AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಕಷ್ಟದ ಸಮಯದಲ್ಲಿ ಈ 4 ವಿಷಯಗಳು ನಿಮ್ಮ ಸಹಾಯಕ್ಕೆ ಬಂದೇ ಬರುತ್ತವೆ- ಚಾಣಕ್ಯ ನೀತಿ

ಚಾಣಕ್ಯ ನೀತಿ: ಕಷ್ಟದ ಸಮಯದಲ್ಲಿ ನಮ್ಮ ಸಹಾಯಕ್ಕೆ ಏನು ಬೇಕು? ಚಾಣಕ್ಯ ಹೇಳುವಂತೆ ಈ ಕೆಳಗೆ ಹೇಳಿರುವ ನಾಲ್ಕು ಅಂಶಗಳು ನಮ್ಮ ಕಷ್ಟದ ಕಾಲದಲ್ಲಿ ನಮ್ಮ ಸಹಾಯಕ್ಕೆ ಬಂದೇ ಬರುತ್ತದೆ. ಅದೇನು? ವಿವರ ತಿಳಿದುಕೊಳ್ಳಿ.

Chanakya Niti: ಕಷ್ಟದ ಸಮಯದಲ್ಲಿ ಈ 4 ವಿಷಯಗಳು ನಿಮ್ಮ ಸಹಾಯಕ್ಕೆ ಬಂದೇ ಬರುತ್ತವೆ- ಚಾಣಕ್ಯ ನೀತಿ
ಚಾಣಕ್ಯ ನೀತಿ
Follow us
TV9 Web
| Updated By: ganapathi bhat

Updated on: Mar 09, 2022 | 6:30 AM

ಆಚಾರ್ಯ ಚಾಣಕ್ಯ (Chanakya) ಮನುಷ್ಯರ ಜೀವನಕ್ಕೆ ಸಹಕಾರಿ ಆಗುವಂತಹ, ಬದುಕಿನ ಏಳಿಗೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ಸಲಹೆಗಳನ್ನು (Chanakya Niti) ನೀಡಿದ್ದಾರೆ. ಅಂತಹ ಕೆಲವು ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸುವ ಮೂಲಕ ನಾವು ಜೀವನದಲ್ಲಿ ಗೆಲುವು ಸಾಧಿಸಬಹುದಾಗಿದೆ. ಕಷ್ಟದ ಸಮಯದಲ್ಲಿ ಚಾಣಕ್ಯ ನೀತಿಯು ನಮಗೆ ಸಹಕಾರಿ ಆಗಬಹುದು. ಚಾಣಕ್ಯ ನೀತಿ ಹಲವು ಬಾರಿ ನಮ್ಮ ಜೀವನಕ್ಕೆ ನೀತಿಪಾಠ ಹೇಳಿ, ದಾರಿ ತೋರಬಹುದು. ನೀತಿ ತಿಳಿದಿರುವುದರಿಂದ ಕೆಲವು ಸಮಸ್ಯೆಗಳನ್ನಾದರೂ ತಪ್ಪಿಸಿಕೊಳ್ಳಬಹುದು. ನಾವು ಮೋಸ ಹೋಗದಂತೆ, ಸೋತು ಹೋಗದಂತೆ ತಡೆಯಲು ಚಾಣಕ್ಯ ಕೆಲವು ನೀತಿಗಳನ್ನು ತಿಳಿಸಿಕೊಟ್ಟಿದ್ದಾನೆ. ಅದರಂತೆ ನಡೆದುಕೊಂಡರೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು.

ಕಷ್ಟದ ಸಮಯ ಮನುಷ್ಯರಿಗೆ ಬಂದೇ ಬರುತ್ತದೆ. ಎಂತಹಾ ಸುಖಿ ಎಂದಾದರೂ ಆತನಿಗೆ ಒಂದೆರಡು ಸಮಸ್ಯೆಗಳು ಇದ್ದೇ ಇರುತ್ತವೆ. ಅಥವಾ ಒಂದು ಇದ್ದವನಿಗೆ ಮತ್ತೊಂದು ವಿಷಯದಲ್ಲಿ ಸಮಸ್ಯೆ ಇರುತ್ತದೆ. ಹೀಗೆ ಕಷ್ಟದ ಸಮಯದಲ್ಲಿ ನಮ್ಮ ಸಹಾಯಕ್ಕೆ ಏನು ಬೇಕು? ಚಾಣಕ್ಯ ಹೇಳುವಂತೆ ಈ ಕೆಳಗೆ ಹೇಳಿರುವ ನಾಲ್ಕು ಅಂಶಗಳು ನಮ್ಮ ಕಷ್ಟದ ಕಾಲದಲ್ಲಿ ನಮ್ಮ ಸಹಾಯಕ್ಕೆ ಬಂದೇ ಬರುತ್ತದೆ. ಅದೇನು? ವಿವರ ತಿಳಿದುಕೊಳ್ಳಿ.

ಹಣ- ಕಷ್ಟದ ಸಮಯದಲ್ಲಿ ನೀವು ಹಣವನ್ನು ಹೊಂದಿರುವುದು ಬಹಳ ಮುಖ್ಯ. ನೀವು ಹಣವನ್ನು ಉಳಿಸದಿದ್ದರೆ ಅದು ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಮನೆಯಲ್ಲಿ ಹಣದ ಸಂಗ್ರಹವನ್ನು ಹೊಂದಿರುವುದು ಬಹಳ ಮುಖ್ಯ.

ಆಹಾರದ ಕೊರತೆ ಇರಬಾರದು- ಮನೆಯಲ್ಲಿ ಆಹಾರದ ಕೊರತೆ ಎಂದಿಗೂ ಇರಬಾರದು. ಆಚಾರ್ಯ ಚಾಣಕ್ಯರ ಪ್ರಕಾರ ಮನೆಯಲ್ಲಿ ಯಾವಾಗಲೂ ಆಹಾರ ಇರಬೇಕು. ಇದರಿಂದ ನಿಮ್ಮ ಮನೆಯಲ್ಲಿ ಲಕ್ಷ್ಮಿ ಸದಾ ನೆಲೆಸುತ್ತಾಳೆ. ಇದರೊಂದಿಗೆ ನೀವು ನಿರ್ಗತಿಕರ ಹಸಿವನ್ನು ನೀಗಿಸಬಹುದು.

ಸೇವೆ- ಆಚಾರ್ಯ ಚಾಣಕ್ಯರ ಪ್ರಕಾರ, ಮನುಷ್ಯ ಯಾವಾಗಲೂ ಇತರರಿಗೆ ಸಹಾಯ ಮಾಡಬೇಕು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಕೆಲಸದಿಂದ ದೇವರು ಸಂತೋಷಪಡುತ್ತಾನೆ. ಆಚಾರ್ಯ ಚಾಣಕ್ಯರ ಪ್ರಕಾರ ಸೇವೆಯೇ ಧರ್ಮ. ಇದು ಕಷ್ಟದ ಸಮಯದಲ್ಲಿ ನಿಮ್ಮನ್ನು ರಕ್ಷಿಸುತ್ತದೆ.

ಮನೆಯಲ್ಲಿ ಔಷಧಿ ಇರುವುದು ಮುಖ್ಯ- ಆಚಾರ್ಯ ಚಾಣಕ್ಯರ ಪ್ರಕಾರ, ಅನೇಕ ಬಾರಿ ಹಠಾತ್ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮನೆಯಲ್ಲಿ ದೈಹಿಕ ಸಮಸ್ಯೆಗಳಿಗೆ ಸಂಬಂಧಿಸಿದ ಔಷಧಿಗಳನ್ನು ಯಾವಾಗಲೂ ಹೊಂದಿರುವುದು ಮುಖ್ಯ. ಹಠಾತ್ ಸಮಸ್ಯೆ ಉಂಟಾದರೆ ಮತ್ತು ಮನೆಯಲ್ಲಿ ಯಾವುದೇ ಔಷಧಿ ಇಲ್ಲದಿದ್ದರೆ, ಅದು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು.

ಇದನ್ನೂ ಓದಿ: Chanakya Niti: ಕೆಲಸದ ಸ್ಥಳದಲ್ಲಿ ಗೌರವವನ್ನು ಕಾಪಾಡಿಕೊಳ್ಳಲು ಈ ವಿಷಯಗಳನ್ನು ನೆನಪಿಡಿ- ಚಾಣಕ್ಯ ನೀತಿ

ಇದನ್ನೂ ಓದಿ:  Chanakya Niti: ಹಣಕಾಸಿನ ಸಮಸ್ಯೆ ಆಗಬಾರದು ಎಂದಿದ್ದರೆ ಈ 5 ಅಂಶಗಳನ್ನು ಎಂದಿಗೂ ಮರೆಯಬೇಡಿ- ಚಾಣಕ್ಯ ನೀತಿ

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ