AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chankya Niti: ಈ ವಿಷಯಗಳನ್ನು ಯಾರಿಗೂ ಹೇಳಬೇಡಿ! ಜೀವನ ಪ್ರಗತಿಗೆ ಅಡ್ಡಿಯಾಗಬಹುದು

ಕೆಲವು ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಆ ವ್ಯಕ್ತಿ ನಿಮಗೆ ಎಷ್ಟೇ ಪ್ರೀತಿಪಾತ್ರರಾಗಿದ್ದರೂ ತೊಂದರೆ ಇಲ್ಲ. ಅದು ನಿಮ್ಮ ಸಂಗತಿಯಾದರೂ ಪರವಾಗಿಲ್ಲ ಅಂತಹ ವಿಷಯಗಳನ್ನು ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ನೀತಿಯನ್ನು ಅನುಸರಿಸಿದಲ್ಲಿ ನೀವು ಸಹ ಜೀವನದಲ್ಲಿ ಪ್ರಗತಿಯ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು, ಜೊತೆಗೆ ಸಂತೋಷದ ಜೀವನವನ್ನು ನಡೆಸಬಹುದು ಎಂದು ಹೇಳಿದ್ದಾರೆ.

Chankya Niti: ಈ ವಿಷಯಗಳನ್ನು ಯಾರಿಗೂ ಹೇಳಬೇಡಿ! ಜೀವನ ಪ್ರಗತಿಗೆ ಅಡ್ಡಿಯಾಗಬಹುದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 15, 2024 | 5:40 PM

Share

ನೀವು ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಲು ಬಯಸಿದರೆ, ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಏಕೆಂದರೆ ಈ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಆ ವ್ಯಕ್ತಿ ನಿಮಗೆ ಎಷ್ಟೇ ಪ್ರೀತಿಪಾತ್ರರಾಗಿದ್ದರೂ ತೊಂದರೆ ಇಲ್ಲ. ಅದು ನಿಮ್ಮ ಸಂಗತಿಯಾದರೂ ಪರವಾಗಿಲ್ಲ ಅಂತಹ ವಿಷಯಗಳನ್ನು ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ನೀತಿಯನ್ನು ಅನುಸರಿಸಿದಲ್ಲಿ ನೀವು ಸಹ ಜೀವನದಲ್ಲಿ ಪ್ರಗತಿಯ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು, ಜೊತೆಗೆ ಸಂತೋಷದ ಜೀವನವನ್ನು ನಡೆಸಬಹುದು ಅಲ್ಲದೆ ಸಮಾಜದಲ್ಲಿ ಗೌರವವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಈ ವಿಷಯಗಳನ್ನು ಯಾರಿಗೂ ಹೇಳಬೇಡಿ

ಚಾಣಕ್ಯರು ಹೇಳುವ ಪ್ರಕಾರ ಪುರುಷರು ಎಂದಿಗೂ ಕುಟುಂಬ ವಿವಾದಗಳನ್ನು ಅಥವಾ ಮನೆಗೆ ಸಂಬಂಧಿಸಿದ ಯಾವುದನ್ನೂ ಹೊರಗಿನವರಿಗೆ ಹೇಳಬಾರದು ಎಂದಿದ್ದಾರೆ. ಮನೆಯ ವಿಷಯಗಳನ್ನು ಇನ್ನೊಬ್ಬ ವ್ಯಕ್ತಿಯೊಂದಿಗೆ ಹಂಚಿಕೊಂಡರೆ, ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳನ್ನು ನೀವು ಅನುಭವಿಸಬೇಕಾಗಬಹುದು.

ಯಾರಿಗೂ ಹಣದ ಬಗ್ಗೆ ಹೇಳಬೇಡಿ

ನೀವು ಗಳಿಸುವ ಹಣವು ನಿಮ್ಮನ್ನು ಯೋಗ್ಯ ಮತ್ತು ಸಮರ್ಥರನ್ನಾಗಿ ಮಾಡುತ್ತದೆ. ಇಂದಿನ ಕಾಲದಲ್ಲಿ, ಹಣವು ಪ್ರತಿಯೊಬ್ಬ ವ್ಯಕ್ತಿಯ ಶಕ್ತಿಯಾಗಿದೆ. ಹಾಗಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಅಥವಾ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಯಾರಿಗೂ ಹೇಳಬೇಡಿ. ಹೀಗೆ ಮಾಡುವುದರಿಂದ, ಸಮಾಜದಲ್ಲಿ ನಿಮ್ಮ ಗೌರವ ಕಡಿಮೆಯಾಗುತ್ತದೆ. ಜೊತೆಗೆ ನೀವು ಚೆನ್ನಾಗಿ ದುಡಿಯುತ್ತಿದ್ದರೆ ಅದನ್ನು ಹಾಳು ಮಾಡುವುದಕ್ಕೆ ಪ್ರಯತ್ನ ಪಡಬಹುದು.

ಇದನ್ನೂ ಓದಿ: ಸೀತಾ ನವಮಿಯ ದಿನ ಈ ರೀತಿ ಜಾನಕಿ ದೇವಿಯನ್ನು ಪೂಜಿಸಿ

ದೇಣಿಗೆಗಳನ್ನು ಯಾವಾಗಲೂ ರಹಸ್ಯವಾಗಿರಿಸಿಕೊಳ್ಳಿ

ನಿಮ್ಮ ಜೀವನದಲ್ಲಿ ನೀವು ಏನೇ ದಾನ ಮಾಡಿದರೂ, ನೀವು ಅದನ್ನು ಯಾವಾಗಲೂ ರಹಸ್ಯವಾಗಿಡಬೇಕು ಅದರ ಬಗ್ಗೆ ಯಾರಿಗೂ ಹೇಳಬಾರದು. ಈ ರೀತಿ ದಾನ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​