AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಆರೋಗ್ಯವಾಗಿರಲು ಈ ವಿಷಯಗಳನ್ನು ನೆನಪಿನಲ್ಲಿಡಿ – ಚಾಣಕ್ಯ ನೀತಿ

ಚಾಣಕ್ಯ ನೀತಿ: ಆರೋಗ್ಯವೇ ಭಾಗ್ಯ ಎಂಬಂತೆ ಉತ್ತಮ ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಹಾಗಿರುವಾಗ ನಾವು ಆರೋಗ್ಯವಾಗಿರಲು ಏನು ಸೇವಿಸಬೇಕು ಎಂಬುದರ ಬಗ್ಗೆ ಚಾಣಕ್ಯ ನೀತಿ ಹೇಳುತ್ತದೆ.

Chanakya Niti: ಆರೋಗ್ಯವಾಗಿರಲು ಈ ವಿಷಯಗಳನ್ನು ನೆನಪಿನಲ್ಲಿಡಿ – ಚಾಣಕ್ಯ ನೀತಿ
ಚಾಣಕ್ಯ ನೀತಿ
TV9 Web
| Edited By: |

Updated on: Aug 03, 2021 | 7:41 AM

Share

ಆಚಾರ್ಯ ಚಾಣಕ್ಯರು ಮಹಾನ್ ವಿದ್ವಾಂಸರಾಗಿದ್ದವರು. ತಮ್ಮ ಜೀವನ ಅನುಭವಗಳ ಮೂಲಕ ಜನರಿಗೆ ತಿಳುವಳಿಕೆಯನ್ನು ನೀಡಿದ್ದಾರೆ. ಚಾಣಕ್ಯರು ಶಿಕ್ಷಕರಾಗಿದ್ದವರು. ಅರ್ಥಶಾಸ್ತ್ರವನ್ನು ಮಕ್ಕಳಿಗೆ ಬೋಧನೆ ಮಾಡಿದ್ದಾರೆ. ಪ್ರಸ್ತುತದಲ್ಲಿಯೂ ಸಹಾಯವಾಗುವಂತೆ ಜನರಿಗೆ ಜೀವನದ ಕ್ರಮಗಳ ಬಗ್ಗೆ ನೀತಿ ಪಾಠವನ್ನು ಸಾರಿದ್ದಾರೆ. ಆರೋಗ್ಯವೇ ಭಾಗ್ಯ ಎಂಬಂತೆ ಉತ್ತಮ ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಹಾಗಿರುವಾಗ ನಾವು ಆರೋಗ್ಯವಾಗಿರಲು ಏನು ಸೇವಿಸಬೇಕು ಎಂಬುದರ ಬಗ್ಗೆ ಚಾಣಕ್ಯ ನೀತಿ ಹೇಳುತ್ತದೆ.

ಇಂದಿಗೂ ಜನರು ಚಾಣಕ್ಯರ ನೀತಿ ಪಾಠವನ್ನು ಅನುಸರಿಸುತ್ತಾರೆ. ನಿಯಮಗಳನ್ನು ಪಾಲಿಸುವ ಮೂಲಕ ಜನರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ. ಆರೋಗ್ಯವೂ ಕೂಡಾ ಮನುಷ್ಯನ ಜೀವನದಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ವ್ಯಕ್ತಿಯು ಆರೋಗ್ಯವಾಗಿದ್ದರೆ ಆತನು ಯಾವುದೇ ಅಡಚಣೆಗಳಿಲ್ಲದೇ ತನ್ನ ಸಾಧನೆಯತ್ತ ಸಾಗಲು ಸಾಧ್ಯ. ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಆಚಾರ್ಯ ಚಾಣಕ್ಯರು ಕೆಲವು ವಿಷಯಗಳನ್ನು ತಿಳಿಸಿದ್ದಾರೆ.

ಆಚಾರ ಚಾಣಕ್ಯರ ಪ್ರಕಾರ ತಿಂದ ಆಹಾರವು ಜೀರ್ಣವಾಗದಿದ್ದಾಗ ಕುಡಿಯುವ ನೀರು ಔಷಧಿಯಂತೆ ಕೆಲಸ ವಿರ್ವಹಿಸುತ್ತದೆ. ಆಹಾರ ಸೇವಿಸಿದ 1 ರಿಂದ 2 ಗಂಟೆಯ ನಂತರ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಊಟದ ನಡುವೆ ಸ್ವಲ್ಪ ನೀರು ಕುಡಿಯುವುದು ಅಮೃತದಂತೆ, ಆಹಾರ ಸೇವಿಸಿದ ತಕ್ಷಣವೇ ಹೊಟ್ಟೆ ತುಂಬ ನೀರು ಕುಡಿಯುವುದು ಒಳಿತಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.

ಚಾಣಕ್ಯರ ಪ್ರಕಾರ, ಉತ್ತಮ ಆರೋಗ್ಯಕ್ಕಾಗಿ ಮತ್ತು ರೋಗಗಳಿಂದ ದೂರವಿರಲು ವಾರಕ್ಕೊಮ್ಮೆ ಮಸಾಜ್ ಮಾಡಬೇಕು. ದೇಹದಲ್ಲಿನ ಕೊಳಕು, ಧೂಳಿನಾಂಶಗಳು ನಾಶವಾಗುತ್ತವೆ. ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವುದು ಉತ್ತಮ ಎಂದು ಚಾಣಕ್ಯರು ಹೇಳುತ್ತಾರೆ.

ಇದನ್ನೂ ಓದಿ:

Chanakya Niti: ಈ ರೀತಿಯ ನಡವಳಿಕೆಯ ಜನರ ಬಡತನಕ್ಕೆ ಅವರೇ ಜವಾಬ್ದಾರರು- ಚಾಣಕ್ಯ ನೀತಿ

Chanakya Niti: ಹಣ ನಿರ್ವಹಣೆಯ 5 ವಿಷಯಗಳನ್ನು ತಿಳಿದವರು ಎಂದಿಗೂ ಆರ್ಥಿಕ ಬಿಕ್ಕಟ್ಟು ಎದುರಿಸುವುದಿಲ್ಲ – ಚಾಣಕ್ಯ ನೀತಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ