AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2021: ಬೆಳಕಿನ ಹಬ್ಬ ದೀಪಾವಳಿಯ ಮಹತ್ವ, ವಿಶೇಷತೆ ಏನು? ಲಕ್ಷ್ಮೀಪೂಜೆ ಹಿಂದೆ ಅಡಗಿದೆ ಸಂಪತ್ತಿನ ರಹಸ್ಯ

ಭಗವಾನ ಶ್ರೀಕೃಷ್ಣನು ಅಸುರಿವೃತ್ತಿಯ ನರಕಾಸುರನನ್ನು ವಧಿಸಿ ಜನರನ್ನು ಭೋಗವಾದ, ಲೋಭ, ಅನಾಚಾರ ಹಾಗೂ ದುಷ್ಟ ಪ್ರವೃತ್ತಿಯಿಂದ ಮುಕ್ತಗೊಳಿಸಿದನು ಮತ್ತು ಪ್ರಭು ವಿಚಾರ (ದೈವೀ ವಿಚಾರ) ವನ್ನು ನೀಡಿ ಸುಖವನ್ನು ನೀಡಿದನು. ಇದುವೇ ದೀಪಾವಳಿಯಾಗಿದೆ.

Deepavali 2021: ಬೆಳಕಿನ ಹಬ್ಬ ದೀಪಾವಳಿಯ ಮಹತ್ವ, ವಿಶೇಷತೆ ಏನು? ಲಕ್ಷ್ಮೀಪೂಜೆ ಹಿಂದೆ ಅಡಗಿದೆ ಸಂಪತ್ತಿನ ರಹಸ್ಯ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Nov 04, 2021 | 12:18 PM

Share

ಹದಿನಾಲ್ಕು ವರ್ಷಗಳ ವನವಾಸವನ್ನು ಮುಗಿಸಿ ಪ್ರಭು ಶ್ರೀರಾಮಚಂದ್ರನು ಅಯೋಧ್ಯೆಗೆ ಹಿಂದಿರುಗಿದಾಗ ಪ್ರಜೆಗಳು ಬಂಗಾರದ ಕಲಶವನ್ನು ಮಣಿ-ರತ್ನಗಳಿಂದ ಅಲಂಕರಿಸಿ ಮನೆಯೆದುರು ಹೊಸ್ತಿಲಿನ ಮೇಲಿಟ್ಟರು, ಊರಿನ ಬೀದಿಗಳನ್ನು ಸುಗಂಧಿತದ್ರವ್ಯಗಳಿಂದ ಯುಕ್ತವನ್ನಾಗಿಸಿ ದೀಪೋತ್ಸವವನ್ನು ಆಚರಿಸಿದರು. ಅಂದಿನಿಂದ ದೀಪಾವಳಿ ಉತ್ಸವವನ್ನು ಆಚರಿಸಲಾಗುತ್ತದೆ.

ದೀಪಾವಳಿ ಶಬ್ದದ ಅರ್ಥ ದೀಪಾವಳಿ ಎನ್ನುವ ಶಬ್ದವು ದೀಪ ಮತ್ತು ಆವಳಿ ಹೀಗೆ ರೂಪುಗೊಂಡಿದೆ. ಇದರ ಅರ್ಥ ದೀಪಗಳ ಸಾಲು ಎಂದಾಗಿದೆ. ದೀಪಾವಳಿಯಂದು ಎಲ್ಲೆಡೆಯೂ ದೀಪಗಳನ್ನು ಹಚ್ಚುತ್ತಾರೆ. ಆಶ್ವಯುಜ ಕೃಷ್ಣ ತ್ರಯೋದಶಿ (ಧನತ್ರಯೋದಶಿ), ಆಶ್ವಯುಜ ಕೃಷ್ಣ ಚತುರ್ದಶಿ (ನರಕಚತುರ್ದಶಿ), ಅಮಾವಾಸ್ಯೆ (ಲಕ್ಷಿ ್ಮಪೂಜೆ) ಮತ್ತು ಆಶ್ವಯುಜ ಶುಕ್ಲ ಪಾಡ್ಯ (ಬಲಿಪಾಡ್ಯ) ಈ ನಾಲ್ಕು ದಿನಗಳ ಕಾಲ ದೀಪಾವಳಿಯನ್ನು ಆಚರಿಸಲಾಗುತ್ತದೆ. ಕೆಲವರು ತ್ರಯೋದಶಿಯನ್ನು ದೀಪಾವಳಿಯಲ್ಲಿ ಸೇರಿಸದೇ ಉಳಿದ 3 ದಿನಗಳನ್ನು ದೀಪಾವಳಿಯೆಂದು ಆಚರಿಸುತ್ತಾರೆ. ಗೋವತ್ಸದ್ವಾದಶಿ ಮತ್ತು ಸಹೋದರ ಬಿದಿಗೆಯು ದೀಪಾವಳಿಯ ಸಮಯದಲ್ಲಿಯೇ ಬರುತ್ತದೆ. ಆದುದರಿಂದ ಇದನ್ನು ದೀಪಾವಳಿಯೆಂದೇ ಪರಿಗಣಿಸಲಾಗುತ್ತದೆ. ಆದರೆ ವಾಸ್ತವದಲ್ಲಿ ಈ ಉತ್ಸವಗಳು ವಿಭಿನ್ನವಾಗಿವೆ.

ಭಗವಾನ ಶ್ರೀಕೃಷ್ಣನು ಅಸುರಿವೃತ್ತಿಯ ನರಕಾಸುರನನ್ನು ವಧಿಸಿ ಜನರನ್ನು ಭೋಗವಾದ, ಲೋಭ, ಅನಾಚಾರ ಹಾಗೂ ದುಷ್ಟ ಪ್ರವೃತ್ತಿಯಿಂದ ಮುಕ್ತಗೊಳಿಸಿದನು ಮತ್ತು ಪ್ರಭು ವಿಚಾರ (ದೈವೀ ವಿಚಾರ) ವನ್ನು ನೀಡಿ ಸುಖವನ್ನು ನೀಡಿದನು. ಇದುವೇ ದೀಪಾವಳಿಯಾಗಿದೆ.

ಗೋಪೂಜೆ ಹೇಗೆ? ಭಾರತೀಯ ಸಂಸ್ಕೃತಿಯಲ್ಲಿ ಆಕಳಿಗೆ ತುಂಬಾ ಮಹತ್ವವಿದೆ. ಅವಳನ್ನು ಮಾತೆಯೆಂದು ಸಹ ಸಂಬೋಧಿಸಲಾಗುತ್ತದೆ. ಅವಳು ಸಾತ್ತ್ವಿಕಳಾಗಿರುವುದರಿಂದ ಅವಳ ಪೂಜೆಯನ್ನು ಮಾಡಿ ಎಲ್ಲರೂ ಅವಳ ಸಾತ್ತ್ವಿಕ ಗುಣಗಳನ್ನು ಸ್ವೀಕರಿಸುವುದಿರುತ್ತದೆ. ತನ್ನ ಸಹವಾಸದಿಂದ ಇತರರನ್ನು ಪಾವನಗೊಳಿಸುವ, ತನ್ನ ಹಾಲಿನಿಂದ ಸಮಾಜವನ್ನು ಬಲಿಷ್ಠಗೊಳಿಸುವ, ಕೃಷಿಗಾಗಿ ತನ್ನ ಸಗಣಿಯಿಂದ ಗೊಬ್ಬರವನ್ನು ನೀಡುವ, ಕೃಷಿಗೆ ಉಪಯುಕ್ತವಾದ ಎತ್ತುಗಳಿಗೆ ಜನ್ಮ ನೀಡುವ, ಶ್ರೀಕೃಷ್ಣನಿಗೆ ಪ್ರಿಯವಾಗಿರುವ ಹಾಗೂ ಎಲ್ಲ ದೇವತೆಗಳು ತನ್ನಲ್ಲಿ ವಾಸಿಸುವಂತಹ ಯೋಗ್ಯತೆಯಿರುವ ಗೋಮಾತೆಯನ್ನು ಈ ದಿನದಂದು ಪೂಜೆ ಮಾಡಬೇಕು. ಎಲ್ಲಿ ಗೋಮಾತೆಯ ಸಂರಕ್ಷಣೆ ಮತ್ತು ಸಂವರ್ಧನೆಯಾಗುತ್ತದೆಯೋ ಹಾಗೂ ಪೂಜ್ಯಭಾವದಿಂದ ಅವಳನ್ನು ಪೂಜಿಸಲಾಗುತ್ತದೆಯೋ, ಅಲ್ಲಿನ ವ್ಯಕ್ತಿಗಳು, ಆ ಸಮಾಜ ಮತ್ತು ಆ ರಾಷ್ಟ್ತ್ರದ ಸಮೃದ್ದಿಯು ನಿಶ್ಚಿತವಾಗಿ ಆಗುತ್ತದೆ. ಇಂತಹ ಗೋಮಾತೆಯನ್ನು ಅವಳ ಕರುಗಳ ಸಹಿತ ಪೂಜೆಮಾಡಿ ದೀಪೋತ್ಸವವನ್ನು (ದೀಪಾವಳಿಯನ್ನು) ಆರಂಭಿಸಬೇಕು.

ಬಂಗಾರ ಖರೀದಿ ಧನತ್ರಯೋದಶಿಯಂದು ಹೊಸ ಬಂಗಾರವನ್ನು ಖರೀದಿಸುವ ರೂಢಿಯು ಪುರಾತನ ಕಾಲದಿಂದ ನಡೆದು ಬಂದಿದೆ. ಧನತ್ರಯೋದಶಿಯಂದು ಹೊಸ ಬಂಗಾರವನ್ನು ಖರೀದಿ ಮಾಡುವುದರಿಂದ ಮನೆಯಲ್ಲಿ ವರ್ಷವೀಡೀ ಧನಲಕ್ಷ್ಮಿಯು ವಾಸಿಸುತ್ತಾಳೆ ಎಂಬ ನಂಬಿಕೆ ಇದೆ. ಲಕ್ಷ್ಮಿ ಪೂಜೆಯ ಸಮಯದಲ್ಲಿ ನಮಗೆ ಸಂಪೂರ್ಣ ವರ್ಷದ ಜಮಾ-ಖರ್ಚಿನ ಲೆಕ್ಕವನ್ನು ನೋಡುವುದಿರುತ್ತದೆ. ಧನತ್ರಯೋದಶಿಯ ವರೆಗೆ ಲೆಕ್ಕಾಚಾರವನ್ನು ನೋಡಿ ಉಳಿದಿರುವ ಸಂಪತ್ತನ್ನು ಭಗವಂತನ ಕಾರ್ಯಕ್ಕಾಗಿ ಉಪಯೋಗಿಸಿದರೆ, ಸತ್ಕಾರ್ಯಕ್ಕಾಗಿ ಹಣವು ಖರ್ಚಾಗುವುದರಿಂದಾಗಿ ಧನ ಲಕ್ಷ್ಮಿಯು ಕೊನೆಯತನಕ ಲಕ್ಷ್ಮಿಯ ರೂಪದಲ್ಲಿ ಮನೆಯಲ್ಲಿ ವಾಸಿಸುತ್ತಾಳೆ.

ಧನವೆಂದರೆ ಹಣ ವರ್ಷವಿಡೀ ಕಷ್ಟಪಟ್ಟು ಬೆವರು ಸುರಿಸಿ ಒಟ್ಟು ಗೂಡಿಸಿದ, ಹಣದಲ್ಲಿನ 6-ನೇ (ಶೇ.1/6) ಪಾಲನ್ನು ಭಗವಂತನ ಕಾರ್ಯಕ್ಕಾಗಿ ಖರ್ಚು ಮಾಡಬೇಕೆಂದು ಧರ್ಮಶಾಸ್ತ್ತ್ರವು ಹೇಳುತ್ತದೆ. ಹಿಂದಿನ ಕಾಲದಲ್ಲಿ ರಾಜ-ಮಹಾರಾಜರು ವರ್ಷದ ಕೊನೆಯಲ್ಲಿ ತಮ್ಮ ಸಂಪೂರ್ಣ ಖಜಾನೆಯನ್ನು ಸತ್ಪಾತ್ರರಿಗೆ ದಾನ ಮಾಡಿ ಖಾಲಿ ಮಾಡುತ್ತಿದ್ದರು. ಆಗ ಅವರಿಗೆ ನಾವು ಧನ್ಯರಾದೆವೆಂದು ಅನಿಸುತ್ತಿತ್ತು. ಇದರಿಂದಾಗಿ ಜನತೆ ಹಾಗೂ ರಾಜನ ನಡುವಿನ ಸಂಬಂಧವು ಕೌಟುಂಬಿಕ ಸ್ವರೂಪದ್ದಾಗಿತ್ತು. ರಾಜನ ಖಜಾನೆಯು ಜನತೆಯದ್ದಾಗಿದ್ದು ರಾಜನು ಕೇವಲ ಆ ಖಜಾನೆಯ ಸಂರಕ್ಷಕ ನಾಗಿರುತ್ತಿದ್ದನು. ಇದರಿಂದ ಜನರು ಸಹ ಯಾವುದೇ ಪ್ರತಿಬಂಧವಿಲ್ಲದೇ ತೆರಿಗೆಯನ್ನು ನೀಡುತ್ತಿದ್ದರು. ಸಹಜವಾಗಿಯೇ ಖಜಾನೆಯು ಪುನಃ ತುಂಬುತ್ತಿತ್ತು. ಧನವನ್ನು ಸತ್ಕಾರ್ಯಕ್ಕಾಗಿ ವಿನಿಯೋಗಿಸುವುದರಿಂದ ಆತ್ಮಬಲವು ಹೆಚ್ಚಾಗುತ್ತದೆ. ಹಣವೆಂದರೆ ಕೇವಲ ಧನವಾಗಿಲ್ಲ ಪಂಚಮಹಾಭೂತಗಳೇ ನಿಜವಾದ ಧನಗಳಾಗಿವೆ. ಯಾವುದರಿಂದ ನಮ್ಮ ಜೀವನದ ಪೋಷಣೆಯು ಸುವ್ಯವಸ್ಥಿತವಾಗಿ ನಡೆಯುತ್ತದೆಯೋ ಅಂತಹ ಧನವನ್ನು ಪೂಜಿಸುತ್ತಾರೆ. ಇಲ್ಲಿ ಧನಳಿ ಎಂದರೆ ಶುದ್ಧಲಕ್ಷ್ಮಿ.

ಶ್ರೀಸೂಕ್ತದಲ್ಲಿ ಭೂಮಿ, ಜಲ, ವಾಯು, ಅಗ್ನಿ, ಸೂರ್ಯ ಇವುಗಳನ್ನು ಧನವೆಂದೇ ಕರೆಯಲಾಗಿದೆ. ಯಾವ ಧನಕ್ಕೆ ನಿಜವಾದ ಅರ್ಥವಿದೆಯೋ ಅದುವೇ ನಿಜವಾದ ಲಕ್ಷ್ಮಿ.

ನರಕಾಸುರನ ವಧಿಸಿದ ದಿನವೇ ನರಕಚತುರ್ದಶಿ ಶ್ರೀಕೃಷ್ಣನು ಈ ದಿನದಂದು ನರಕಾಸುರನನ್ನು ವಧಿಸಿದನು. ಆದುದರಿಂದ ಈ ದಿನವನ್ನು ನರಕಚತುರ್ದಶಿ ಎಂದು ಕರೆಯುತ್ತಾರೆ. ಇದರ ಅರ್ಥವು ದುರ್ಜನ ಶಕ್ತಿಯ ಮೇಲೆ ಸಜ್ಜನ ಶಕ್ತಿಯ ವಿಜಯಳಿ ಎಂದಾಗುತ್ತದೆ. ಯಾವಾಗ ಸಜ್ಜನಶಕ್ತಿಯು ಜಾಗೃತಗೊಂಡು ಸಂಘಟಿತವಾಗಿ ಕಾರ್ಯ ಮಾಡುತ್ತದೆಯೋ ಆಗ ದುರ್ಜನ ಶಕ್ತಿಯ ಪ್ರಭಾವವು ಕಡಿಮೆಯಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ತನ್ನಲ್ಲಿಯ ಅಸುರೀ ಪ್ರವೃತ್ತಿ ಹಾಗೂ ವಿಧ್ವಂಸಕ ಪ್ರವೃತ್ತಿಯನ್ನು ಕಡಿಮೆ ಮಾಡಿ ದೈವೀಪ್ರವೃತ್ತಿಯನ್ನು ಸ್ಥಾಪಿಸಬೇಕು. ಇದರಿಂದ ಮುಂದೆ ಸಮಾಜ ಹಾಗೂ ರಾಷ್ಟ್ತ್ರದ ಮೇಲೆ ಪರಿಣಾಮವಾಗುತ್ತದೆ. ಸಜ್ಜನವ್ಯಕ್ತಿಗಳು ಸಂಘಟಿತರಾಗಿ ತಮ್ಮ ಜ್ಞಾನದ ಲಾಭವನ್ನು ಸಮಾಜಕ್ಕೆ ನೀಡಬೇಕು. ಈ ವಿಷಯವೇ ನರಕ ಚರ್ತುದಶಿಯಿಂದ ಕಂಡುಬರುತ್ತದೆ.

ನರಕಚತುರ್ದಶಿ ಎಂದರೆ ನರಕರೂಪೀ ವಾಸನೆಗಳನ್ನು ಹಾಗೂ ಅಹಂಕಾರದ ಉಚ್ಚಾಟನೆಯನ್ನು ಮಾಡಿ ಆತ್ಮಜ್ಯೌತಿಯನ್ನು ಪ್ರಕಾಶಿಸುವ ದಿನವೂ ಆಗಿದೆ. ನರಕ ಚತುರ್ದಶಿಯಂದು ಮಧ್ಯರಾತ್ರಿ ಅಳಾಸ್ಯಲಕ್ಷ್ಮಿಯನ್ನು ತೊಲಗಿಸಿ ನಮ್ಮಲ್ಲಿರುವ ನರಕರೂಪೀ ಪಾಪವಾಸನೆಗಳ ನಾಶ ಹಾಗೂ ಅಹಂಕಾರದ ಉಚ್ಚಾಟನೆ ಮಾಡುವುದಿರುತ್ತದೆ. ಆಗಲೇ ಆತ್ಮದ ಮೇಲಿನ ಅಹಂಭಾವದ ಪರದೆಯು ದೂರವಾಗಿ ಆತ್ಮಜ್ಯೌತಿಯು ಪ್ರಕಾಶಮಾನಾಗಿ ಬೆಳಗುತ್ತದೆ.

ಲಕ್ಷ್ಮಿ ಪೂಜೆ ವಿಶೇಷತೆ ಕಾರಹುಣ್ಣಿಮೆ ಮತ್ತು ಆಶ್ವಯುಜ ಅಮಾವಾಸ್ಯೆಯಂದು ಲಕ್ಷ್ಮಿಯ ಪೂಜೆಯನ್ನು ಮಾಡುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆ ಇವೆರಡೂ ಶುಭವೇ ಆಗಿವೆ ಎಂಬುದು ಇದರ ಹಿಂದಿನ ರಹಸ್ಯವಾಗಿದೆ. ಹಿರಣ್ಯಮಯಿ, ತೇಜಸ್ವಿ, ಜೀವನಪೋಷಕ ಹಾಗೂ ಚೈತನ್ಯಮಯಿಯಾದಂತಹ ಲಕ್ಷ್ಮಿಯನ್ನು ವಾದ್ಯಘೋಷಗಳ ಸಹಿತ ಪ್ರವೇಶದ್ವಾರದಿಂದ ಮನೆಯೊಳಗೆ ಕರೆತಂದು ಅವಳ ವಾಸ್ತವ್ಯಕ್ಕೆ ಸ್ಥಾನ ನೀಡಿ ಪೂಜೆ ಮಾಡುವುದೆಂದರೆ ಲಕ್ಷ್ಮಿ ಪೂಜೆ.

ಅಮಾವಾಸ್ಯೆ ಶ್ರೇಷ್ಠತೆ ಅಮಾವಾಸ್ಯೆಯು ಏಕತ್ವವನ್ನು ತೋರಿಸುತ್ತದೆ. ಈ ಅಮಾವಾಸ್ಯೆಯ ದಿನದಂದು ದೀಪಗಳ ಹೊಳಪು ಎಲ್ಲೆಡೆಯೂ ಶೋಭಿಸುತ್ತಿರುತ್ತದೆ. ಆದುದರಿಂದಲೇ ಈ ಅಮಾವಾಸ್ಯೆಯು ಪವಿತ್ರವಾಗಿದೆ. ಶರದಋುತುವಿನಲ್ಲಿ ಆಶ್ವಯುಜ ಮಾಸದ ಹುಣ್ಣಿಮೆ ಮತ್ತು ಈ ಅಮಾವಾಸ್ಯೆಯು ಕಲ್ಯಾಣಕಾರಿಯಾಗಿವೆ. ಅಲ್ಲದೆ ಅವು ಎಲ್ಲ ಸಮೃದ್ದಿಗಳನ್ನು ತರುವಂತಹವುಗಳಾಗಿವೆ. ಈ ಸಮಯದಲ್ಲಿ ರೈತರು ಬೆಳೆದ ದವಸಧಾನ್ಯ ಗಳು ಮನೆಗೆ ಬಂದಿರುತ್ತವೆ. ಮನೆಯಲ್ಲಿ ಆನಂದವಿರುತ್ತದೆ. ತಾವು ಪರಿಶ್ರಮ ಪಟ್ಟ ಫಲವು ಭಗವಂತನ ಕೃಪೆಯಿಂದ ಅವರಿಗೆ ದೊರಕಿರುತ್ತದೆ. ಕೃಷಿಯಿಂದ ಉತ್ಪನ್ನವಾದ ಬೆಳೆಯೇ ನಿಜವಾದ ಲಕ್ಷ್ಮಿಯಾಗಿದೆ. ಬೆಳೆಯು ಪ್ರತ್ಯಕ್ಷ ಜೀವನದಲ್ಲಿ ಉಪಯೋಗಿಯಾಗಿರುತ್ತದೆ. ಆದುದರಿಂದಲೇ ಅನ್ನವೇ ಬ್ರಹ್ಮಳಿ ಎಂದು ಹೇಳಲಾಗಿದೆ.

ದೀಪಾವಳಿ ಸಮಾಪ್ತಿ: ಕೊನೆಯಲ್ಲಿ ಮನಸ್ಸಿನಲ್ಲಿರುವ ಮಾಲಿನ್ಯ ದೂರವಾಗಿ ಚಿತ್ತ ಶುದ್ದಿಯಾಯಿತೆಂದರೆ ಕೆಲವು ಕಡೆ ಪಂಚಮಿಯಂದು ಈ ದೀಪಾವಳಿಯನ್ನು ಸಮಾಪ್ತಿ ಮಾಡಲು ಪಂಚಮಿ ಪೂಜೆಯನ್ನು ಆಚರಿಸುತ್ತಾರೆ.

Dina Bhavishya

ಆಧ್ಯಾತ್ಮಿಕ ಲೇಖನ: ವೈದಿಕ ಜ್ಯೋತಿಷಿ, ವಾಸ್ತುಶಾಸ್ತ್ರಜ್ಞ, ಡಾ.ಬಸವರಾಜ್ ಗುರೂಜಿ. (9972848937)

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..