AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಕೈಯಲ್ಲಿ ಹಣವಿಲ್ಲವೆಂದು ಚಿಂತಿಸುತ್ತಿದ್ದೀರಾ? ದೇವಿ ಲಕ್ಷ್ಮಿಯನ್ನು ಮೆಚ್ಚಿಸಲು ಈ 3 ಮಾರ್ಗಗಳನ್ನು ತಿಳಿದುಕೊಳ್ಳಿ – ಚಾಣಕ್ಯ ನೀತಿ

ಚಾಣಕ್ಯ ನೀತಿ: ಸಂಪತ್ತನ್ನು ಸಂಪಾದಿಸಬೇಕು ಅಂದಾದಾಗ ಮನೆಗೆ ಲಕ್ಷ್ಮಿ ದೇವಿಯ ಕೃಪೆ ಇರಬೇಕು. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಅಂದಾದರೆ ಏನು ಮಾಡಬೇಕು ಎಂಬುದರ ಕುರಿತಾಗಿ ಆಚಾರ್ಯ ಚಾಣಕ್ಯರು ವಿವರಿಸಿದ್ದಾರೆ.

Chanakya Niti: ಕೈಯಲ್ಲಿ ಹಣವಿಲ್ಲವೆಂದು ಚಿಂತಿಸುತ್ತಿದ್ದೀರಾ? ದೇವಿ ಲಕ್ಷ್ಮಿಯನ್ನು ಮೆಚ್ಚಿಸಲು ಈ 3 ಮಾರ್ಗಗಳನ್ನು ತಿಳಿದುಕೊಳ್ಳಿ - ಚಾಣಕ್ಯ ನೀತಿ
ಚಾಣಕ್ಯ ನೀತಿ
TV9 Web
| Edited By: |

Updated on: Jul 17, 2021 | 9:15 AM

Share

ಆಚಾರ್ಯ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹಣದ ಉಪಯುಕ್ತತೆ ಬಗ್ಗೆ ವಿವರಿಸುವಾಗ ಹಣವನ್ನು ಸ್ನೇಹಿತ ಎಂದು ಕರೆದಿದ್ದಾರೆ. ಜತೆಗೆ ಅದರ ಉಪಯೋಗದ ಬಗ್ಗೆಯೂ ವಿವರಿಸಿದ್ದಾರೆ. ಕಷ್ಟದ ಸಮಯದಲ್ಲಿ ಯಾರೂ ಸಹ ನಿಮ್ಮನ್ನು ಬೆಂಬಲಿಸುವುದಿಲ್ಲ. ಆದರೆ ಹಣನೆಂಬ ಸ್ನೇಹಿತ ನಿಮ್ಮ ಕೈಹಿಡಿಯುತ್ತಾನೆ ಎಂದು ಹೇಳಿದ್ದಾರೆ. ಅದಕ್ಕಾಗಿಯೇ ಪ್ರತಿಯೊಬ್ಬರೂ ಸಂಪತ್ತನ್ನು ಗೌರವಿಸಬೇಕು ಮತ್ತು ಸಂಪತ್ತನ್ನು ಸಂಗ್ರಹಿಸಬೇಕು. ಆದರೆ ಸಂಪತ್ತನ್ನು ಸಂಪಾದಿಸಬೇಕು ಅಂದಾದಾಗ ಮನೆಗೆ ಲಕ್ಷ್ಮಿ ದೇವಿಯ ಕೃಪೆ ಇರಬೇಕು. ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಅಂದಾದರೆ ಏನು ಮಾಡಬೇಕು ಎಂಬುದರ ಕುರಿತಾಗಿ ಆಚಾರ್ಯ ಚಾಣಕ್ಯರು ವಿವರಿಸಿದ್ದಾರೆ.

ಸ್ವಚ್ಛತೆ ಲಕ್ಷ್ಮಿ ದೇವಿ ನಿಮಗೆ ಆಶಿರ್ವದಿಸಬೇಕು ಅಂದಾದರೆ ಮನೆಯಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನವಹಿಸಿ. ಮನೆಯಲ್ಲಿ ಶಾಂತಿಯುತ ವಾತಾವರಣವಿರಬೇಕು. ಎಲ್ಲಿ ಅಶಾಂತಿ ನೆಲೆಸಿದೆಯೋ ಅಲ್ಲಿ ಲಕ್ಷ್ಮಿ ದೇವಿ ಪ್ರವೇಶಿಸಲು ಹಿಂದೇಟು ಹಾಕುತ್ತಾಳೆ. ಕುಟುಂಬ ಸದಸ್ಯರ ನಡುವೆ ಪ್ರೀತಿ ಇರುವ ಮನೆಯಲ್ಲಿ ಗಂಡ ಮತ್ತು ಹೆಂಡತಿ ಪ್ರೀತಿ ಸಹಬಾಳ್ವೆಯಿಂದ ಬದುಕುತ್ತಾರೆ. ತಾಯಿ ಲಕ್ಷ್ಮಿಯ ಆಶೀರ್ವಾದ ಸದಾ ಕಾಲ ಆ ಮನೆಯಲ್ಲಿ ಉಳಿಯುತ್ತದೆ.

ಒಳ್ಳೆಯ ಮಾತು ಮಾತಿನಲ್ಲಿ ಮಾಧುರ್ಯವಿಲ್ಲದವರು ಕಹಿ ಮಾತುಗಳನ್ನು ಆಡುತ್ತಾರೆ. ತಾಯಿ ಲಕ್ಷ್ಮಿ ಅವರನ್ನು ಎಂದಿಗೂ ಮೆಚ್ಚುವುದಿಲ್ಲ. ಕೆಟ್ಟ ಪದಗಳನ್ನು ಮಾತನಾಡುವ ವ್ಯಕ್ತಿಯು ಎಂದಿಗೂ ಸಮಸ್ಯೆಗೆ ಸಿಲುಕುತ್ತಾರೆ. ನೀವು ವಿನಯದಿಂದ ಮಾತನಾಡುವುದರ ಮೂಲಕ ಇತರರ ಹೃದಯ ಗೆಲ್ಲಬಹುದು. ನೀವು ಜನರೊಂದಿಗೆ ಹೊಂದಿಕೊಂಡು ನಡೆಯಬಹುದು. ಪ್ರೀತಿ ವಿಶ್ವಾಸದ ಜತೆಗೆ ಗೌರವವನ್ನು ಗಳಿಸಬಹುದು. ಆಗ ನಿಮ್ಮ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ.

ದಾನ-ಧರ್ಮ ಸಮಾಜದಲ್ಲಿ ವ್ಯಕ್ತಿ ಯಾವ ರೀತಿ ನಡೆದುಕೊಳ್ಳುತ್ತಾನೋ ಅದೇ ಆತನಿಗೆ ಸಿಗುತ್ತದೆ ಎಂಬ ತತ್ವವಿದೆ. ಧರ್ಮಗ್ರಂಥಗಳಿಗೆ ಮತ್ತು ದಾನ-ಧರ್ಮಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿ. ಪ್ರೀತಿಯ ಮಾತು, ಸಹಾಯ, ಸೌಮ್ಯ ಗುಣ, ಸ್ನೇಹ, ದಾನ, ಸದ್ಗುಣ ಮುಂತಾದ ವಿಷಯಗಳನ್ನು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇದರಿಂದ ನೀವು ಜೀವನದಲ್ಲಿ ಯಶಸ್ಸು ಕಾಣಬಹುದಾಗಿದೆ. ದಾನ ಮಾಡುವ ವ್ಯಕ್ತಿಗೆ ತಾಯಿ ಲಕ್ಷ್ಮಿ ಆಶೀರ್ವದಿಸುತ್ತಾಳೆ. ಮತ್ತೊಂದೆಡೆ, ಶ್ರೀಮಂತಿಕೆಯಿದ್ದರೂ ಸಹ ದಾನ-ಧರ್ಮ ಮಾಡದ ವ್ಯಕ್ತಿಗಳ ಮೇಲೆ ಲಕ್ಷ್ಮಿ ದೇವಿ ಕೋಪಗೊಳ್ಳುತ್ತಾಳೆ. ಇದರಿಂದ ವ್ಯಕ್ತಿಯ ಜೀವನ ಎಂದಿಗೂ ಸಂತೋಷವಾಗಿರುವುದಿಲ್ಲ.

ಇದನ್ನೂ ಓದಿ:

Chanakya Niti: ಗಂಡ-ಹೆಂಡತಿ ಬಾಂಧವ್ಯದಲ್ಲಿ ಈ ಕೊರತೆಗಳು ಸಂಬಂಧವನ್ನು ಹದಗೆಡಿಸುತ್ತವೆ – ಚಾಣಕ್ಯ ನೀತಿ

Chanakya Niti: ಮಕ್ಕಳ ಈ ಕೆಲವು ಅಭ್ಯಾಸಗಳನ್ನು ನಿರ್ಲಕ್ಷಿಸುವುದು ಭವಿಷ್ಯವನ್ನೇ ಕಿತ್ತುಕೊಳ್ಳಬಹುದು – ಚಾಣಕ್ಯ ನೀತಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು