AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DD National: ಪ್ರತಿದಿನ ದೂರದರ್ಶನದಲ್ಲಿ ಅಯೋಧ್ಯೆಯ ರಾಮನ ಆರತಿಯ ನೇರ ಪ್ರಸಾರ

ಅಯೋಧ್ಯೆಯಲ್ಲಿ ಇತ್ತೀಚೆಗೆ ರಾಮ ಮಂದಿರವನ್ನು ಉದ್ಘಾಟಿಸಿದ ಬಗ್ಗೆ ನಿಮೆಗೆಲ್ಲಾ ತಿಳಿದಿದೆ. ಈಗಗಾಲೇ ಲಕ್ಷಾಂತರ ಮಂದಿ ರಾಮನ ದರ್ಶನ ಪಡೆದಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ರಾಮನನ್ನು ನೋಡಿ ಖುಷಿ ಪಟ್ಟಿದ್ದಾರೆ. ಆದರೆ ರಾಮನ ಪ್ರತಿದಿನದ ಪೂಜೆ ನೋಡುವುದಕ್ಕೆ ಸಾಧ್ಯವಿರಲಿಲ್ಲ. ಆದರೆ ಇದೀಗ ಮನೆಯಲ್ಲಿಯೇ ಕುಳಿತು ರಾಮನ ದರ್ಶನ ಪಡೆಯಬಹುದಾಗಿದೆ. ಹೇಗೆ? ತಿಳಿದುಕೊಳ್ಳಿ.

DD National: ಪ್ರತಿದಿನ ದೂರದರ್ಶನದಲ್ಲಿ ಅಯೋಧ್ಯೆಯ ರಾಮನ ಆರತಿಯ ನೇರ ಪ್ರಸಾರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 12, 2024 | 2:50 PM

Share

ರಾಮನನ್ನು ಕಣ್ಣು ತುಂಬಿಕೊಳ್ಳುವ ಆಸೆ ಯಾರಿಗಿಲ್ಲಾ ಹೇಳಿ! ಪ್ರತಿಯೊಬ್ಬ ಹಿಂದೂವಿನ ಕನಸದು. ರಾಮ ಲಲ್ಲಾನ ದರ್ಶನ ಮಾಡುವ ಭಾಗ್ಯ ಒಮ್ಮೆ ಸಿಗಲಿ ಎಂದು ಬಯಸುತ್ತಾರೆ. ಇನ್ನು ಕೆಲವರಿಗೆ ಅಷ್ಟು ದೂರ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಮೊಬೈಲ್, ಅಥವಾ ಟಿವಿಗಳಲ್ಲಿ ರಾಮನ ದರ್ಶನ ಪಡೆಯುತ್ತಾರೆ. ಅದು ಕೂಡ ನಮಗೆ ಪ್ರತಿದಿನ ನೋಡಲು ಸಾಧ್ಯವಾಗುವುದಿಲ್ಲ. ಅಲ್ಲಿ ರಾಮನ ಪೂಜೆ ಹೇಗೆ ನಡೆಯುತ್ತದೆ? ಯಾರು ಮಾಡುತ್ತಾರೆ? ಇನ್ನು ಅನೇಕ ರೀತಿಯ ಪ್ರಶ್ನೆಗಳನ್ನು ಹೊತ್ತು ಕುಳಿತ ಅದೆಷ್ಟೋ ಜನರಿದ್ದಾರೆ. ಯುವಕ, ಯುವತಿಯರಿಗೆ ಅಲ್ಲಿಯ ವರೆಗೆ ಪ್ರಯಾಣ ಮಾಡಿ ಬರಬಹುದು. ಆದರೆ ಕೆಲವರಿಗೆ ಅಲ್ಲಿಯವರೆಗೆ ಹೋಗಲು ದೇಹ ಒಪ್ಪುವುದಿಲ್ಲ, ಇನ್ನು ಕೆಲವರಿಗೆ ಅಷ್ಟು ಅವಕಾಶವೂ ಇರುವುದಿಲ್ಲ. ಬಹುಷಃ ಇದೆಲ್ಲಾ ಗಮನದಲ್ಲಿಟ್ಟುಕೊಂಡ ಡಿಡಿ ನ್ಯಾಷನಲ್ ಇದಕ್ಕೆಲ್ಲಾ ಪರಿಹಾರ ಎಂಬಂತೆ ಒಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಏನಿರಬಹುದು ಎಂಬ ಪ್ರಶ್ನೆ ಮೂಡುತ್ತಿದೆಯಾ? ಇಲ್ಲಿದೆ ಉತ್ತರ.

ನಿಮಗೆಲ್ಲಾ ತಿಳಿದ ಹಾಗೇ ಡಿಡಿ ನ್ಯಾಷನಲ್ ನೀಡುವ ಕೆಲವು ಕಾರ್ಯಕ್ರಮಗಳಿಂದ ಮತ್ತು ಅದರ ವಿಭಿನ್ನ ಶೈಲಿಯಿಂದಾಗಿ ಮನೆಮಾತಾಗಿದೆ. ಇದು ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದು ವಿಷಯ ಏನೆಂದರೆ, ಅಯೋಧ್ಯೆಯಲ್ಲಿ ಇತ್ತೀಚೆಗೆ ರಾಮ ಮಂದಿರವನ್ನು ಉದ್ಘಾಟಿಸಿದ ಬಗ್ಗೆ ನಿಮೆಗೆಲ್ಲಾ ತಿಳಿದಿದೆ. ಈಗಗಾಲೇ ಲಕ್ಷಾಂತರ ಮಂದಿ ರಾಮನ ದರ್ಶನ ಪಡೆದಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ರಾಮನನ್ನು ನೋಡಿ ಖುಷಿ ಪಟ್ಟಿದ್ದಾರೆ. ಆದರೆ ರಾಮನ ಪ್ರತಿದಿನದ ಪೂಜೆ ನೋಡುವುದಕ್ಕೆ ಸಾಧ್ಯವಿರಲಿಲ್ಲ. ಆದರೆ ಇದೀಗ ದೇವರ ಆರತಿಯು ಡಿಡಿ ನ್ಯಾಷನಲ್ ನಲ್ಲಿ ಪ್ರತಿದಿನ ಬೆಳಿಗ್ಗೆ 6.30 ಕ್ಕೆ ನೇರ ಪ್ರಸಾರವಾಗಲಿದೆ ಎಂದು ಇದರ ಪ್ರಸಾರಕರು ತಿಳಿಸಿದ್ದಾರೆ.

ಇದನ್ನೂ ಓದಿ: 350 ವರ್ಷಗಳಿಂದ ಇಲ್ಲಿನ ಜನರು ಹೋಳಿ ಹಬ್ಬ ಆಚರಿಸಿಲ್ಲ! ಇದರ ಹಿಂದಿರುವ ಕಥೆಯೇನು?

ಇನ್ನು ಮುಂದೆ ಕುಳಿತಲ್ಲಿಯೇ ಭಗವಾನ್ ಶ್ರೀ ರಾಮ್ ಲಲ್ಲಾನ ದರ್ಶನವಾಗಲಿದ್ದು, ಅಯೋಧ್ಯೆಯ ದೇವಸ್ಥಾನದಿಂದ ಪ್ರತಿದಿನ ಬೆಳಿಗ್ಗೆ 6:30 ಕ್ಕೆ ಡಿಡಿ ನ್ಯಾಷನಲ್ (DDNational) ನಲ್ಲಿ ಮಾತ್ರ, ಆರತಿಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ” ಎಂದು ಸಾರ್ವಜನಿಕ ಪ್ರಸಾರಕರು ಸಾಮಾಜಿಕ ಮಾಧ್ಯಮದಲ್ಲಿ ಒಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.

ಭಗವಾನ್ ರಾಮನ ಪ್ರತಿಷ್ಠಾಪನೆಯ ನಂತರ, ಬೆಳಿಗ್ಗೆ ನೆರವೇರುವ ದೈನಂದಿನ ಆರತಿಯ ನೇರ ಪ್ರಸಾರಕ್ಕೆ ಅನುಮತಿ ಪಡೆಯಲು ಪ್ರಯತ್ನಿಸುತ್ತಿದ್ದೆವು. ಈಗ ಅನುಮೋದನೆ ಸಿಕ್ಕಿದ್ದು, ವಿವಿಧ ಕಾರಣಗಳಿಂದಾಗಿ ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗದ ಎಲ್ಲಾ ಭಕ್ತರು ಡಿಡಿ ನ್ಯಾಷನಲ್ ಮೂಲಕ ಭಗವಾನ್ ರಾಮನ ದರ್ಶನವನ್ನು ಪಡೆಯಬಹುದು” ಎಂದು ಪ್ರಸಾರಕ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದು ಪ್ರತಿಯೊಬ್ಬ ರಾಮ ಭಕ್ತನಿಗೂ ಖುಷಿಯ ವಿಚಾರವಾಗಿದ್ದು, ಪ್ರತಿದಿನ ಮನೆಯಲ್ಲಿಯೇ ಕುಳಿತು ರಾಮನ ದರ್ಶನ ಪಡೆಯುವ ಸೌಭಾಗ್ಯ ಸಿಗಲಿದೆ.

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ