AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ವೃತ್ತಿಜೀವನದಲ್ಲಿ ಯಶಸ್ಸು ಸಿಗಬೇಕೆಂದರೆ ಈ ಗುಣಗಳನ್ನು ಬಿಟ್ಟುಬಿಡಿ

ಆಚಾರ್ಯ ಚಾಣಕ್ಯರು, ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲು ಕೆಲವು ವಿಷಯಗಳನ್ನು ತ್ಯಾಗ ಮಾಡುವ ಬಗ್ಗೆ ಹೇಳಿದ್ದಾರೆ. ಈ ಗುಣಗಳನ್ನು ತ್ಯಜಿಸುವ ಮೂಲಕ, ತಪ್ಪುಗಳಿಂದ ಹೊಸದನ್ನು ಕಲಿಯುತ್ತಾ ವೃತ್ತಿಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದಿದ್ದಾರೆ. ನೀವು ಈ ಸರಳ ನಿಯಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಯಶಸ್ಸಿನ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ.

Chanakya Niti: ವೃತ್ತಿಜೀವನದಲ್ಲಿ ಯಶಸ್ಸು ಸಿಗಬೇಕೆಂದರೆ ಈ ಗುಣಗಳನ್ನು ಬಿಟ್ಟುಬಿಡಿ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 11, 2024 | 2:40 PM

Share

ವೃತ್ತಿಜೀವನದಲ್ಲಿ ಯಶಸ್ಸನ್ನು ಬಯಸುವವರು ಕೆಲವು ವಿಷಯಗಳನ್ನು ತ್ಯಾಗ ಮಾಡಬೇಕಾಗುತ್ತದೆ, ಏಕೆಂದರೆ ಆಗ ಮಾತ್ರ ನೀವು ಅಂದುಕೊಂಡ ಕಾರ್ಯ ಸಿದ್ದಿಸಲು ಸಾಧ್ಯವಾಗುತ್ತದೆ. ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಲು ತಿಳಿಸಿದ್ದು ನೀವು ಈ ಸರಳ ನಿಯಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಯಶಸ್ಸಿನ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಚಾಣಕ್ಯರು ಕೆಲವು ಗುಣಗಳನ್ನು ತ್ಯಾಗ ಮಾಡುವ ಬಗ್ಗೆ ಹೇಳಿದ್ದು ಇಲ್ಲಿದೆ ಸಂಪೂರ್ಣ ಮಾಹಿತಿ.

ಎಂದಿಗೂ ಹೆಮ್ಮೆ ಪಟ್ಟುಕೊಳ್ಳಬೇಡಿ

ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ ವೃತ್ತಿ ಜೀವನದಲ್ಲಿ ಸಣ್ಣ ಯಶಸ್ಸನ್ನು ಕಂಡಾಗ ವಿಚಲಿತರಾಗಬಾರದು ಏಕೆಂದರೆ ಇದು ನಿಮ್ಮ ಯಶಸ್ಸನ್ನು ಕುಂಠಿತಗೊಳಿಸುತ್ತದೆ ಎಂದು ಹೇಳಿದ್ದಾರೆ. ಹಾಗಾಗಿ ನಿಮ್ಮ ಮನಸ್ಥಿತಿಯನ್ನು ಗೆದ್ದರೂ, ಸೋತರೂ ನಿರಂತರವಾಗಿ ಒಂದೇ ರೀತಿಯಲ್ಲಿ ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಹಾಗಾಗಿ ನೀವು ಮಾಡಿದ ಕೆಲಸಕ್ಕೆ ಹೆಮ್ಮೆಪಡಬಾರದು, ಏಕೆಂದರೆ ಅಹಂಕಾರವು ವ್ಯಕ್ತಿಯ ನಿಧಾನಗತಿಯ ಅವನತಿಗೆ ಕಾರಣವಾಗುತ್ತದೆ.

ತಪ್ಪುಗಳಿಂದ ಹೊಸದನ್ನು ಕಲಿಯಿರಿ

ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಬೆಳವಣಿಗೆಯತ್ತ ಗಮನ ಹರಿಸಿ. ಎಲ್ಲ ರೀತಿಯ ಪ್ರತಿಕ್ರಿಯೆಯನ್ನು ಸ್ವೀಕರಿಸಿ. ನಿಮ್ಮ ತಪ್ಪುಗಳಿಂದ ಹೊಸದನ್ನು ಕಲಿಯಲು ಪ್ರಯತ್ನಿಸಿ. ನಿಮ್ಮನ್ನು ನೀವು ಸರಿಪಡಿಸಿಕೊಳ್ಳಿ. ಇದು ವೃತ್ತಿ ಜೀವನದಲ್ಲಿ ಬೆಳೆಯಲು ಅತ್ಯುತ್ತಮ ಮಾರ್ಗವಾಗಿದೆ. ನಿಮ್ಮ ಕೆಲಸದ ಜೊತೆಗೆ ಬೇರೆ ಬೇರೆ ಕೆಲಸಗಳನ್ನು ಮಾಡಲು ಪ್ರಯತ್ನಿಸಿ.

ಸಹಾಯ ಮಾಡಲು ಹಿಂಜರಿಯಬೇಡಿ

ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ, ವೃತ್ತಿಜೀವನದಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡುವುದು ಮುಖ್ಯ. ಅರ್ಥಪೂರ್ಣ ಗೆಳೆತನಕ್ಕೆ ಇದು ಸಹಾಯ ಮಾಡುತ್ತದೆ. ಇತರರ ಸಹಯೋಗ ಮತ್ತು ಅವರಿಂದ ಹೊಸ ಕಲಿಕೆಯು ನಿಮಗೆ ಹೆಚ್ಚಿನ ಅವಕಾಶಗಳನ್ನು ತೆರೆದಿಡುತ್ತದೆ.

ಇದನ್ನೂ ಓದಿ: ನಿಮ್ಮ ಅಮ್ಮನಲ್ಲಿ ರಾಮಾಯಣದಲ್ಲಿ ಬರುವ ತಾಯಂದಿರ ಈ ಗುಣ ಇದ್ದೆ ಇರುತ್ತೆ ಒಮ್ಮೆ ಗಮನಿಸಿ

ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳಿ

ನಿಮ್ಮ ಕೌಶಲ, ಆಸಕ್ತಿ ಮತ್ತು ಉತ್ಸಾಹಕ್ಕೆ ಹೊಂದಿಕೆಯಾಗುವಂತಹ ವೃತ್ತಿಜೀವನವನ್ನು ಆಯ್ಕೆ ಮಾಡುವತ್ತ ಗಮನ ಹರಿಸಿ. ಚಾಣಕ್ಯರು ಹೇಳುವ ಪ್ರಕಾರ, ಮನುಷ್ಯ ಮೊದಲು ತನ್ನ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳಬೇಕು. ಆಗ ಮಾತ್ರ ಯಶಸ್ಸಿನ ಹಾದಿಯಲ್ಲಿ ಗುರಿ ಮುಟ್ಟಲು ಸಾಧ್ಯವಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ