AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಆಚಾರ್ಯ ಚಾಣಕ್ಯರ ಪ್ರಕಾರ, ಈ ಸ್ಥಳಗಳಲ್ಲಿ ಮನೆ ಕಟ್ಟಲೇಬಾರದು!

ಆಚಾರ್ಯ ಚಾಣಕ್ಯರ ನೀತಿಯಲ್ಲಿ ಮನೆ ನಿರ್ಮಾಣದಲ್ಲಿ ಸೂಕ್ತ ಸ್ಥಳದ ಆಯ್ಕೆಯ ಮಹತ್ವದ ಬಗ್ಗೆ ವಿವರಿಸಲಾಗಿದೆ. ಆದಾಯದ ಮೂಲಗಳು, ಕಾನೂನು ಸುವ್ಯವಸ್ಥೆ, ಮತ್ತು ಸಕಾರಾತ್ಮಕ ವಾತಾವರಣವು ಮನೆ ನಿರ್ಮಾಣಕ್ಕೆ ಅತ್ಯಗತ್ಯ. ನಿರ್ಜನ ಅಥವಾ ನಕಾರಾತ್ಮಕ ಶಕ್ತಿಯ ಸಾಧ್ಯತೆಯಿರುವ ಸ್ಥಳಗಳನ್ನು ತಪ್ಪಿಸಬೇಕು. ಸಜ್ಜನರ ಸಮೀಪದಲ್ಲಿ ಮನೆ ನಿರ್ಮಿಸುವುದರಿಂದ ಧನಾತ್ಮಕ ಪರಿಣಾಮಗಳು ಉಂಟಾಗುತ್ತವೆ ಎಂದು ಚಾಣಕ್ಯ ಹೇಳಿದ್ದಾರೆ.

Chanakya Niti: ಆಚಾರ್ಯ ಚಾಣಕ್ಯರ ಪ್ರಕಾರ, ಈ ಸ್ಥಳಗಳಲ್ಲಿ ಮನೆ ಕಟ್ಟಲೇಬಾರದು!
ಆಚಾರ್ಯ ಚಾಣಕ್ಯImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jul 12, 2025 | 12:36 PM

Share

ಆಚಾರ್ಯ ಚಾಣಕ್ಯರ ನೀತಿಯನ್ನು ಅನುಸರಿಸುವುದರಿಂದ, ಒಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾನೆ ಮತ್ತು ಆತನ ಜೀವನದಲ್ಲಿ ಅನೇಕ ರೀತಿಯ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ ಎಂದು ಹೇಳಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದ ವಿಶೇಷ ವಿಷಯಗಳನ್ನು ವಿವರಿಸಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ಕೆಲವು ಸ್ಥಳಗಳಲ್ಲಿ ಮನೆ ನಿರ್ಮಿಸುವ ಮೂಲಕ ಒಬ್ಬ ವ್ಯಕ್ತಿಯು ಜೀವಿತಾವಧಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಯಾವ ಸ್ಥಳಗಳಲ್ಲಿ ಮನೆ ನಿರ್ಮಿಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಚಾಣಕ್ಯ ನೀತಿ ಪ್ರಕಾರ, ಹಣ ಸಂಪಾದಿಸಲು ಯಾವುದೇ ಮಾರ್ಗವಿಲ್ಲದ ಸ್ಥಳದಲ್ಲಿ ವ್ಯಕ್ತಿಯು ಮನೆ ನಿರ್ಮಿಸಬಾರದು. ಏಕೆಂದರೆ ಅಂತಹ ಸ್ಥಳದಲ್ಲಿ ಕನಸಿನ ಅರಮನೆಯನ್ನು ನಿರ್ಮಿಸುವುದು ಜೀವಮಾನದ ಸಮಸ್ಯೆಗಳಿಗೆ ಕಾರಣವಾಗಬಹುದು ಮತ್ತು ಹಣ ಸಂಪಾದಿಸಲು ಮನೆಯಿಂದ ದೂರ ಹೋಗಬೇಕಾಗಬಹುದು. ಅದಕ್ಕಾಗಿಯೇ ಆದಾಯದ ಮೂಲಗಳು ಸುಲಭವಾಗಿ ಲಭ್ಯವಿರುವಂತಹ ಸ್ಥಳದಲ್ಲಿ ಮನೆಯನ್ನು ನಿರ್ಮಿಸಿ.

ಇದಲ್ಲದೆ, ಕಾನೂನು ಸುವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಮನೆ ನಿರ್ಮಿಸುವುದನ್ನು ಸಹ ವ್ಯಕ್ತಿಯು ತಪ್ಪಿಸಬೇಕು. ಆಚಾರ್ಯ ಚಾಣಕ್ಯರ ಪ್ರಕಾರ, ಅಂತಹ ಸ್ಥಳದಲ್ಲಿ ಮನೆ ನಿರ್ಮಿಸುವುದರಿಂದ ಜನರು ಅಸುರಕ್ಷಿತ ಭಾವನೆಯನ್ನು ಹೊಂದಿರುತ್ತಾರೆ. ಈ ಕಾರಣಕ್ಕಾಗಿ, ಮನೆ ನಿರ್ಮಿಸುವ ಮೊದಲು, ಸ್ಥಳವನ್ನು ಸರಿಯಾಗಿ ತನಿಖೆ ಮಾಡಿ.

ಇದನ್ನೂ ಓದಿ: ಸೋಮವಾರ ಶೇವಿಂಗ್ ಮಾಡುವುದು ಒಳ್ಳೆಯದೋ ಕೆಟ್ಟದ್ದೋ?

ಹಲವು ವರ್ಷಗಳಿಂದ ನಿರ್ಜನವಾಗಿರುವ ಸ್ಥಳದಲ್ಲಿ ಮನೆ ಕಟ್ಟಬಾರದು ಎಂದು ಆಚಾರ್ಯ ಚಾಣಕ್ಯ ಹೇಳಿದ್ದಾರೆ. ಅಂತಹ ಸ್ಥಳಗಳಲ್ಲಿ ನಕಾರಾತ್ಮಕ ಶಕ್ತಿ ನೆಲೆಸಿರುವ ಸಾಧ್ಯತೆ ಹೆಚ್ಚು. ಆದ್ದರಿಂದ ಈ ಸ್ಥಳದಲ್ಲಿ ವಾಸಿಸುವುದು ನಿಮ್ಮ ಮತ್ತು ನಿಮ್ಮ ಕುಟುಂಬ ಸದಸ್ಯರ ಮೇಲೆ ನಕರಾತ್ಮಕ ಪರಿಣಾಮ ಬೀರಬಹುದು.

ಕನಸಿನ ಮನೆ ಎಲ್ಲಿರಬೇಕು?

ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಮನೆಯನ್ನು ಒಳ್ಳೆಯ ಆಲೋಚನೆಗಳುಳ್ಳ ಜನರು ವಾಸಿಸುವ ಮತ್ತು ದಾನ ಮಾಡುವ ಸ್ಥಳದಲ್ಲಿ ನಿರ್ಮಿಸಬೇಕೆಂದು ಎಂದು ಸಲಹೆ ನೀಡಿದ್ದಾರೆ. ಏಕೆಂದರೆ ಸಜ್ಜನರ ಸಹವಾಸವು ನಿಮ್ಮ ಮತ್ತು ನಿಮ್ಮ ಮಕ್ಕಳ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಇದು ಜೀವನದಲ್ಲಿ ಅನೇಕ ಪ್ರಯೋಜನಗಳನ್ನು ನೀಡುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ