AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಸಂಬಂಧಗಳನ್ನು ಬಲಪಡಿಸಿಕೊಳ್ಳಲು ಇವುಗಳನ್ನು ಪಾಲಿಸಲೇಬೇಕು- ಚಾಣಕ್ಯ ನೀತಿ

ಚಾಣಕ್ಯ ನೀತಿ: ಆಚಾರ್ಯ ಚಾಣಕ್ಯರು, ಚಾಣಕ್ಯ ನೀತಿಯ ಸಾರದಲ್ಲಿ ಸಂಬಂಧಗಳನ್ನು ಬಲಪಡಿಸಿಕೊಳ್ಳುವುದರ ಬಗ್ಗೆ ತಿಳಿಸಿದ್ದಾರೆ. ವ್ಯಕ್ತಿಯು ಜೀವನದಲ್ಲಿ ಸಂಬಂಧಗಳನ್ನು ಗಟ್ಟಿಕೊಳಿಸಲು ಬಯಸಿದ್ದರೆ ಈ ವಿಷಯಗಳನ್ನು ಪಾಲಿಸಬೇಕು.

Chanakya Niti: ಸಂಬಂಧಗಳನ್ನು ಬಲಪಡಿಸಿಕೊಳ್ಳಲು ಇವುಗಳನ್ನು ಪಾಲಿಸಲೇಬೇಕು- ಚಾಣಕ್ಯ ನೀತಿ
ಆಚಾರ್ಯ ಚಾಣಕ್ಯ
TV9 Web
| Edited By: |

Updated on: Jul 12, 2021 | 12:55 PM

Share

ಪ್ರತಿಯೊಬ್ಬರೂ ಸಹ ಉತ್ತಮ ಸಂಬಂಧಗಳಲ್ಲಿ ಬದುಕಲು ಇಷ್ಟಪಡುತ್ತಾರೆ. ಹೆಚ್ಚು ನಂಬಿಕೆ, ವಿಶ್ವಾಸದಿಂದ ಜನರ ಪ್ರೀತಿಯೊಂದಿಗೆ ಒಳ್ಳೆಯ ಭಾಂದವ್ಯದಲ್ಲಿ ಬದುಕಲು ಬಯಸುತ್ತಾರೆ. ಹೀಗಾಗಿ ಅನೇಕ ಪ್ರಯತ್ನವನ್ನೂ ಮಾಡುತ್ತಾರೆ. ಕುಟುಂಬದ ಸಂಬಂಧವಾಗಿರಲಿ ಅಥವಾ ವ್ಯವಹಾರಕ್ಕೆ ಸಂಬಂಧಿಸಿರಲಿ ಒಳ್ಳೆಯ ಪ್ರೀತಿ, ವಿಶ್ವಾಸ ಗಳಿಸಲು ಇಷ್ಟಪಡುತ್ತಾರೆ. ಒಳ್ಳೆಯ ಸಂಬಂಧವು ನಮ್ಮನ್ನು ಗಟ್ಟಿಗೊಳಿಸುತ್ತದೆ. ಅದೆಷ್ಟೋ ತೊಂದರೆಗಳನ್ನು ಸುಲಭದಲ್ಲಿ ತೊಡೆದುಹಾಕಲು ನೆರವಾಗುತ್ತದೆ. ಹಾಗಾಗಿ ನಾವು ನಮ್ಮ ಜೀವನದಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸಿಕೊಳ್ಳಬೇಕು.

ಆಚಾರ್ಯ ಚಾಣಕ್ಯರು, ಚಾಣಕ್ಯ ನೀತಿಯ ಸಾರದಲ್ಲಿ ಸಂಬಂಧಗಳನ್ನು ಬಲಪಡಿಸಿಕೊಳ್ಳುವುದರ ಬಗ್ಗೆ ತಿಳಿಸಿದ್ದಾರೆ. ವ್ಯಕ್ತಿಯು ಜೀವನದಲ್ಲಿ ಸಂಬಂಧಗಳನ್ನು ಗಟ್ಟಿಕೊಳಿಸಲು ಬಯಸಿದ್ದರೆ ಈ ವಿಷಯಗಳನ್ನು ಪಾಲಿಸಬೇಕು.

ಸತ್ಯ ಮತ್ತು ಪ್ರಾಮಾಣಿಕತೆ ಯಾವುದೇ ಒಬ್ಬ ವ್ಯಕ್ತಿಯು ಎಲ್ಲರಿಗೂ ಪ್ರಿಯವಾಗಿ ಇರಲು ಸಾಧ್ಯವಿಲ್ಲ. ಹಾಗಿರುವುದು ಸುಲಭದ ಮಾತೂ ಅಲ್ಲ. ಆದರೆ ಸುಳ್ಳು ಹೇಳುವುದು ಸಂಬಂಧಗಳಲ್ಲಿ ಬಿರುಕು ಮೂಡಿಸುತ್ತವೆ. ಸುಳ್ಳು ಹೇಳಿ ಸಿಕ್ಕಿ ಬಿದ್ದಾಗ ಜನರೆದುರು ಮುಜುಗರಕ್ಕೆ ಒಳಗಾಗುವ ಪ್ರಸಂಗಗಳು ಎದುರಾಗಬಹುದು. ಹಾಗಾಗಿ ಸಂಬಂಧಗಳ ಅಡಿಪಾಯವು ಯಾವಾಗಲೂ ಸತ್ಯ ಮತ್ತು ಪ್ರಾಮಾಣಿಕವಾಗಿರಬೇಕು.

ನಮ್ರತೆ ಇಟ್ಟುಕೊಳ್ಳಿ ತಮ್ಮ ಭಾಷೆಯಲ್ಲಿ ನಮ್ರತೆ ಮತ್ತು ಮಾಧುರ್ಯತೆಯನ್ನು ಹೊಂದಿರುವ ಆಚಾರ್ಯ ಚಾಣಕ್ಯ ಅವರ ಪ್ರಕಾರ, ಮಧುರ ಧ್ವನಿಯು ಯಾವುದೇ ವ್ಯಕ್ತಿಯ ಹೃದಯವನ್ನು ಗೆಲ್ಲುತ್ತದೆ. ಪ್ರೀತಿ, ವಿಶ್ವಾಸ ನಂಬಿಕೆಯನ್ನು ಹೆಚ್ಚಿಸುತ್ತದೆ. ಜನರನ್ನು ಯಾವಾಗಲೂ ಗೌರವಿಸಿ ಮತ್ತು ಒಳ್ಳೆಯ ಮಾತುಗಳನ್ನಾಡಿ.

ದುರಹಂಕಾರ ಪಡಬೇಡಿ ಯಾವುದೇ ವ್ಯಕ್ತಿಯ ಬಗ್ಗೆ ದುರಹಂಕಾರ ಭಾವ ಬೇಡ. ಇದು ನಿಮ್ಮ ಯಶಸ್ಸಿಗೆ ಅಡ್ಡವಾಗಿರುತ್ತದೆ. ಈ ಕಾರಣದಿಂದಲೇ ನಿಮ್ಮ ಸಂಬಂಧಗಳಲ್ಲಿ ಬಿರುಕು ಬೀಡುತ್ತವೆ. ಆಚಾರ್ಯ ಚಾಣುಕ್ಯರು ಹೇಳಿರುವ ಪ್ರಕಾರ ಯಾವುದೇ ವ್ಯಕ್ತಿಗೆ ಅಹಂ ಇರಬಾರದು. ಇದು ಸಂಬಂಧವನ್ನು ಕೆಡಿಸುತ್ತದೆ.

ಘನತೆಯನ್ನು ಕಾಪಾಡಿಕೊಳ್ಳಿ ಯಾವುದೇ ಒಂದು ಸಂಬಂಧದಲ್ಲಿ ಪರಸ್ಪರ ಗೌರವವನ್ನು ಹೊಂದಿರುವುದು ತುಂಬಾ ಮುಖ್ಯ. ಪ್ರತಿಯೊಂದು ಸಂಬಂಧವನ್ನು ಕಾಪಾಡಿಕೊಂಡು ಹೋಗಲು ಘನತೆ ಇರುವುದು ಬಹಳ ಅವಶ್ಯಕ. ಕೋಪ ಅಥವಾ ಸಿಟ್ಟಿನಿಂದ ಕೂಗಿ ಇನ್ನಿತರರ ಮನಸ್ಸಿಗೆ ನೋವಾಗುವಂತೆ ಎಂದಿಗೂ ನಡೆದುಕೊಳ್ಳಬಾರದು. ಒಬ್ಬ ವ್ಯಕ್ತಿಯು ಇತರರ ಬಗ್ಗೆ ಪ್ರೀತಿ, ಗೌರವವನ್ನು ಹೊಂದಿದ್ದರೆ, ತಾನಾಗಿಯೇ ಅಹಂ ಮತ್ತು ಕೋಪವನ್ನು ಬಿಡುತ್ತಾನೆ. ಅಂಥವರು ಯಾವಾಗಲೂ ಜನರ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತಾರೆ.

ಇದನ್ನೂ ಓದಿ:

Chanakya Niti: ಜೀವನದಲ್ಲಿ ಯಶಸ್ಸು ಪಡೆಯುವುದು ಹೇಗೆ? ಚಾಣಕ್ಯ ನೀತಿಯ ಸಾರವೇನು?

Chanakya Niti: ಜೀವನದ ಈ ಒಂದು ಕೊರತೆ ನಿಮ್ಮ ಯಶಸ್ಸನ್ನೇ ಕಿತ್ತುಕೊಳ್ಳಬಹುದು – ಚಾಣಕ್ಯ ನೀತಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್