AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Shastra: ಒಗೆಯದ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಶಾಸ್ತ್ರ ಹೇಳುವುದೇನು?

ನಾವು ಧರಿಸುವ ಸ್ವಚ್ಛ ಬಟ್ಟೆಗಳು ಕೇವಲ ವ್ಯಕ್ತಿತ್ವವಲ್ಲದೆ ಸಕಾರಾತ್ಮಕ ಶಕ್ತಿಯನ್ನು ತರುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಕೊಳಕು ಉಡುಪುಗಳು ನಕಾರಾತ್ಮಕ ಶಕ್ತಿ, ಆರೋಗ್ಯ ಸಮಸ್ಯೆ ಹಾಗೂ ಧನ ನಷ್ಟಕ್ಕೆ ಕಾರಣ. ಶುಭ ಕಾರ್ಯಗಳಲ್ಲಿ ಸ್ವಚ್ಛತೆ ಅತಿ ಮುಖ್ಯ. ನಿಯಮಿತವಾಗಿ ಬಟ್ಟೆಗಳನ್ನು ತೊಳೆದು, ಒಣಗಿಸುವುದರಿಂದ ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ದೊರೆಯುತ್ತದೆ.

Vasthu Shastra: ಒಗೆಯದ ಬಟ್ಟೆಗಳನ್ನು ಧರಿಸುವ ಅಭ್ಯಾಸ ನಿಮಗಿದ್ಯಾ? ವಾಸ್ತು ಶಾಸ್ತ್ರ ಹೇಳುವುದೇನು?
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on:Aug 19, 2026 | 11:34 AM

Share

ನಾವು ಧರಿಸುವ ಉಡುಪುಗಳು ಕೇವಲ ನಮ್ಮ ವ್ಯಕ್ತಿತ್ವವನ್ನು ಬಿಂಬಿಸುವುದು ಮಾತ್ರವಲ್ಲದೆ, ನಮ್ಮ ಸುತ್ತಲಿನ ನಕಾರಾತ್ಮಕ ಮತ್ತು ಸಕಾರಾತ್ಮಕ ಶಕ್ತಿಗಳ ಮೇಲೆಯೂ ಪ್ರಭಾವ ಬೀರುತ್ತವೆ. ವಾಸ್ತು ಶಾಸ್ತ್ರ ಮತ್ತು ಸಾಂಪ್ರದಾಯಿಕ ನಂಬಿಕೆಗಳ ಪ್ರಕಾರ, ದೇಹದ ಮೇಲೆ ಧರಿಸುವ ಬಟ್ಟೆಗಳ ಶುಚಿತ್ವಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಕೊಳಕು ಅಥವಾ ದೀರ್ಘಕಾಲ ಒಗೆಯದ ಬಟ್ಟೆಗಳನ್ನು ಧರಿಸುವುದರಿಂದ ನಕಾರಾತ್ಮಕ ಶಕ್ತಿ (Negative Energy) ಹೆಚ್ಚಾಗುತ್ತದೆ. ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮನೆಯಲ್ಲಿ ಮತ್ತು ವ್ಯಕ್ತಿಯ ಜೀವನದಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ನಂಬಲಾಗಿದೆ.

ಕೊಳಕು ಬಟ್ಟೆಗಳನ್ನು ಧರಿಸುವುದರಿಂದ ಧನಲಕ್ಷ್ಮಿಯು ಮುನಿಸಿಕೊಳ್ಳುತ್ತಾಳೆ. ಇದರಿಂದ ಮನೆಯಲ್ಲಿ ಐಶ್ವರ್ಯ ಮತ್ತು ಸಮೃದ್ಧಿ ಕಡಿಮೆಯಾಗಿ, ಧನ ನಷ್ಟ ಉಂಟಾಗಬಹುದು. ಒಗೆಯದ ಬಟ್ಟೆಗಳಲ್ಲಿ ಬ್ಯಾಕ್ಟೀರಿಯಾಗಳು ಆಶ್ರಯ ಪಡೆಯುತ್ತವೆ. ಇವು ಚರ್ಮ ರೋಗಗಳು, ನವೆ ಹಾಗೂ ದೈಹಿಕ ದೌರ್ಬಲ್ಯಕ್ಕೆ ಕಾರಣವಾಗಬಹುದು.

ಪೂಜೆ-ಪುರಸ್ಕಾರಗಳಲ್ಲಿ ಸ್ವಚ್ಛ ಬಟ್ಟೆಯ ಪ್ರಾಮುಖ್ಯತೆ:

ವಿಶೇಷವಾಗಿ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಅಥವಾ ಯಾವುದೇ ಶುಭ ಸಮಾರಂಭಗಳಲ್ಲಿ ಸ್ವಚ್ಛವಾದ ಹಾಗೂ ಒಗೆದ ಬಟ್ಟೆಗಳನ್ನು ಧರಿಸುವ ಸಂಪ್ರದಾಯವಿದೆ. ಶುಭ ಕಾರ್ಯಗಳ ಸಮಯದಲ್ಲಿ ನೈರ್ಮಲ್ಯದಿಂದ ಕೂಡಿದ ಬಟ್ಟೆಗಳನ್ನು ಧರಿಸುವುದರಿಂದ ಮನಸ್ಸಿನಲ್ಲಿ ಸಂತೋಷ, ಏಕಾಗ್ರತೆ ಮತ್ತು ಸಕಾರಾತ್ಮಕ ಆಲೋಚನೆಗಳು ಮೂಡುತ್ತವೆ.

ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಅಷ್ಟಲಕ್ಷ್ಮಿ ರಾಜಯೋಗ; ಈ 4 ರಾಶಿಗೆ ಒಲಿಯಲಿದೆ ಅಪಾರ ಧನಸಂಪತ್ತು!

ಬಟ್ಟೆಗಳನ್ನು ಯಾವಾಗ ಮತ್ತು ಹೇಗೆ ಬದಲಾಯಿಸಬೇಕು?

ದಿನನಿತ್ಯ ಬಳಸುವ ಬಟ್ಟೆಗಳನ್ನು ನಿಯಮಿತವಾಗಿ ತೊಳೆದು, ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಧರಿಸುವುದು ಒಳ್ಳೆಯದು. ಬೆವರು ಅಥವಾ ಧೂಳಿನಿಂದ ಕೂಡಿದ ಬಟ್ಟೆಗಳನ್ನು ದೀರ್ಘಕಾಲ ಧರಿಸುವುದರಿಂದ ವಾಸ್ತು ದೋಷ ಮಾತ್ರವಲ್ಲದೆ ನೈರ್ಮಲ್ಯ ಮತ್ತು ಆರೋಗ್ಯದ ದೃಷ್ಟಿಯಿಂದಲೂ ಹಲವು ಸಮಸ್ಯೆಗಳು ಎದುರಾಗಬಹುದು.

ಆದ್ದರಿಂದ ಯಾವಾಗಲೂ ಸ್ವಚ್ಛವಾದ ಮತ್ತು ಒಗೆದ ಬಟ್ಟೆಗಳನ್ನು ಧರಿಸುವುದೇ ಶ್ರೇಯಸ್ಕರ. ಇದು ನಿಮ್ಮ ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ನೀಡುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 19 August 26

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ