AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaitra Purnima 2024: ಚೈತ್ರ ಹುಣ್ಣಿಮೆಯ ಪೂಜೆ ಹೇಗೆ ಮಾಡಬೇಕು? ಇಲ್ಲಿದೆ ಸರಳ ಪೂಜಾ ವಿಧಾನ

ಈ ಬಾರಿ ಚೈತ್ರ ಹುಣ್ಣಿಮೆ ಅಥವಾ ಚೈತ್ರ ಪೂರ್ಣಿಮೆಯನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಎ. 23 ರಂದು ಆಚರಿಸಲಾಗುತ್ತದೆ. ಈ ದಿನ ವಿಷ್ಣು, ಲಕ್ಷ್ಮೀ ದೇವಿ ಮತ್ತು ಚಂದ್ರ ದೇವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಈ ವ್ರತವನ್ನು ಸರಿಯಾದ ರೀತಿಯಲ್ಲಿ ಆಚರಣೆ ಮಾಡಿದರೆ ದೇವರ ಆಶೀರ್ವಾದ, ಮನಸ್ಸಿಗೆ ಶಾಂತಿ ಮತ್ತು ಸಮೃದ್ಧಿ ಪ್ರಾಪ್ತವಾಗುತ್ತದೆ ಎಂದು ನಂಬಲಾಗಿದೆ.

Chaitra Purnima 2024: ಚೈತ್ರ ಹುಣ್ಣಿಮೆಯ ಪೂಜೆ ಹೇಗೆ ಮಾಡಬೇಕು? ಇಲ್ಲಿದೆ ಸರಳ ಪೂಜಾ ವಿಧಾನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 22, 2024 | 3:12 PM

Share

ಪಂಚಾಂಗದ ಪ್ರಕಾರ ಇಡೀ ವರ್ಷದಲ್ಲಿ 12 ಹುಣ್ಣಿಮೆಗಳನ್ನು ಆಚರಣೆ ಮಾಡಲಾಗುತ್ತದೆ. ಆದರೆ ಚೈತ್ರ ಮಾಸದ ಹುಣ್ಣಿಮೆಯು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಈ ಬಾರಿ ಚೈತ್ರ ಹುಣ್ಣಿಮೆ ಅಥವಾ ಚೈತ್ರ ಪೂರ್ಣಿಮೆಯನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಎ. 23 ರಂದು ಆಚರಿಸಲಾಗುತ್ತದೆ. ಈ ದಿನ ವಿಷ್ಣು, ಲಕ್ಷ್ಮೀ ದೇವಿ ಮತ್ತು ಚಂದ್ರ ದೇವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಈ ವ್ರತವನ್ನು ಸರಿಯಾದ ರೀತಿಯಲ್ಲಿ ಆಚರಣೆ ಮಾಡಿದರೆ ದೇವರ ಆಶೀರ್ವಾದ, ಮನಸ್ಸಿಗೆ ಶಾಂತಿ ಮತ್ತು ಸಮೃದ್ಧಿ ಪ್ರಾಪ್ತವಾಗುತ್ತದೆ ಎಂದು ನಂಬಲಾಗಿದೆ.

ಚೈತ್ರ ಹುಣ್ಣಿಮೆಯನ್ನು ಎ. 23 ರಂದು ಮಂಗಳವಾರ ಆಚರಿಸಲಾಗುತ್ತದೆ. ಈ ತಿಥಿ ಮುಂಜಾನೆ 3:26 ಕ್ಕೆ ಪ್ರಾರಂಭವಾಗಿ ಎ. 24 ರಂದು (ಬುಧವಾರ) ಬೆಳಿಗ್ಗೆ 5:19 ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಹುಣ್ಣಿಮೆ ವ್ರತವನ್ನು ಮಂಗಳವಾರ ಆಚರಿಸಲಾಗುವುದು. ಹುಣ್ಣಿಮೆಯ ಜೊತೆಗೆ, ಹನುಮಾನ್ ಜಯಂತಿಯನ್ನು ಸಹ ಈ ದಿನ ಆಚರಿಸಲಾಗುತ್ತದೆ. ಈ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮತ್ತು ದಾನ ಮಾಡುವುದು ಶುಭವೆಂದು ಹೇಳಲಾಗುತ್ತದೆ. ಇದರಿಂದ ಎಲ್ಲಾ ಪಾಪಗಳು ದೂರವಾಗಿ ಪುಣ್ಯಫಲ ಸಿಗುತ್ತದೆ. ಚೈತ್ರ ಹುಣ್ಣಿಮೆಯ ದಿನ ಚಂದ್ರೋದಯ ಸಂಜೆ 6:25 ಕ್ಕೆ. ಪೂಜಾ ಸಮಯ ಸಂಜೆ 6:25 ರ ನಂತರವಾಗಿದೆ.

ಚೈತ್ರ ಹುಣ್ಣಿಮೆಯ ಪೂಜೆಯನ್ನು ಹೇಗೆ ಮಾಡುವುದು?

-ಈ ದಿನ ಬ್ರಹ್ಮ ಮುಹೂರ್ತದಲ್ಲಿ ಎದ್ದು ಪವಿತ್ರ ನದಿಗಳಲ್ಲಿ ಸ್ನಾನ ಮಾಡಿ ಅಥವಾ ನೀವು ಸ್ನಾನ ಮಾಡುವ ನೀರಿಗೆ ಗಂಗಾ ಜಲ ಹಾಕಿ.

-ಚೈತ್ರ ಹುಣ್ಣಿಮೆಯಂದು, ದೇವರ ಕೋಣೆಯಲ್ಲಿ ಹಳದಿ ಬಟ್ಟೆಯನ್ನು ಇರಿಸಿ ಅದರ ಮೇಲೆ ವಿಷ್ಣು ಮೂರ್ತಿಯನ್ನು ಇಟ್ಟು ಗಂಗಾ ಜಲದಿಂದ, ಬಳಿಕ ಪಂಚಾಮೃತದಿಂದ ಅಭಿಷೇಕ ಮಾಡಿ.

-ಶುಭ ಮುಹೂರ್ತದಲ್ಲಿ ವಿಷ್ಣುವಿನ ಮಂತ್ರಗಳನ್ನು ಪಠಿಸಿ, ಆರತಿ ಮಾಡಿ.

-ತುಳಸಿ ಎಲೆ ಮತ್ತು ವಿಷ್ಣುವಿಗೆ ಪ್ರೀಯವಾದ ಹೆಸರುಬೇಳೆ ಪಾಯಸವನ್ನು ದೇವರಿಗೆ ನೈವೇದ್ಯ ಮಾಡಿ.

-ಸಂಜೆ ಮುಹೂರ್ತದಲ್ಲಿ, ಚಂದ್ರ ದೇವನನ್ನು ಪೂಜೆ ಮಾಡಿ. ಹಸಿ ಹಾಲನ್ನು ಚಂದ್ರನಿಗೆ ಅರ್ಘ್ಯವಾಗಿ ಅರ್ಪಿಸಿ ಬಳಿಕ ನೀವು ಉಪವಾಸ ಮಾಡಿದ್ದರೆ ಅದನ್ನು ಮುಕ್ತಾಯಗೊಳಿಸಿ.

ಇದನ್ನೂ ಓದಿ: ಮಹಾವೀರ ಸ್ವಾಮಿ ಮತ್ತು ಭಗವಾನ್ ಶ್ರೀರಾಮ ಒಂದೇ ಕುಲ? ಇದು ಸತ್ಯವೇ?

-ಚೈತ್ರ ಹುಣ್ಣಿಮೆಯನ್ನು ಸಾಂಪ್ರದಾಯಿಕವಾಗಿ ಭಕ್ತರು ದಿನವಿಡೀ ಉಪವಾಸ ಮಾಡುವ ಮೂಲಕ ಆಚರಿಸುತ್ತಾರೆ.

-ಚೈತ್ರ ಪೂರ್ಣಿಮಾ ಅಥವಾ ಹುಣ್ಣಿಮೆಯಂದು ಉಪವಾಸದ ಸಮಯದಲ್ಲಿ, ಭಕ್ತರು ಧಾನ್ಯಗಳು ಮತ್ತು ತರಕಾರಿಗಳನ್ನು ತಿನ್ನದೆಯೇ ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸುತ್ತಾರೆ. ಕೆಲವರು ಹಾಲು, ಹಣ್ಣನ್ನು ಮಾತ್ರ ಸೇವನೆ ಮಾಡುತ್ತಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ