾಡಬಹುದು. ಆದರೆ ಎಷ್ಟು ಕನ್ಯೆಯರನ್ನು ಮನೆಗೆ ಆಹ್ವಾನಿಸಬೇಕು? ಎಂಬುದು ಹಲವರ ಪ್ರಶ್ನೆಯಾಗಿರುತ್ತದೆ. ಸಾಮಾನ್ಯವಾಗಿ ಈ ಪೂಜೆಯಲ್ಲಿ 9 ಹುಡುಗಿಯರು ಕುಳಿತುಕೊಳ್ಳುವುದು ಶುಭವೆಂದು ಪರಿಗಣಿಸಲಾಗುತ್ತದೆ. ಈ 9 ಹುಡುಗಿಯರು 9 ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ.

  1. ಅಷ್ಟಮಿ ಅಥವಾ ನವಮಿಯ ದಿನದಂದು ನೀವು ಕನ್ಯಾ ಪೂಜೆಯನ್ನು ಮಾಡಿದರೆ, ಒಂಬತ್ತು ಹುಡುಗಿಯರನ್ನು ಪೂಜಿಸುವ ಮೂಲಕ ತಾಯಿಯ ಆಶೀರ್ವಾದ ಪಡೆಯಬಹುದು.
  2. ಕನ್ಯಾ ಪೂಜೆ ಮಾಡುವುದರಿಂದ ಅತ್ಯಧಿಕ ಫಲ ಪ್ರಾಪ್ತಿಯಾಗುತ್ತದೆ. ನಿಮ್ಮ ಆಸೆಗಳು ಈಡೇರುತ್ತದೆ.
  3. ಈ ಪೂಜೆಗೆ 9 ಹುಡುಗಿಯರು ಸಿಗದಿದ್ದಲ್ಲಿ. ಪೂಜೆಯಲ್ಲಿ 5 ಅಥವಾ 7 ಹುಡುಗಿಯರನ್ನು ಕೂಡ ಕೂರಿಸಬಹುದು.
  4. ಕನ್ಯಾ ಪೂಜೆಯ ಸಮಯದಲ್ಲಿ ಹುಡುಗಿಯರನ್ನು ಮನೆಗೆ ಕರೆದು ಅವರಿಗೆ ಆಹಾರವನ್ನು ನೀಡುವುದು ತುಂಬಾ ಶುಭವೆಂದು ಹೇಳಲಾಗುತ್ತದೆ.
  5. ಕನ್ಯಾ ಪೂಜೆಯಲ್ಲಿ, ಮೊದಲು ಎಲ್ಲಾ ಹುಡುಗಿಯರಿಗೆ ಬಟ್ಟೆಗಳನ್ನು ನೀಡಿ. ಆ ಬಳಿಕ ಅವರ ಪಾದಗಳನ್ನು ತೊಳೆಯಿರಿ. ಬಳಿಕ ಕುಂಕುಮ ಹಚ್ಚಿ ನಮಸ್ಕಾರ ಮಾಡಿ.
  6. ಬಳಿಕ ಆ ಕನ್ಯೆಯರಿಗೆ ಒಳ್ಳೆಯ ಆಹಾರವನ್ನು ನೀಡಿ, ಪ್ರತಿಯೊಬ್ಬ ಹುಡುಗಿಗೂ ದಕ್ಷಿಣೆ ಅಥವಾ ಉಡುಗೊರೆಗಳನ್ನು ನೀಡಿ.
  7. ತಾಯಿಗೆ ಮಾಡಿದ ನೈವೇದ್ಯವನ್ನು ಪ್ರಸಾದವಾಗಿ ಕನ್ಯೆಯರಿಗೆ ನೀಡಿ.
  8. ಹುಡುಗಿಯರೊಂದಿಗೆ ಒಬ್ಬರು ಅಥವಾ ಇಬ್ಬರು ಹುಡುಗರನ್ನು ಕೂರಿಸುವ ನಿಯಮವಿದೆ. ಅದರಲ್ಲಿ ಒಂದು ಮಗುವನ್ನು ಭೈರವ ಎಂದು ಮತ್ತಿಬ್ಬರು ಮಕ್ಕಳನ್ನು ಗಣಪತಿ ಎಂದು ಕರೆಯಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ