AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಮ್ಮದಿಯ ಬದುಕು ನಿಮ್ಮದಾಗಬೇಕಾ? ದಿನನಿತ್ಯ ನಿಮ್ಮ ನಡೆನುಡಿ, ಆಚಾರ ವಿಚಾರ ಹೀಗಿರಲಿ! ಏನದು, ತಿಳಿಯೋಣ

ಮಂಗಳವಾರ, ಶುಕ್ರವಾರದಂದು ಯಾರನ್ನು ಸಹ ಅವಾಚ್ಯ ಶಬ್ದಗಳಿಂದ ಬಯ್ಯಬೇಡಿ, ಬೇರೆಯ ದಿನಗಳಲ್ಲಿ ಬಯ್ಯಬಹುದು ಎಂದಲ್ಲ! ವಿಶೇಷವಾಗಿ ಆ ದಿನಗಳಷ್ಟೇ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳಲ್ಲಿ ಅವಾಚ್ಯ ಶಬ್ದಗಳಿಂದ ಬಯ್ಯಲೇಬಾರದು ಮತ್ತು ಅವರ ಮನಸ್ಸನ್ನು ಸಹ ನೋಯಿಸಬಾರದು.

ನೆಮ್ಮದಿಯ ಬದುಕು ನಿಮ್ಮದಾಗಬೇಕಾ? ದಿನನಿತ್ಯ ನಿಮ್ಮ ನಡೆನುಡಿ, ಆಚಾರ ವಿಚಾರ ಹೀಗಿರಲಿ! ಏನದು, ತಿಳಿಯೋಣ
ನೆಮ್ಮದಿಯ ಬದುಕು ನಿಮ್ಮದಾಗಬೇಕೇ? ದಿನನಿತ್ಯ ನಿಮ್ಮ ನಡೆನುಡಿ, ಆಚಾರ ವಿಚಾರ ಹೀಗಿರಲಿ: ಏನದು, ತಿಳಿಯೋಣ
TV9 Web
| Updated By: ಸಾಧು ಶ್ರೀನಾಥ್​|

Updated on: Jan 20, 2022 | 5:23 AM

Share

ಅನಾದಿ ಕಾಲದಿಂದಲೂ ನಮ್ಮ ಹಿರಿಯರು ಕೆಲವು ಸಂಪ್ರದಾಯ, ವಾಡಿಕೆಗಳನ್ನ ರೂಢಿಸಿಕೊಂಡು ಬಂದಿದ್ದಾರೆ. ಅವು ದಿನನಿತ್ಯ ನಮ್ಮ ಜೀವನದಲ್ಲಿ ಹಾಸುಹೊಕ್ಕಿರುವಂತಹುವಾಗಿದೆ (spiritual). ಅಂದರೆ ಸೂರ್ಯೋದಯಕ್ಕೆ ಮುಂಚಿತವಾಗಿಯೇ ಹಾಸಿಗೆಯಿಂದ ಏಳುವ ಅಭ್ಯಾಸ ರೂಢಿಸಿಕೊಳ್ಳಬೇಕು. ಮುಸ್ಸಂಜೆ ವೇಳೆ ಅಥವಾ ಸೂರ್ಯೋದಯದ ಸಮಯದಲ್ಲಿ ಮಲಗಬಾರದು (bad omen). ಹೊರಗೆ ಹೋಗಿ ಬಂದಾಗ ಕೈ ಕಾಲು ತೊಳೆದು, ಒರೆಸಿಕೊಂಡು ಮನೆಯೊಳಕ್ಕೆ ಪ್ರವೇಶಿಸಬೇಕು. ಗುರುಹಿರಿಯರಿಗೆ ಗೌರವಾದರಗಳನ್ನು ನೀಡಬೇಕು. ಕರ್ಮ ಅಂದರೆ ಬೇರೇನೂ ಅಲ್ಲ. ನಾವು ಮಾಡಿದ ತಪ್ಪು- ಸರಿಗಳನ್ನು ಅನುಭವಿಸುವುದು. ಸರಿ ಹಾಗಾದರೆ ದಿನನಿತ್ಯ ನಮ್ಮ ನಡೆನುಡಿ, ಆಚಾರ ವಿಚಾರ ಹೇಗಿದ್ದರೆ ಚೆಂದ? ತಿಳಿಯೋಣ ಬನ್ನೀ

1) ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನು ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.

2) ಮನೆಯ ಮುಖ್ಯ ದ್ವಾರದ ಬಾಗಿಲಿನ ಹೊಸ್ತಿಲ ಮೇಲೆ ನಿಲ್ಲಬೇಡಿ. ಬೇರೆಯವರೂ ಸಹ ಹಾಗೆ ಹೊಸ್ತಿಲ ಮೇಲೆ ನಿಲ್ಲದಂತೆ ನೋಡಿಕೊಳ್ಳಿ. ಬೇರೆ ಹೊಸ್ತಿಲ ಮೇಲೆಯೂ ಸಹ ನಿಲ್ಲಕೂಡದು.

3) ಸಂಜೆ ದೀಪ ಹೊತ್ತಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ. ರಾತ್ರಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ ಹಾಕಬೇಡಿ. ಒಂದು ಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ ಸೂರ್ಯೋದಯದ ನಂತರ ಹೊರಗೆ ಹಾಕಿ.

4) ಪರಕೆಯ ತುದಿಯ ಭಾಗವನ್ನು (ಕಸ ಗುಡಿಸುವ ಭಾಗ) ಮೇಲೆ ಮಾಡಿ ನಿಲ್ಲಿಸಬೇಡಿ. ಅದು ಸ್ಮಶಾನದ ಮನೆಯ ಸೂಚಕವಾಗಿದೆ. ಆದ್ದರಿಂದ ಹಾಗೆ ಇಡುವುದು ಸತ್ತವರ ಮನೆಯಲ್ಲಿ ಮಾತ್ರ.

5) ಮೊರ, ಪರಕೆಗಳನ್ನು ಕಾಲುಗಳಿಂದ ಒದೆಯಬೇಡಿ ಅಥವಾ ತುಳಿಯಬೇಡಿ. ಹಾಗೇನಾದರೂ ನಿಮ್ಮ ಕಾಲು ಅಕಸ್ಮಾತ್ತಾಗಿ ತಗುಲಿದರೆ ಪರಕೆಗೆ ನಮಸ್ನಾರ ಮಾಡಿ. ಯಾವ ಪದಾರ್ಥವನ್ನೂ ತುಳಿಯಬಾರದು.

6) ಚಪ್ಪಲಿಗಳನ್ನು ಮನೆಯ ಹೊಸ್ತಿಲು ಮತ್ತು ಮುಖ್ಯ ದ್ವಾರದ ಎದುರಿಗೆ ಅಥವಾ ಅದರ ಬಳಿ ಬಿಡಬೇಡಿ. ಪಕ್ಕದಲ್ಲಿ ಸ್ವಲ್ಪ ದೂರದಲ್ಲಿಯೇ ಬಿಟ್ಟರೆ ಒಳ್ಳೆಯದು. ರಂಗೋಲಿ ಹಾಕದೆ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಒಳ್ಳೆಯದಲ್ಲ. ಯಾವುದಾದರೂ ಒಂದು ಪುಟ್ಟ ರಂಗೋಲಿಯನ್ನಾದರೂ ಹಾಕಿಬಿಡಿ.

7) ಮನೆಯ ಗೋಡೆಯ ಮೇಲೆ, ದೇವರ ಮನೆ ಮುಂತಾದ ಸ್ಥಳಗಳಲ್ಲಿ  ಶಾಯಿ ಅಥವಾ ಕರಿ ಬಣ್ಣ ಇತ್ಯಾದಿಗಳಿಂದ ವಿಕಾರ ಆಕೃತಿಗಳನ್ನು ಬರೆಯಬೇಡಿ.

8) ನಡೆಯುವಾಗ ನಿಮ್ಮ ಪಾದವನ್ನು ನೆಲಕ್ಕೆ ಸವರಿಕೊಂಡು, ಎಳೆದುಕೊಂಡು ಓಡಾಡಬೇಡಿ. ಕಾಲಿನ ಪಾದವನ್ನು ಎತ್ತಿ ಇಟ್ಟು ನಡೆಯಬೇಕು. ಸಾಧ್ಯವಾದಷ್ಟು ಶಬ್ದ ಕಡಿಮೆ ಇರಲಿ. ಹೆಣ್ಣುಮಕ್ಕಳು ಕಾಲಿಗೆ ಕಾಲ್ಗೆಜ್ಜೆಯನ್ನು ಧರಿಸುವುದು ಒಳ್ಳೆಯದು. ಗೆಜ್ಜೆಯ ಶಬ್ದ ಲಕ್ಷ್ಮಿಯ ಸಂಕೇತ.

9) ಮಂಗಳವಾರ, ಶುಕ್ರವಾರದಂದು ಯಾರನ್ನು ಸಹ ಅವಾಚ್ಯ ಶಬ್ದಗಳಿಂದ ಬಯ್ಯಬೇಡಿ, ಬೇರೆಯ ದಿನಗಳಲ್ಲಿ ಬಯ್ಯಬಹುದು ಎಂದಲ್ಲ! ವಿಶೇಷವಾಗಿ ಆ ದಿನಗಳಷ್ಟೇ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳಲ್ಲಿ ಅವಾಚ್ಯ ಶಬ್ದಗಳಿಂದ ಬಯ್ಯಲೇಬಾರದು ಮತ್ತು ಅವರ ಮನಸ್ಸನ್ನು ಸಹ ನೋಯಿಸಬಾರದು.

10) ಹರಿದು ಹೋದ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ. ಒಂದು ವೇಳೆ ನೀವೇನಾದರೂ ಧರಿಸಿದರೆ ಮಾಟ ಮಂತ್ರ ದೃಷ್ಟಿಗಳ, ಪ್ರಯೋಗ ಮಾಡಿಸಿದ್ದರೆ ಅವುಗಳ ಪರಿಣಾಮ ಬೇಗ ನಿಮ್ಮ ಮೇಲಾಗುತ್ತದೆ.

11) ಕೈ ಮತ್ತು ಕಾಲುಗಳ ಉಗುರುಗಳನ್ನು ವಿಪರೀತ ಬೆಳೆಸಬೇಡಿ. ಅದು ದಾರಿದ್ರ್ಯದ ಸಂಕೇತವಾಗಿದೆ.

12) ಉಗುರುಗಳನ್ನು ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಕತ್ತರಿಸಬೇಡಿ. ಹಾಗೆಯೇ ಶುಕ್ರವಾರ, ಮಂಗಳವಾರ ಹಾಗೂ ಶನಿವಾರದ ದಿನ ಉಗುರುಗಳನ್ನು ಕತ್ತರಿಸಬಾರದು. ಕತ್ತರಿಸಿದ ಉಗುರುಗಳನ್ನು ಮನೆಯಲ್ಲಿ ಎಲ್ಲೆಂದರಲ್ಲಿ ಎಸೆಯಬಾರದು. ಹಾಲು ಚೆಲ್ಲಿದ್ದರೆ ತುಳಿದುಕೊಂಡು ಓಡಾಡಬೇಡಿ. ಒಂದು ವಸ್ತ್ರವನ್ನು ತೆಗೆದುಕೊಂಡು ಕೈಗಳಿಂದ ಸ್ವಚ್ಛಗೊಳಿಸಬೇಕು. ಕಾಲಿನಿಂದ ಒರೆಸಬಾರದು.

13) ಮನೆಯಲ್ಲಿ ಹೆಣ್ಣುಮಕ್ಕಳು ಕೆದರಿದ ಕೂದಲನ್ನು ಬಿಟ್ಟುಕೊಂಡು ಓಡಾಡಬಾರದು, ಕುಂಕುಮವಿಲ್ಲದ ಹಣೆ, ಕೆದರಿದ ಕೂದಲು, ಅರಿಶಿನ ಹಚ್ಚದ ಕೈ ಕಾಲುಗಳು ಮಹಿಳೆಯರಿಗೆ ಅಶುಭದ ಸಂಕೇತವಾಗಿವೆ.

14) ಮುಸ್ಸಂಜೆ ಮತ್ತು ಸೂರ್ಯಾಸ್ತದ ಬಳಿಕ ತಲೆಯ ಕೂದಲನ್ನು ಬಾಚಬಾರದು.

15) ಹಾಸಿಗೆ, ಸೋಫಾ, ಮಂಚದ ಮೇಲೆ ಕುಳಿತು ಧ್ಯಾನ ಪೂಜೆಗಳನ್ನು ಮಾಡಬೇಡಿ ಅಂತಹವು ಯಾವ ಫಲವನ್ನೂ ನೀಡುವುದಿಲ್ಲ. (ನಿತ್ಯಸತ್ಯ ಸತ್ಸಂಗ್ -ಸಂಗ್ರಹ)

(ಇಲ್ಲಿ ನೀಡಿರುವ ಮಾಹಿತಿಯು ಧಾರ್ಮಿಕ ಶ್ರದ್ಧಾಭಕ್ತಿಗೆ ಅನುಗುಣವಾಗಿ ಲೋಕಮಾನ್ಯ ರೀತಿಯಲ್ಲಿ ನೀಡಲಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ. ಜನಸಾಮಾನ್ಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಸ್ತುತ ಪಡಿಸಲಾಗಿದೆ)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ