AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaitra Purnima 2024: ಚೈತ್ರ ಹುಣ್ಣಿಮೆಯ ಪೂಜೆ ಹೇಗೆ ಮಾಡಬೇಕು? ಇಲ್ಲಿದೆ ಸರಳ ಪೂಜಾ ವಿಧಾನ

ಈ ಬಾರಿ ಚೈತ್ರ ಹುಣ್ಣಿಮೆ ಅಥವಾ ಚೈತ್ರ ಪೂರ್ಣಿಮೆಯನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಎ. 23 ರಂದು ಆಚರಿಸಲಾಗುತ್ತದೆ. ಈ ದಿನ ವಿಷ್ಣು, ಲಕ್ಷ್ಮೀ ದೇವಿ ಮತ್ತು ಚಂದ್ರ ದೇವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಈ ವ್ರತವನ್ನು ಸರಿಯಾದ ರೀತಿಯಲ್ಲಿ ಆಚರಣೆ ಮಾಡಿದರೆ ದೇವರ ಆಶೀರ್ವಾದ, ಮನಸ್ಸಿಗೆ ಶಾಂತಿ ಮತ್ತು ಸಮೃದ್ಧಿ ಪ್ರಾಪ್ತವಾಗುತ್ತದೆ ಎಂದು ನಂಬಲಾಗಿದೆ.

Chaitra Purnima 2024: ಚೈತ್ರ ಹುಣ್ಣಿಮೆಯ ಪೂಜೆ ಹೇಗೆ ಮಾಡಬೇಕು? ಇಲ್ಲಿದೆ ಸರಳ ಪೂಜಾ ವಿಧಾನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 22, 2024 | 3:12 PM

Share

ಪಂಚಾಂಗದ ಪ್ರಕಾರ ಇಡೀ ವರ್ಷದಲ್ಲಿ 12 ಹುಣ್ಣಿಮೆಗಳನ್ನು ಆಚರಣೆ ಮಾಡಲಾಗುತ್ತದೆ. ಆದರೆ ಚೈತ್ರ ಮಾಸದ ಹುಣ್ಣಿಮೆಯು ವಿಶೇಷ ಮಹತ್ವವನ್ನು ಹೊಂದಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಈ ಬಾರಿ ಚೈತ್ರ ಹುಣ್ಣಿಮೆ ಅಥವಾ ಚೈತ್ರ ಪೂರ್ಣಿಮೆಯನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಎ. 23 ರಂದು ಆಚರಿಸಲಾಗುತ್ತದೆ. ಈ ದಿನ ವಿಷ್ಣು, ಲಕ್ಷ್ಮೀ ದೇವಿ ಮತ್ತು ಚಂದ್ರ ದೇವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಈ ವ್ರತವನ್ನು ಸರಿಯಾದ ರೀತಿಯಲ್ಲಿ ಆಚರಣೆ ಮಾಡಿದರೆ ದೇವರ ಆಶೀರ್ವಾದ, ಮನಸ್ಸಿಗೆ ಶಾಂತಿ ಮತ್ತು ಸಮೃದ್ಧಿ ಪ್ರಾಪ್ತವಾಗುತ್ತದೆ ಎಂದು ನಂಬಲಾಗಿದೆ.

ಚೈತ್ರ ಹುಣ್ಣಿಮೆಯನ್ನು ಎ. 23 ರಂದು ಮಂಗಳವಾರ ಆಚರಿಸಲಾಗುತ್ತದೆ. ಈ ತಿಥಿ ಮುಂಜಾನೆ 3:26 ಕ್ಕೆ ಪ್ರಾರಂಭವಾಗಿ ಎ. 24 ರಂದು (ಬುಧವಾರ) ಬೆಳಿಗ್ಗೆ 5:19 ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಹುಣ್ಣಿಮೆ ವ್ರತವನ್ನು ಮಂಗಳವಾರ ಆಚರಿಸಲಾಗುವುದು. ಹುಣ್ಣಿಮೆಯ ಜೊತೆಗೆ, ಹನುಮಾನ್ ಜಯಂತಿಯನ್ನು ಸಹ ಈ ದಿನ ಆಚರಿಸಲಾಗುತ್ತದೆ. ಈ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮತ್ತು ದಾನ ಮಾಡುವುದು ಶುಭವೆಂದು ಹೇಳಲಾಗುತ್ತದೆ. ಇದರಿಂದ ಎಲ್ಲಾ ಪಾಪಗಳು ದೂರವಾಗಿ ಪುಣ್ಯಫಲ ಸಿಗುತ್ತದೆ. ಚೈತ್ರ ಹುಣ್ಣಿಮೆಯ ದಿನ ಚಂದ್ರೋದಯ ಸಂಜೆ 6:25 ಕ್ಕೆ. ಪೂಜಾ ಸಮಯ ಸಂಜೆ 6:25 ರ ನಂತರವಾಗಿದೆ.

ಚೈತ್ರ ಹುಣ್ಣಿಮೆಯ ಪೂಜೆಯನ್ನು ಹೇಗೆ ಮಾಡುವುದು?

-ಈ ದಿನ ಬ್ರಹ್ಮ ಮುಹೂರ್ತದಲ್ಲಿ ಎದ್ದು ಪವಿತ್ರ ನದಿಗಳಲ್ಲಿ ಸ್ನಾನ ಮಾಡಿ ಅಥವಾ ನೀವು ಸ್ನಾನ ಮಾಡುವ ನೀರಿಗೆ ಗಂಗಾ ಜಲ ಹಾಕಿ.

-ಚೈತ್ರ ಹುಣ್ಣಿಮೆಯಂದು, ದೇವರ ಕೋಣೆಯಲ್ಲಿ ಹಳದಿ ಬಟ್ಟೆಯನ್ನು ಇರಿಸಿ ಅದರ ಮೇಲೆ ವಿಷ್ಣು ಮೂರ್ತಿಯನ್ನು ಇಟ್ಟು ಗಂಗಾ ಜಲದಿಂದ, ಬಳಿಕ ಪಂಚಾಮೃತದಿಂದ ಅಭಿಷೇಕ ಮಾಡಿ.

-ಶುಭ ಮುಹೂರ್ತದಲ್ಲಿ ವಿಷ್ಣುವಿನ ಮಂತ್ರಗಳನ್ನು ಪಠಿಸಿ, ಆರತಿ ಮಾಡಿ.

-ತುಳಸಿ ಎಲೆ ಮತ್ತು ವಿಷ್ಣುವಿಗೆ ಪ್ರೀಯವಾದ ಹೆಸರುಬೇಳೆ ಪಾಯಸವನ್ನು ದೇವರಿಗೆ ನೈವೇದ್ಯ ಮಾಡಿ.

-ಸಂಜೆ ಮುಹೂರ್ತದಲ್ಲಿ, ಚಂದ್ರ ದೇವನನ್ನು ಪೂಜೆ ಮಾಡಿ. ಹಸಿ ಹಾಲನ್ನು ಚಂದ್ರನಿಗೆ ಅರ್ಘ್ಯವಾಗಿ ಅರ್ಪಿಸಿ ಬಳಿಕ ನೀವು ಉಪವಾಸ ಮಾಡಿದ್ದರೆ ಅದನ್ನು ಮುಕ್ತಾಯಗೊಳಿಸಿ.

ಇದನ್ನೂ ಓದಿ: ಮಹಾವೀರ ಸ್ವಾಮಿ ಮತ್ತು ಭಗವಾನ್ ಶ್ರೀರಾಮ ಒಂದೇ ಕುಲ? ಇದು ಸತ್ಯವೇ?

-ಚೈತ್ರ ಹುಣ್ಣಿಮೆಯನ್ನು ಸಾಂಪ್ರದಾಯಿಕವಾಗಿ ಭಕ್ತರು ದಿನವಿಡೀ ಉಪವಾಸ ಮಾಡುವ ಮೂಲಕ ಆಚರಿಸುತ್ತಾರೆ.

-ಚೈತ್ರ ಪೂರ್ಣಿಮಾ ಅಥವಾ ಹುಣ್ಣಿಮೆಯಂದು ಉಪವಾಸದ ಸಮಯದಲ್ಲಿ, ಭಕ್ತರು ಧಾನ್ಯಗಳು ಮತ್ತು ತರಕಾರಿಗಳನ್ನು ತಿನ್ನದೆಯೇ ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸುತ್ತಾರೆ. ಕೆಲವರು ಹಾಲು, ಹಣ್ಣನ್ನು ಮಾತ್ರ ಸೇವನೆ ಮಾಡುತ್ತಾರೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ