AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara 2024 Date: ದಸರಾ ಹಬ್ಬ ಯಾವಾಗಿನಿಂದ ಆರಂಭವಾಗುತ್ತದೆ, ದಸರಾ ಆಚರಿಸುವುದು ಏಕೆ? ಇಲ್ಲಿದೆ ವಿವರ

Dasara 2024 Date: ದಸರಾ ಹಬ್ಬ - ಕೆಡುಕಿನ ಮೇಲೆ ಒಳಿತಿನ ವಿಜಯದ ಸಂಕೇತವಾಗಿ ಆಚರಿಸಲಾಗುವ ಹಬ್ಬ. ಹಿಂದೂ ಧರ್ಮದಲ್ಲಿ ದಸರಾ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ. ಈ ಹಬ್ಬವನ್ನು ದೇವಿ ನವರಾತ್ರಿ, ಶರನ್ನವರಾತ್ರಿ ಎಂದೂ ಕರೆಯುತ್ತಾರೆ. ಸೀತಾದೇವಿಯನ್ನು ಅಪಹರಿಸಿದ ರಾವಣನನ್ನು ಶ್ರೀರಾಮ ಯುದ್ಧದಲ್ಲಿ ಸೋಲಿಸಿದ ದಿನವೆಂದು ವಿಜಯೋತ್ಸವದ ಸಂಕೇತವಾಗಿ ಆಚರಿಸುತ್ತಾರೆ.

Dasara 2024 Date: ದಸರಾ ಹಬ್ಬ ಯಾವಾಗಿನಿಂದ ಆರಂಭವಾಗುತ್ತದೆ, ದಸರಾ ಆಚರಿಸುವುದು ಏಕೆ? ಇಲ್ಲಿದೆ ವಿವರ
Dasara 2024 Date: ದಸರಾ ಹಬ್ಬ ಯಾವಾಗಿನಿಂದ ಆರಂಭವಾಗುತ್ತದೆ
TV9 Web
| Updated By: ಸಾಧು ಶ್ರೀನಾಥ್​|

Updated on:Sep 26, 2024 | 6:02 PM

Share

Dasara 2024 Date: ದಸರಾ ಹಬ್ಬ – ಕೆಡುಕಿನ ಮೇಲೆ ಒಳಿತಿನ ವಿಜಯದ ಸಂಕೇತವಾಗಿ ಆಚರಿಸಲಾಗುವ ಹಬ್ಬ. ಹಿಂದೂ ಧರ್ಮದಲ್ಲಿ ದಸರಾ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ. ಈ ಹಬ್ಬವನ್ನು ದೇವಿ ನವರಾತ್ರಿ, ಶರನ್ನವರಾತ್ರಿ ಎಂದೂ ಕರೆಯುತ್ತಾರೆ. ಸೀತಾದೇವಿಯನ್ನು ಅಪಹರಿಸಿದ ರಾವಣನನ್ನು ಶ್ರೀರಾಮ ಯುದ್ಧದಲ್ಲಿ ಸೋಲಿಸಿದ ದಿನವೆಂದು ವಿಜಯೋತ್ಸವದ ಸಂಕೇತವಾಗಿ ಆಚರಿಸುತ್ತಾರೆ.

ದಸರಾ ಹಬ್ಬದ ದಿನಾಂಕ ಯಾವಾಗ?

2024 ರಲ್ಲಿ ಶುಕ್ಲ ಪಕ್ಷ ದಶಮಿ ತಿಥಿಯು ಅಕ್ಟೋಬರ್ 12 ರಂದು ಬೆಳಿಗ್ಗೆ 10.58 ಕ್ಕೆ ಪ್ರಾರಂಭವಾಗಿ ಅಕ್ಟೋಬರ್ 13 ರಂದು ಬೆಳಿಗ್ಗೆ 9.08 ಕ್ಕೆ ಕೊನೆಗೊಳ್ಳುತ್ತದೆ. ಅಂದರೆ ಅಕ್ಟೋಬರ್ 12 ರಂದು ವಿಜಯದಶಮಿ (ದಸರಾ) ಆಚರಿಸುತ್ತೇವೆ.

ಇದನ್ನೂ ಓದಿ: Significance of Navratri: ದಸರಾ 2024 – ಶಾರದೀಯ ನವರಾತ್ರಿ 2024 ಪ್ರಾರಂಭ ದಿನಾಂಕ, ಕಲಶ ಸ್ಥಾಪನಾ ಮುಹೂರ್ತದ ವಿವರ ತಿಳಿಯಿರಿ

ದಸರಾ ಏಕೆ ಆಚರಿಸಬೇಕು?

ಮರ್ಯಾದಾ ಪುರುಷೋತ್ತಮ ರಾಮನು ದುಷ್ಟ ರಾವಣನನ್ನು ಸಂಹಾರ ಮಾಡಿದ್ದಕ್ಕಾಗಿ ದಸರಾ ಹಬ್ಬವನ್ನು ಆಚರಿಸಲಾಗುತ್ತದೆ. ಪುರಾಣಗಳ ಪ್ರಕಾರ .. ಒಂಬತ್ತು ದಿನಗಳ ಯುದ್ಧದ ನಂತರ ದುರ್ಗಾ ದೇವಿಯು ವಿಜಯ ದಶಮಿಯಂದು ರಾಕ್ಷಸ ಮಹಿಷಾಸುರನನ್ನು ಕೊಂದಳು ಎಂದು ಹೇಳಲಾಗುತ್ತದೆ. ಅದಕ್ಕಾಗಿ ದಸರಾವನ್ನು ಶರನ್ನವರಾತ್ರಿ ಮತ್ತು ದೇವಿ ನವರಾತ್ರಿ ಎಂದೂ ಕರೆಯುತ್ತಾರೆ. 9 ದಿನಗಳ ಕಾಲ ದುರ್ಗಾ ಮಾತೆಯನ್ನು ವಿವಿಧ ರೂಪಗಳಲ್ಲಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ಸ್ವಯಂಭು ಪಾದರಸದಿಂದ ಮಾಡಿದ ಶಿವಲಿಂಗಕ್ಕೆ ಪೂಜೆ ಮಾಡುವುದು ಶ್ರೇಷ್ಠ, ಇದರಿಂದ ಸಿಗುತ್ತೆ ಸಾವಿರ ಪಟ್ಟು ಪುಣ್ಯ – ಪೂಜಿಸುವುದು ಹೇಗೆ?

ಮೈಸೂರು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಜಯದಶಮಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದಸರಾ ದಿನದಂದು ಶಮಿ ಪೂಜೆಯನ್ನು ಮಾಡಲಾಗುತ್ತದೆ. ವಿಜಯದಶಮಿ ಶುಭಾಶಯ ಕೋರಲು ಶಮಿ ಮರದ ಎಲೆಗಳನ್ನು ಚಿನ್ನದ ರೂಪದವೆಂದು ಪರಿಗಣಿಸಿ ವಿನಿಮಯ ಮಾಡಿಕೊಳ್ಳಲಾಗುತ್ತದೆ. ಬಂಗಾಳಿಗಳು ದುರ್ಗಾ ಪೂಜೆಯ ಹತ್ತನೇ ದಿನದಂದು ಬಿಜೋಯ್ ದಶಮಿಯನ್ನು ಆಚರಿಸುತ್ತಾರೆ. ಈ ಹಬ್ಬದಂದು ದುರ್ಗಾ ಮಾತೆಯ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನದಿಯಲ್ಲಿ ಮುಳುಗಿಸಲಾಗುತ್ತದೆ. ದಸರಾ ದಿನದಂದು ಶಮಿ ಪೂಜೆ, ಅಪರಾಜಿತ ಪೂಜೆ ಮಾಡಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

Published On - 3:04 am, Thu, 26 September 24

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ