AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಹಣಕಾಸಿನ ಸಮಸ್ಯೆ ಆಗಬಾರದು ಎಂದಿದ್ದರೆ ಈ 5 ಅಂಶಗಳನ್ನು ಎಂದಿಗೂ ಮರೆಯಬೇಡಿ- ಚಾಣಕ್ಯ ನೀತಿ

ಚಾಣಕ್ಯ ನೀತಿ ತಿಳಿದಿರುವುದರಿಂದ ಕೆಲವು ಸಮಸ್ಯೆಗಳನ್ನಾದರೂ ತಪ್ಪಿಸಿಕೊಳ್ಳಬಹುದು. ನಾವು ಮೋಸ ಹೋಗದಂತೆ, ಸೋತು ಹೋಗದಂತೆ ತಡೆಯಲು ಚಾಣಕ್ಯ ಕೆಲವು ನೀತಿಗಳನ್ನು ತಿಳಿಸಿಕೊಟ್ಟಿದ್ದಾನೆ. ಅದರಂತೆ ನಡೆದುಕೊಂಡರೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.

Chanakya Niti: ಹಣಕಾಸಿನ ಸಮಸ್ಯೆ ಆಗಬಾರದು ಎಂದಿದ್ದರೆ ಈ 5 ಅಂಶಗಳನ್ನು ಎಂದಿಗೂ ಮರೆಯಬೇಡಿ- ಚಾಣಕ್ಯ ನೀತಿ
ಚಾಣಕ್ಯ ನೀತಿ
TV9 Web
| Updated By: ganapathi bhat|

Updated on: Mar 02, 2022 | 6:45 AM

Share

ಹಣವು ವ್ಯಕ್ತಿಯ ಎಲ್ಲಾ ದುಃಖಗಳನ್ನು ತೊಡೆದುಹಾಕುತ್ತದೆ ಎಂದು ಹೇಳಲಾಗುತ್ತದೆ. ಆಚಾರ್ಯ ಚಾಣಕ್ಯ, ತನ್ನ ಚಾಣಕ್ಯ ನೀತಿಯಲ್ಲಿ ಹಣವು ತುಂಬಾ ಉಪಯುಕ್ತವಾಗಿದೆ ಎಂದು ಬಣ್ಣಿಸಿದ್ದಾರೆ. ಹಾಗೆಯೇ ಅದನ್ನು ಕಾಪಾಡಿಕೊಳ್ಳಲು ಕೆಲವು ಮಾರ್ಗಗಳಿವೆ. ನೀವು ಕುಟುಂಬದಲ್ಲಿ ಆರ್ಥಿಕ ಮುಗ್ಗಟ್ಟು ಕಾಣಲು ಬಯಸದಿದ್ದರೆ, ಆಚಾರ್ಯರ ಹಣಕ್ಕೆ ಸಂಬಂಧಿಸಿದ ಈ ನೀತಿಯನ್ನು ನೆನಪಿನಲ್ಲಿ ಇಡಬೇಕು.

ಕಷ್ಟದ ಸಮಯದಲ್ಲಿ ಚಾಣಕ್ಯ ನೀತಿಯು ನಮಗೆ ಸಹಕಾರಿ ಆಗಬಹುದು. ಚಾಣಕ್ಯ ನೀತಿ ಹಲವು ಬಾರಿ ನಮ್ಮ ಜೀವನಕ್ಕೆ ನೀತಿಪಾಠ ಹೇಳಿ, ದಾರಿ ತೋರಬಹುದು. ನೀತಿ ತಿಳಿದಿರುವುದರಿಂದ ಕೆಲವು ಸಮಸ್ಯೆಗಳನ್ನಾದರೂ ತಪ್ಪಿಸಿಕೊಳ್ಳಬಹುದು. ನಾವು ಮೋಸ ಹೋಗದಂತೆ, ಸೋತು ಹೋಗದಂತೆ ತಡೆಯಲು ಚಾಣಕ್ಯ ಕೆಲವು ನೀತಿಗಳನ್ನು ತಿಳಿಸಿಕೊಟ್ಟಿದ್ದಾನೆ. ಅದರಂತೆ ನಡೆದುಕೊಂಡರೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.

  • ಹಣವು ಒಬ್ಬ ವ್ಯಕ್ತಿಗೆ ಗೌರವವನ್ನು ನೀಡುತ್ತದೆ, ಎಲ್ಲಾ ವಿಪತ್ತುಗಳನ್ನು ಎದುರಿಸಲು ಅವನನ್ನು ಶಕ್ತಗೊಳಿಸುತ್ತದೆ. ಆದ್ದರಿಂದ ಹಣವನ್ನು ಅನಗತ್ಯವಾಗಿ ಖರ್ಚು ಮಾಡಬಾರದು ಎಂದು ಆಚಾರ್ಯ ಚಾಣಕ್ಯರು ನಂಬಿದ್ದರು. ಕೆಟ್ಟ ಸಮಯದಲ್ಲಿ ನಿಮಗೆ ಉಪಯುಕ್ತವಾಗುವಂತೆ ಅದನ್ನು ಉಳಿಸಬೇಕು. ಕೆಟ್ಟ ಸಮಯದಲ್ಲಿ ಸಾಕಷ್ಟು ಹಣ ಇದ್ದರೆ, ಆ ಕಷ್ಟದ ಸಮಯ ಬೇಗ ಕಳೆದುಹೋಗುತ್ತದೆ.
  • ಮನೆಯಲ್ಲಿ ಹಣದ ಕೊರತೆ ಇರಬಾರದು ಎಂದು ನೀವು ಬಯಸಿದರೆ, ನಿಮ್ಮ ಆದಾಯವನ್ನು ಎಂದಿಗೂ ತಪ್ಪು ದಾರಿಯಲ್ಲಿ ಮಾಡಬೇಡಿ. ಆದಾಯಕ್ಕಾಗಿ ತಪ್ಪು ಮಾರ್ಗವನ್ನು ಅಳವಡಿಸಿಕೊಂಡು, ಹಣ ಬಂದ ಕೂಡಲೇ ಅದು ದೂರವಾಗಿ, ವ್ಯಕ್ತಿಯು ವಿನಾಶದ ಅಂಚಿಗೆ ತಲುಪುತ್ತಾನೆ. ಆದ್ದರಿಂದ ನೀವು ಯಾವುದೇ ಹಣವನ್ನು ಸಂಪಾದಿಸಿದರೂ ಅದು ಕಠಿಣ ಪರಿಶ್ರಮದ್ದು ಆಗಿರಬೇಕು.
  • ಶುಭ ಕಾರ್ಯಗಳಲ್ಲಿ ಹಣವನ್ನು ಬಳಸಬೇಕು. ಅದಕ್ಕಾಗಿಯೇ ಒಬ್ಬ ವ್ಯಕ್ತಿಯು ಜೀವನದಲ್ಲಿ ದಾನಗಳನ್ನು ಮಾಡಬೇಕು. ಆದಾಗ್ಯೂ, ಯಾವಾಗಲೂ ನಿಮ್ಮ ಮಿತಿಯೊಳಗೆ ದಾನ ಮಾಡಿ. ಅಗತ್ಯಕ್ಕಿಂತ ಹೆಚ್ಚು ದಾನ ಮಾಡಿದರೂ ತೊಂದರೆಯಾಗುತ್ತದೆ.
  • ಸಂಪತ್ತನ್ನು ಹೆಚ್ಚಿಸಲು ಹೂಡಿಕೆ ಅತ್ಯುತ್ತಮ ಮಾರ್ಗವಾಗಿದೆ. ಠೇವಣಿ ಇಡಬಹುದಾದ ಹಣವನ್ನು ಎಲ್ಲೋ ಇಟ್ಟುಕೊಂಡರೆ ಅಥವಾ ನಿಮ್ಮ ಬಳಿ ಇಟ್ಟರೆ ಖಂಡಿತಾ ಒಂದಷ್ಟು ದಿನದಲ್ಲಿ ಅದು ಖರ್ಚಾಗುತ್ತದೆ. ಆದ್ದರಿಂದ, ಅದನ್ನು ಹೆಚ್ಚಿಸಲು, ಆಸ್ತಿ, ಪಾಲಿಸಿ, ಚಿನ್ನ ಇತ್ಯಾದಿಗಳಲ್ಲಿ ಹೂಡಿಕೆ ಮಾಡಿ.
  • ಹಣವನ್ನು ಗಳಿಸುವುದನ್ನು ಎಂದಿಗೂ ನಿಮ್ಮ ಗುರಿಯನ್ನಾಗಿ ಮಾಡಿಕೊಳ್ಳಬೇಡಿ. ಬದಲಿಗೆ ನಿಮ್ಮ ಸ್ವಂತ ಕ್ರಿಯೆಗಳ ಮೇಲೆ ಕೇಂದ್ರೀಕರಿಸಿ. ಅದರಿಂದಾಗಿ ನೀವು ಎಲ್ಲಿ ಬೇಕಾದರೂ ಸಾಕಷ್ಟು ಹಣವನ್ನು ಗಳಿಸುವಷ್ಟು ಸಾಮರ್ಥ್ಯವನ್ನು ಮಾಡಿಕೊಳ್ಳುವಿರಿ.

ಇದನ್ನೂ ಓದಿ: Chanakya Niti: ಜೀವನದಲ್ಲಿ ಮೋಸ ಹೋಗದಿರಲು ಈ 5 ಪಾಠಗಳನ್ನು ನೀವು ತಿಳಿದಿರಬೇಕು- ಚಾಣಕ್ಯ ನೀತಿ

ಇದನ್ನೂ ಓದಿ: Chanakya: ಹೊಸ ವರ್ಷದ ಹೊಸ್ತಿಲಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಆಚಾರ್ಯ ಚಾಣಕ್ಯನ ಈ ಮಾತು ಆಲಿಸಿ, ಅನುಸರಿಸಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?