Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಯಶಸ್ಸಿಗೆ ಚಾಣಕ್ಯ ಹೇಳಿದ 4 ಸೂತ್ರಗಳು; ಇವುಗಳನ್ನು ಪಾಲಿಸಿದರೆ ಯಾವುದೂ ಅಸಾಧ್ಯವಲ್ಲ

ಹಲವು ಶಾಸ್ತ್ರಗಳಲ್ಲಿ ಪ್ರವೀಣರಾಗಿರುವ ಆಚಾರ್ಯ ಚಾಣಕ್ಯರು ಯಶಸ್ಸಿಗೆ ನೀಡಿದ ಸೂಚನೆಗಳೇನು ಎಂಬುದರ ಮಾಹಿತಿ ಇಲ್ಲಿದೆ.

Chanakya Niti: ಯಶಸ್ಸಿಗೆ ಚಾಣಕ್ಯ ಹೇಳಿದ 4 ಸೂತ್ರಗಳು; ಇವುಗಳನ್ನು ಪಾಲಿಸಿದರೆ ಯಾವುದೂ ಅಸಾಧ್ಯವಲ್ಲ
ಆಚಾರ್ಯ ಚಾಣಕ್ಯ ಹೇಳಿದ ಯಶಸ್ಸಿನ ಸೂತ್ರ
Follow us
Ganapathi Sharma
|

Updated on: Jun 09, 2023 | 7:39 AM

ಯಶಸ್ಸಿಗಾಗಿ ಹುಚ್ಚುಚ್ಚಾಗಿ ಓಡುವವರಲ್ಲಿ ನಾವೂ ಸಹ ಒಬ್ಬರಾಗಿದ್ದೇವೆ. ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಯಶಸ್ಸನ್ನು ಸಾಧಿಸಲು ಪ್ರಯತ್ನಿಸುತ್ತಾರೆ. ಆದರೆ ಎಲ್ಲರೂ ಯಶಸ್ಸಿಗೆ ಹತ್ತಿರವಾಗುವುದಿಲ್ಲ. ಆದರೆ ಆದಷ್ಟು ಬೇಗ ಜೀವನದಲ್ಲಿ ಯಶಸ್ಸು ಕಾಣಲು ಬಯಸುವವರು ಆಚಾರ್ಯ ಚಾಣಕ್ಯ (Chanakya) ಹೇಳಿದ ಸೂಚನೆಗಳನ್ನು ಪಾಲಿಸಿದರೆ ಸಾಕು. ಯಶಸ್ಸು ಅವರಿಗೆ ಒಲಿದು ಬರುತ್ತದೆ. ಹಲವು ಶಾಸ್ತ್ರಗಳಲ್ಲಿ ಪ್ರವೀಣರಾಗಿರುವ ಆಚಾರ್ಯ ಚಾಣಕ್ಯರು ಯಶಸ್ಸಿಗೆ ನೀಡಿದ ಸೂಚನೆಗಳೇನು ಎಂಬುದರ ಮಾಹಿತಿ ಇಲ್ಲಿದೆ.

ಪ್ರಾಮಾಣಿಕತೆ: ನೀವು ಮಾಡುವ ಕೆಲಸದಲ್ಲಿ ನೀವು ಪ್ರಾಮಾಣಿಕವಾಗಿಲ್ಲದಿದ್ದರೆ, ನೀವು ಅದರಲ್ಲಿ ಎಂದಿಗೂ ಯಶಸ್ವಿಯಾಗುವುದಿಲ್ಲ. ತಪ್ಪು ದಾರಿಯಲ್ಲಿ ಹಣ ಗಳಿಸುವುದು ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ ನಿಮ್ಮ ಕೆಲಸವನ್ನು ಪೂರ್ಣ ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ಮಾಡುವುದು ಯಾವಾಗಲೂ ಉತ್ತಮ. ಹೀಗೆ ಮಾಡುವುದರಿಂದ ನೀವು ಶಾಶ್ವತವಾದ ಯಶಸ್ಸನ್ನು ಹೊಂದುವಿರಿ.

ಕಷ್ಟವೇ ಭಾಗ್ಯ: ಆಚಾರ್ಯ ಚಾಣಕ್ಯನ ಪ್ರಕಾರ, ಪರಿಶ್ರಮ ಪಡುವವರು ಎಲ್ಲಿ ಬೇಕಾದರೂ ಯಶಸ್ಸು ಸಾಧಿಸಬಹುದು. ಏಕೆಂದರೆ ಸೋಮಾರಿಗಳು ಯಾವಾಗಲೂ ತಮ್ಮ ವೈಫಲ್ಯವನ್ನು ವಿಧಿಯ ಮೇಲೆ ದೂಷಿಸುತ್ತಾರೆ. ಆದರೆ ಶ್ರಮಜೀವಿಗಳು ತಮ್ಮ ಭವಿಷ್ಯವನ್ನು ಬರೆಯುತ್ತಾರೆ. ಅಂತಹವರು ವಿಜೇತರಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಚಾಣಕ್ಯನ ನೀತಿಶಾಸ್ತ್ರ ಹೇಳುತ್ತದೆ.

ಅರ್ಥಪೂರ್ಣ ವಹಿವಾಟುಗಳು: ನಿಮ್ಮ ಬಳಿ ಹಣವಿದ್ದರೆ, ಅದನ್ನು ದೊಡ್ಡ ವಿಷಯಗಳಲ್ಲಿ ಮಾತ್ರ ಬಳಸುವುದು ಉತ್ತಮ. ಏಕೆಂದರೆ ವ್ಯರ್ಥ ಖರ್ಚು ನಿಮ್ಮ ಹಣವನ್ನು ನಾಶಪಡಿಸುವುದಲ್ಲದೆ ಅದನ್ನು ಬೆಳೆಸುವುದಿಲ್ಲ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಬಳಸುವುದು, ಅಂದರೆ ಇತರರಿಗೆ ಸಹಾಯ ಮಾಡುವುದು ಸಹ ನಿಮ್ಮ ಅಭಿವೃದ್ಧಿಗೆ ಸೋಪಾನವಾಗಬಹುದು ಎಂದು ಚಾಣಕ್ಯ ಹೇಳಿದ್ದಾರೆ.

ವಿನಯ: ಮೊದಲು ಎಲ್ಲರೂ ಹೇಳುವುದನ್ನು ಆಲಿಸಿ ಮನಸ್ಸಿನಲ್ಲಿಟ್ಟುಕೊಳ್ಳಬೇಕು. ನಂತರ ವೈಯಕ್ತಿಕ ಅರಿವಿನಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಆಚಾರ್ಯರು ಹೇಳಿದ್ದಾರೆ. ಇತರರ ಮಾತನ್ನು ತಳ್ಳಿಹಾಕಬೇಡಿ, ಅದು ನಾಲ್ವರ ನಡುವೆ ನಮ್ಮ ಮೌಲ್ಯವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಚಾಣಕ್ಯ ಎಚ್ಚರಿಸಿದ್ದಾರೆ.

ಹೆಚ್ಚಿನ ಆಧ್ಯಾತ್ಮಿಕ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ