AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Somvati Amavasya 2024: ದಾಂಪತ್ಯದಲ್ಲಿ ಸದಾಕಾಲ ಸಂತೋಷ ನೆಲೆಸಲು ವರ್ಷದ ಕೊನೆಯಲ್ಲಿ ಈ ರೀತಿ ಮಾಡಿ

ಪಂಚಾಂಗದ ಪ್ರಕಾರ, ಸೋಮವಾರ ಬರುವ ಸೋಮಾವತಿ ಅಮಾವಾಸ್ಯೆ ಅತ್ಯಂತ ಶುಭ ದಿನ. ಈ ದಿನ ಗಂಡ- ಹೆಂಡತಿ ಇಬ್ಬರೂ ಒಟ್ಟಿಗೆ ಅಶ್ವತ್ಥ ಮರಕ್ಕೆ ನೀರನ್ನು ಅರ್ಪಿಸುವುದರಿಂದ ದಾಂಪತ್ಯದಲ್ಲಿ ಸದಾಕಾಲ ಸಂತೋಷ ನೆಲೆಸುತ್ತದೆ ಎಂದು ನಂಬಲಾಗಿದೆ. ಇದಲ್ಲದೇ ಕಾಲಸರ್ಪ ದೋಷ ನಿವಾರಣೆಗೂ ಇದು ಸೂಕ್ತ ಸಮಯ.

Somvati Amavasya 2024: ದಾಂಪತ್ಯದಲ್ಲಿ ಸದಾಕಾಲ ಸಂತೋಷ ನೆಲೆಸಲು ವರ್ಷದ ಕೊನೆಯಲ್ಲಿ ಈ ರೀತಿ ಮಾಡಿ
Somavati Amavasya
ಅಕ್ಷತಾ ವರ್ಕಾಡಿ
|

Updated on:Dec 01, 2024 | 5:58 PM

Share

ಪಂಚಾಂಗದ ಪ್ರಕಾರ, ಸೋಮಾವತಿ ಅಮಾವಾಸ್ಯೆಯು ಸೋಮವಾರದಂದು ಬರುವ ವಿಶಿಷ್ಟ ಅಮಾವಾಸ್ಯೆಯಾಗಿದೆ. ಆಧ್ಯಾತ್ಮಿಕ ವಿಧಿಗಳು ಮತ್ತು ಸಮಾರಂಭಗಳಿಗೆ, ಸೋಮವಾರ ಮತ್ತು ಚಂದ್ರನ ಈ ಸಂಯೋಗವನ್ನು ಸಾಕಷ್ಟು ಅದೃಷ್ಟವೆಂದು ಪರಿಗಣಿಸಲಾಗುತ್ತದೆ. ಸೋಮಾವತಿ ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಪತಿ ದೀರ್ಘಾಯುಷ್ಯ, ಮಕ್ಕಳ ಸಂತತಿ ಮತ್ತು ಪೂರ್ವಜರ ಆಶೀರ್ವಾದಂತಹ ಸಾಕಷ್ಟು ಲಾಭಗಳನ್ನು ಪಡೆಯಬಹುದು.

ಸೋಮಾವತಿ ಅಮಾವಾಸ್ಯೆಯಂದು ಪೂರ್ವಜರ ಶ್ರಾದ್ಧ, ತರ್ಪಣ ಮತ್ತು ಪಿಂಡ ದಾನ ಮಾಡಿದರೆ, ಜೀವನದಲ್ಲಿ ಎಲ್ಲಾ ದುಃಖಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ. ಡಿಸೆಂಬರ್ 2024 ರಲ್ಲಿ ಸೋಮವತಿ ಅಮವಾಸ್ಯೆ ಯಾವಾಗ ಬರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸೋಮಾವತಿ ಅಮವಾಸ್ಯೆ ಯಾವಾಗ?

ವರ್ಷದ ಕೊನೆಯ ಸೋಮಾವತಿ ಅಮವಾಸ್ಯೆ ಡಿಸೆಂಬರ್ 30 ರಂದು ಬರುತ್ತದೆ. ಈ ದಿನ ಪೂರ್ವಜರ ಆತ್ಮದ ತೃಪ್ತಿಗಾಗಿ ಶ್ರಾದ್ಧ ಆಚರಣೆಗಳನ್ನು ಮಾಡಲು ಮತ್ತು ಕಲಸರ್ಪ ದೋಷ ನಿವಾರಣೆಗೆ ಸೂಕ್ತವಾಗಿದೆ.

ವರ್ಷದ ಕೊನೆಯ ಸೋಮಾವತಿ ಅಮವಾಸ್ಯೆಯ ಮುಹೂರ್ತ:

ಪೌಷ ಅಮಾವಾಸ್ಯೆ ತಿಥಿಯು 30ನೇ ಡಿಸೆಂಬರ್ ಬೆಳಿಗ್ಗೆ 04:01 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮರುದಿನ 31ನೇ ಡಿಸೆಂಬರ್ 03:56 ಕ್ಕೆ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: ಡಿಸೆಂಬರ್‌ ತಿಂಗಳಿನಲ್ಲಿ ಆಚರಿಸಲಾಗುವ ಹಬ್ಬಗಳು ಯಾವುವು? ಇಲ್ಲಿದೆ ಮಾಹಿತಿ

ಸೋಮಾವತಿ ಅಮಾವಾಸ್ಯೆ ಏಕೆ ವಿಶೇಷ?

ಸೋಮಾವತಿ ಅಮಾವಾಸ್ಯೆಯ ದಿನದಂದು ಶನಿಯು ಕಾಲಸರ್ಪ ದೋಷದಿಂದ ಮುಕ್ತಿ ಪಡೆಯಲು ಅತ್ಯಂತ ವಿಶೇಷವಾಗಿದೆ. ಶನಿಯ ಸಾಡೆ ಸತಿ ಮತ್ತು ಧೈಯ ದುಷ್ಪರಿಣಾಮಗಳನ್ನು ತಪ್ಪಿಸಲು, ಸೋಮಾವತಿ ಅಮಾವಾಸ್ಯೆಯಂದು ಶನಿ ದೇವರಿಗೆ ಸಾಸಿವೆ ಎಣ್ಣೆಯನ್ನು ಅರ್ಪಿಸಿ.

ಈ ದಿನ, ವೈವಾಹಿಕ ಜೀವನಕ್ಕಾಗಿ, ಪತಿ ಮತ್ತು ಹೆಂಡತಿ ಇಬ್ಬರೂ ಒಟ್ಟಿಗೆ ಅಶ್ವತ್ಥ ಮರಕ್ಕೆ ನೀರನ್ನು ಅರ್ಪಿಸಬೇಕು. ಅಲ್ಲದೆ, ‘ಓಂ ಪಿತೃಭ್ಯ: ನಮಃ’ ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸಿ. ಇದರಿಂದ ಪತಿ-ಪತ್ನಿಯರ ಸಂಬಂಧ ಉತ್ತಮವಾಗಿರುತ್ತವೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:55 pm, Sun, 1 December 24

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು